Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಕ್ಯಾಂಟರ್​​ ಡಿಕ್ಕಿಯಾಗಿ ​ಇಬ್ಬರು ಬೈಕ್ ಸವಾರರು ಸಾವು

ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಂಜನಾನಗರ ಬಸ್ ನಿಲ್ದಾಣ ಬಳಿ ಪಲ್ಸರ್ ಬೈಕ್​ನಲ್ಲಿ ಹೋಗುತ್ತಿದ್ದ ಯುವಕರು ಹಿಂಬದಿಯಿಂದ ಕ್ಯಾಂಟರ್​ಗೆ ಗುದ್ದಿದ್ದಾರೆ.

ಬೆಂಗಳೂರಲ್ಲಿ ಕ್ಯಾಂಟರ್​​ ಡಿಕ್ಕಿಯಾಗಿ ​ಇಬ್ಬರು ಬೈಕ್ ಸವಾರರು ಸಾವು
ರವಿ
Follow us
TV9 Web
| Updated By: ಆಯೇಷಾ ಬಾನು

Updated on:Jan 17, 2023 | 12:58 PM

ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್​​ ನಡುವೆ ಡಿಕ್ಕಿ ಸಂಭವಿಸಿ ​ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಅಂಜನಾನಗರ ಬಸ್​​ ನಿಲ್ದಾಣದ ಬಳಿ ನಡೆದಿದೆ. ರವಿ(22), ವಿಕಾಸ್(20) ಮೃತ ಬೈಕ್ ಸವಾರರು. ನಿನ್ನೆ ರಾತ್ರಿ 8 ಗಂಟೆಗೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಂಜನಾನಗರ ಬಸ್ ನಿಲ್ದಾಣ ಬಳಿ ಪಲ್ಸರ್ ಬೈಕ್​ನಲ್ಲಿ ಹೋಗುತ್ತಿದ್ದ ಯುವಕರು ಹಿಂಬದಿಯಿಂದ ಕ್ಯಾಂಟರ್​ಗೆ ಗುದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಯುವಕರು ಕೆಳಗೆ ಬಿದ್ದಿದ್ದು ಯುವಕರ ಮೇಲೆ ಕ್ಯಾಂಟರ್​ ಹರಿದಿದೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ತೀವ್ರ ರಕ್ತಸ್ರಾವವಾಗಿ ಯುವಕರು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಂಡನ್ ಮೆಟ್ರೋಪಾಲಿಟನ್ ವ್ಯವಸ್ಥೆಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ಡೇವಿಡ್ ಕ್ಯಾರಿಕ್ ವಿರುದ್ಧ 45ಕ್ಕೂ ಹೆಚ್ಚು ಲೈಂಗಿಕ ಅತ್ಯಾಚಾರದ ಪ್ರಕರಣಗಳು!

ಬೈಕ್ ಮತ್ತು ಬೊಲೇರೋ ವಾಹನದ ನಡುವೆ ಅಪಘಾತ ಸವಾರ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮುಂಡಾರದಲ್ಲಿ ಬೊಲೆರೋ ವಾಹನ-ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್​ನಲ್ಲಿದ್ದ ಹಳಗೇರಿ ನಿವಾಸಿ ಸುಬ್ರಹ್ಮಣ್ಯ ರಾಮಗೌಡ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಬಳಿಕ ಬೊಲೆರೋ ವಾಹನ ಚಾಲಕ ಪರಾರಿಯಾಗಿದ್ದು ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆರೆಯಲ್ಲಿ ಗೃಹಿಣಿ ಶವ ಪತ್ತೆ

ಮೈಸೂರು: ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದ ಕೆರೆಯಲ್ಲಿ ಭಾಗ್ಯ ಎಂಬ ಗೃಹಿಣಿ ಶವ ಪತ್ತೆಯಾಗಿದೆ. ಪತಿ ಶಂಕರ್, ಅತ್ತೆ ಸಿದ್ದಮ್ಮ, ಅತ್ತಿಗೆ ನೀಲ, ಅತ್ತಿಗೆ ಗಂಡ ಸಿದ್ದಪ್ಪ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮೃತ ಭಾಗ್ಯ ಪೋಷಕರು ತಲಕಾಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

15 ವರ್ಷದ ಹಿಂದೆ ಶಂಕರ್ ಜೊತೆ ಭಾಗ್ಯ ವಿವಾಹವಾಗಿತ್ತು. ಮದುವೆಯಾದ ದಿನದಿಂದ ಭಾಗ್ಯಗೆ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ರಾಜಿ ಪಂಚಾಯತಿ ಮಾಡಲಾಗಿತ್ತು. ಆದರೂ ಭಾಗ್ಯಳಿಗೆ ಮಾನಸಿಕ ದೈಹಿಕ ಕಿರುಕುಳ‌ ನೀಡಿದ್ದಾರಂತೆ. ಸದ್ಯ ಎಲ್ಲಾ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

ಕಲಬುರಗಿಯಲ್ಲಿ ಗುಂಡಿನ ದಾಳಿ ನಡೆಸಿದ್ದ ಆರೋಪಿ ಅರೆಸ್ಟ್

ಕಲಬುರಗಿ ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿ ನಗರದ ಸಬ್​ ಅರ್ಬನ್ ಠಾಣೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದ ಆರೋಪಿ ಬಸಯ್ಯ ಗುತ್ತೇದಾರ್​ನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಆರೋಪಿ ಬಸಯ್ಯನನ್ನು ಪೊಲೀಸರು ಬಂಧಿಸಇದ್ದಾರೆ. ಜಾಗದ ವಿಚಾರವಾಗಿ ಗಲಾಟೆ ವೇಳೆ ಆರೋಪಿ ಬಸಯ್ಯ ಜ.7ರಂದು ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ದಾಳಿ ವೇಳೆ ಚನ್ನವೀರ ಪಾಟೀಲ್, ಅಬೂಬಕರ್​​​ ಗಾಯಗೊಂಡಿದ್ದರು. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಬಸಯ್ಯ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:56 am, Tue, 17 January 23

ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ