AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಕ್ಯಾಂಟರ್​​ ಡಿಕ್ಕಿಯಾಗಿ ​ಇಬ್ಬರು ಬೈಕ್ ಸವಾರರು ಸಾವು

ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಂಜನಾನಗರ ಬಸ್ ನಿಲ್ದಾಣ ಬಳಿ ಪಲ್ಸರ್ ಬೈಕ್​ನಲ್ಲಿ ಹೋಗುತ್ತಿದ್ದ ಯುವಕರು ಹಿಂಬದಿಯಿಂದ ಕ್ಯಾಂಟರ್​ಗೆ ಗುದ್ದಿದ್ದಾರೆ.

ಬೆಂಗಳೂರಲ್ಲಿ ಕ್ಯಾಂಟರ್​​ ಡಿಕ್ಕಿಯಾಗಿ ​ಇಬ್ಬರು ಬೈಕ್ ಸವಾರರು ಸಾವು
ರವಿ
TV9 Web
| Edited By: |

Updated on:Jan 17, 2023 | 12:58 PM

Share

ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್​​ ನಡುವೆ ಡಿಕ್ಕಿ ಸಂಭವಿಸಿ ​ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಅಂಜನಾನಗರ ಬಸ್​​ ನಿಲ್ದಾಣದ ಬಳಿ ನಡೆದಿದೆ. ರವಿ(22), ವಿಕಾಸ್(20) ಮೃತ ಬೈಕ್ ಸವಾರರು. ನಿನ್ನೆ ರಾತ್ರಿ 8 ಗಂಟೆಗೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಂಜನಾನಗರ ಬಸ್ ನಿಲ್ದಾಣ ಬಳಿ ಪಲ್ಸರ್ ಬೈಕ್​ನಲ್ಲಿ ಹೋಗುತ್ತಿದ್ದ ಯುವಕರು ಹಿಂಬದಿಯಿಂದ ಕ್ಯಾಂಟರ್​ಗೆ ಗುದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಯುವಕರು ಕೆಳಗೆ ಬಿದ್ದಿದ್ದು ಯುವಕರ ಮೇಲೆ ಕ್ಯಾಂಟರ್​ ಹರಿದಿದೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ತೀವ್ರ ರಕ್ತಸ್ರಾವವಾಗಿ ಯುವಕರು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಂಡನ್ ಮೆಟ್ರೋಪಾಲಿಟನ್ ವ್ಯವಸ್ಥೆಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ಡೇವಿಡ್ ಕ್ಯಾರಿಕ್ ವಿರುದ್ಧ 45ಕ್ಕೂ ಹೆಚ್ಚು ಲೈಂಗಿಕ ಅತ್ಯಾಚಾರದ ಪ್ರಕರಣಗಳು!

ಬೈಕ್ ಮತ್ತು ಬೊಲೇರೋ ವಾಹನದ ನಡುವೆ ಅಪಘಾತ ಸವಾರ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮುಂಡಾರದಲ್ಲಿ ಬೊಲೆರೋ ವಾಹನ-ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್​ನಲ್ಲಿದ್ದ ಹಳಗೇರಿ ನಿವಾಸಿ ಸುಬ್ರಹ್ಮಣ್ಯ ರಾಮಗೌಡ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಬಳಿಕ ಬೊಲೆರೋ ವಾಹನ ಚಾಲಕ ಪರಾರಿಯಾಗಿದ್ದು ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆರೆಯಲ್ಲಿ ಗೃಹಿಣಿ ಶವ ಪತ್ತೆ

ಮೈಸೂರು: ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದ ಕೆರೆಯಲ್ಲಿ ಭಾಗ್ಯ ಎಂಬ ಗೃಹಿಣಿ ಶವ ಪತ್ತೆಯಾಗಿದೆ. ಪತಿ ಶಂಕರ್, ಅತ್ತೆ ಸಿದ್ದಮ್ಮ, ಅತ್ತಿಗೆ ನೀಲ, ಅತ್ತಿಗೆ ಗಂಡ ಸಿದ್ದಪ್ಪ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮೃತ ಭಾಗ್ಯ ಪೋಷಕರು ತಲಕಾಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

15 ವರ್ಷದ ಹಿಂದೆ ಶಂಕರ್ ಜೊತೆ ಭಾಗ್ಯ ವಿವಾಹವಾಗಿತ್ತು. ಮದುವೆಯಾದ ದಿನದಿಂದ ಭಾಗ್ಯಗೆ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ರಾಜಿ ಪಂಚಾಯತಿ ಮಾಡಲಾಗಿತ್ತು. ಆದರೂ ಭಾಗ್ಯಳಿಗೆ ಮಾನಸಿಕ ದೈಹಿಕ ಕಿರುಕುಳ‌ ನೀಡಿದ್ದಾರಂತೆ. ಸದ್ಯ ಎಲ್ಲಾ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

ಕಲಬುರಗಿಯಲ್ಲಿ ಗುಂಡಿನ ದಾಳಿ ನಡೆಸಿದ್ದ ಆರೋಪಿ ಅರೆಸ್ಟ್

ಕಲಬುರಗಿ ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿ ನಗರದ ಸಬ್​ ಅರ್ಬನ್ ಠಾಣೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದ ಆರೋಪಿ ಬಸಯ್ಯ ಗುತ್ತೇದಾರ್​ನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಆರೋಪಿ ಬಸಯ್ಯನನ್ನು ಪೊಲೀಸರು ಬಂಧಿಸಇದ್ದಾರೆ. ಜಾಗದ ವಿಚಾರವಾಗಿ ಗಲಾಟೆ ವೇಳೆ ಆರೋಪಿ ಬಸಯ್ಯ ಜ.7ರಂದು ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ದಾಳಿ ವೇಳೆ ಚನ್ನವೀರ ಪಾಟೀಲ್, ಅಬೂಬಕರ್​​​ ಗಾಯಗೊಂಡಿದ್ದರು. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಬಸಯ್ಯ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:56 am, Tue, 17 January 23

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!