AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬೈಕ್​ ಸವಾರರ ದುರ್ಮರಣ

ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬೈಕ್​ ಸವಾರರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ನಡೆದಿದೆ. ಮಂಗಮ್ಮನಪಾಳ್ಯ ವಾಸಿ ಮಂಜಪ್ಪ(32) ಸೇರಿ ಇಬ್ಬರು ಮೃತ ರ್ದುದೈವಿಗಳು.

Bengaluru News: ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬೈಕ್​ ಸವಾರರ ದುರ್ಮರಣ
ಆನೇಕಲ್​
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Jul 14, 2023 | 11:21 AM

Share

ಬೆಂಗಳೂರು ನಗರ, ಜುಲೈ 14: ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬೈಕ್​ ಸವಾರರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಆನೇಕಲ್(Anekal) ತಾಲೂಕಿನ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ನಡೆದಿದೆ. ಮಂಗಮ್ಮನಪಾಳ್ಯ ವಾಸಿ ಮಂಜಪ್ಪ(32) ಸೇರಿ ಇಬ್ಬರು ಮೃತ ರ್ದುದೈವಿಗಳು. ಮತ್ತೊಬ್ಬ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಇವರಿಬ್ಬರು ಬೈಕ್​ ಮೇಲೆ ತೆರಳುವಾಗ ಹಿಂಬದಿಯಿಂದ ಬಂದ ಅಪರಿಚಿತ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸಾವು, ಇಬ್ಬರಿಗೆ ಗಾಯ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಕೆಂಗಲ್​​​​ ಕೆಂಪೊಹಳ್ಳಿ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಇಬ್ಬರಿಗೆ ಗಾಯಗಳಾಗಿದ್ದು, ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಬೈಕ್ ಸವಾರನ ಗುರುತು ಇನ್ನೂ ಪತ್ತೆಯಾಗಿಲ್ಲ. ಮತ್ತೊಂದು ಬೈಕ್​ನಲ್ಲಿದ್ದ ಗಾಯಾಳು ಸುನೀಲ್ ಕುಮಾರ್, ಶಿವಪ್ರಸಾದ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಈ ಕುರಿತು ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಆನೇಕಲ್​ನಲ್ಲಿ ಸೂತಕದ ಛಾಯೆ: ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ಟ್ರಾಫಿಕ್ ಪೊಲೀಸರ ಜತೆ ಆಟೋ ಚಾಲಕರ ವಾಗ್ವಾದ

ಚಿತ್ರದುರ್ಗದಲ್ಲಿ ಟ್ರಾಫಿಕ್ ಪೊಲೀಸರ ಜತೆ ಆಟೋ ಚಾಲಕರ ವಾಗ್ವಾದ ನಡೆದಿದೆ. ‘ಖಾಕಿ ಶರ್ಟ್ ಧರಿಸಬೇಕೆಂಬ ನಿಯಮವೇ ಇಲ್ಲ’ ಎಂಬ ವಿಚಾರವಾಗಿ ಗಲಾಟೆ ಶುರುವಾಗಿದ್ದು, ಬರೀ ದಂಡ ಬರಿಯುವುದೇ ಪೊಲೀಸರ ಕೆಲಸವೇ?’ ಎಂದು ಆಟೋ ಚಾಲಕರು ಕಿಡಿಕಾರಿದ್ದಾರೆ. ಈ ವೇಳೆ ಆಟೋ ಚಾಲಕರಾದ ಸಿದ್ದು, ಚಂದ್ರಪ್ಪ ‘ನಿಮ್ಮ ಸರ್ಕಾರ ನಮಗೇನು ಅನುಕೂಲ ಮಾಡಿದೆ’. ಆಟೋ ಬಿಟ್ಟರೆ ನಾನು ಚಪ್ಪಲಿ ಹೊಲೆದು ಸಂಪಾದಿಸುವೆ’ ನೀವು ಮಾಡ್ತೀರಾ ಎಂದು ಪೊಲೀಸರಿಗೆ ಆವಾಜ್ ಹಾಕಿದ್ದಾರೆ. ಈ ಮೂಲಕ ಪ್ರತಿದಿನ ಆಟೋ ಚಾಲಕರ ಜತೆ ವಾಗ್ವಾದದಿಂದ ಪೊಲೀಸರು ಹೈರಾಣಾಗಿದ್ದಾರೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Fri, 14 July 23

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು