AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಸಂಪ್ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರ ಸಾವು, ಹೊಟ್ಟೆಪಾಡಿಗಾಗಿ ಬೆಂಗ್ಳೂರಿಗೆ ಬಂದಿದ್ದ ಸಹೋದರರು ದುರಂತ ಅಂತ್ಯ

ಸಹೋದರರಿಬ್ಬರು ಹೊಟ್ಟೆ ಪಾಡಿಗಾಗಿ ದೂರದ ಬಿಹಾರದಿಂದ ಬೆಂಗಳೂರಿಗೆ ಬಂದಿದ್ದಾರೆ. ಆದ್ರೆ, ನೀರಿನ ಸಂಪ್ ಸ್ವಚ್ಛ ಮಾಡುವಾಗ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ತುತ್ತಿನ ಚೀಲ ತುಂಬಿಸುಕೊಳ್ಳುವುದಕ್ಕೆ ಬಂದಿದ್ದ ಸಹೋದರರು ಇದೀಗ ಒಟ್ಟಿಗೆ ದುರಂತ ಅಂತ್ಯಕಂಡಿದ್ದಾರೆ.

ನೀರಿನ ಸಂಪ್ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರ ಸಾವು, ಹೊಟ್ಟೆಪಾಡಿಗಾಗಿ ಬೆಂಗ್ಳೂರಿಗೆ ಬಂದಿದ್ದ ಸಹೋದರರು ದುರಂತ ಅಂತ್ಯ
ನೀರಿನ ಸಂಪ್
ರಾಮು, ಆನೇಕಲ್​
| Edited By: |

Updated on: Nov 23, 2023 | 10:56 AM

Share

ಆನೇಕಲ್(ಬೆಂಗಳೂರು), (ನವೆಂಬರ್ 23): ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಮೃತಪಟ್ಟ ಘಟನೆ ಬೆಂಗಳೂರಿನ (Bengaluru)ಆನೇಕಲ್ ತಾಲೂಕಿನ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ. ಇದೇ ವೇಳೆ ಕಾರ್ಮಿಕರನ್ನು ರಕ್ಷಣೆ ಮಾಡಲು ಹೋಗಿ ಅಸ್ವಸ್ಥಗೊಂಡ ಕಂಪನಿ ಮಾಲೀಕ ಹಾಗೂ ಮತ್ತೊಬ್ಬ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಹಾರ ಮೂಲದ ಕಾರ್ಮಿಕರಾದ ಚಂದನ್ ರಜ್ ಬನ್ ಸಿಂಗ್(31), ಪಿಂಟು ರಜ್ ಬನ್ ಸಿಂಗ್(22) ಮೃತರು. ಶ್ರೀನಿವಾಸ್ ರೆಡ್ಡಿ ಎಂಬುವವರ ಸನ್ ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ದುರ್ಘಟನೆ ನಡೆದಿದೆ. ಸಂಜೆ ಸಂಪ್‌ನಲ್ಲಿ ಕ್ಲೀನ್‌ ಮಾಡಲು ಕಾರ್ಮಿಕರು ಇಳಿದಿದ್ದರು. ಆ್ಯಸಿಡ್ ಹಾಕಿ ಸ್ವಚ್ಛಗೊಳಿಸುತ್ತಿದ್ದಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತರು ಸಹೋದರರಾಗಿದ್ದು, ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಇವರನ್ನು ಉಳಿಸಲು ಮುಂದಾಗಿದ್ದ ಜಗದೀಶ್ ಹಾಗೂ ಮಾಲೀಕ ಶ್ರೀನಿವಾಸ್ ರೆಡ್ಡಿ ಅಸ್ವಸ್ಥಗೊಂಡಿದ್ದು, ಸದ್ಯ ಅವರನ್ನು ಜಿಗಣಿ ವಿಜಯಶ್ರೀ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್