AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ ಚಾಕಲೇಟ್​ಗೆ ದುಡ್ಡು ಕೊಡಲಿಲ್ಲ ಎಂದು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು; ಪೋಷಕರು ಕಂಗಾಲು, 2 ದಿನದ ಬಳಿಕ ಪತ್ತೆ

ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉಚಿತ ಬಸ್ ಸೇವೆ ಯೋಜನೆ ಪೋಷಕರಿಗೆ ಸಂಕಷ್ಟ ತಂದಿತ್ತು. ಪೊಲೀಸರಿಗೆ ಪೀಕಲಾಟವಾಗಿತ್ತು. ತಂದೆ ಚಾಕಲೇಟ್​ಗೆ ಹಣ ಕೊಡದಿದ್ದಕ್ಕೆ 10 ಮತ್ತು 9 ನೇ ತರಗತಿ ಓದುತ್ತಿದ್ದ ಇಬ್ಬರು ಪುತ್ರಿಯರು ಮನೆ ಬಿಟ್ಟು ಹೋಗಿದ್ದಾರೆ.

ಅಪ್ಪ ಚಾಕಲೇಟ್​ಗೆ ದುಡ್ಡು ಕೊಡಲಿಲ್ಲ ಎಂದು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು; ಪೋಷಕರು ಕಂಗಾಲು, 2 ದಿನದ ಬಳಿಕ ಪತ್ತೆ
ಧರ್ಮಸ್ಥಳ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 19, 2023 | 7:13 AM

Share

ಬೆಂಗಳೂರು: ಕಾಂಗ್ರೆಸ್​ನ ಶಕ್ತಿ ಯೋಜನೆ(Shakti Yojana) ಘೋಷಣೆಯಾಗುತ್ತಿದ್ದಂತೆ ನಾರಿ ಶಕ್ತಿಗಳೆಲ್ಲ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಉಚಿತ ಬಸ್ ಸೇವೆ(Free Bus Travel For Women Scheme) ಎಂದು ರಾಜ್ಯದ ನಾನಾ ಕಡೆಗಳಿಗೆ ಪ್ರವಾಸ ತೆರಳುತ್ತಿದ್ದಾರೆ. ಕಾಂಗ್ರೆಸ್​ನ(Congress) ಈ ಯೋಜನೆ ಕೆಲವರಿಗೆ ಅನುಕೂಲವಾದ್ರೆ ಮತ್ತಷ್ಟು ಜನರಿಗೆ ಸಂಕಟ ತಂದಿದೆ. ಹೆಂಡತಿ ಮನೆಯಲ್ಲಿರುತ್ತಿಲ್ಲ, ಅಡುಗೆ ಮಾಡುತ್ತಿಲ್ಲ, ಬಸ್​ಗಳಲ್ಲಿ ನಮಗೆ ಸೀಟು ಸಿಗುತ್ತಿಲ್ಲ ಎಂದು ಕೆಲ ಪುರುಷರು ಬೇಸರ ಹೊರ ಹಾಕಿದ್ರೆ, ಮತ್ತೊಂದೆಡೆ ತನ್ನ ಮಕ್ಕಳು ನಾಪತ್ತೆಯಾಗಿದ್ದಾರೆ(Children Missing) ಎಂದು ಪೋಷಕರೊಬ್ಬರು ಕಣ್ಣೀರು ಹಾಕಿದ ಘಟನೆ ನಡೆದಿದೆ.

ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉಚಿತ ಬಸ್ ಸೇವೆ ಯೋಜನೆ ಪೋಷಕರಿಗೆ ಸಂಕಷ್ಟ ತಂದಿತ್ತು. ಪೊಲೀಸರಿಗೆ ಪೀಕಲಾಟವಾಗಿತ್ತು. ಅದು ಹೇಗಂದ್ರೆ ತಂದೆ ಚಾಕಲೇಟ್​ಗೆ ಹಣ ಕೊಡದಿದ್ದಕ್ಕೆ 10 ಮತ್ತು 9 ನೇ ತರಗತಿ ಓದುತ್ತಿದ್ದ ಇಬ್ಬರು ಪುತ್ರಿಯರು ಮನೆ ಬಿಟ್ಟು ಹೋಗಿದ್ದಾರೆ. ಇಬ್ಬರು‌ ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದು ಮಕ್ಕಳು ಕಾಣುತ್ತಿಲ್ಲ ಎಂದು ಪೋಷಕರು ಕಕ್ಕಾಬಿಕ್ಕಿಯಾಗಿದ್ದಾರೆ. ತಂದೆ-ತಾಯಿ ಮೇಲಿನ ಕೋಪಕ್ಕೆ ಈ ಹೆಣ್ಣು ಮಕ್ಕಳು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನ ‘ಶಕ್ತಿ’ ಜನರನ್ನ ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ: ಶಕ್ತಿ ಯೋಜನೆ ಯಶಸ್ಸಿನ ಬಗ್ಗೆ ಪ್ರಿಯಾಂಕ್ ಖರ್ಗೆ ಮಾತು

ಹೌದು ಅಕ್ಕ-ತಂಗಿಯರಿಬ್ಬರು ತಂದೆಗೆ ಚಾಕಲೇಟ್​ಗೆ ಹಣ ಕೊಡುವಂತೆ ಕೇಳಿದ್ದಾರೆ. ತಂದೆ ಹಣ ಕೊಡದೆ ಮಕ್ಕಳ ಮೇಲೆ ರೇಗಾಡಿದ್ದಾರೆ. ಇದರಿಂದ ಕೋಪಗೊಂಡ ಇಬ್ಬರು ಪುತ್ರಿಯರು ಬಸ್ ಹತ್ತಿ ಫ್ರೀಯಾಗಿ ಧರ್ಮಸ್ಥಳಕ್ಕೆ ಪ್ರಯಾಣಿಸಿದ್ದಾರೆ. ಕೋಣನಕುಂಟೆಯಿಂದ ಧರ್ಮಸ್ಥಳಕ್ಕೆ ಹೋಗಿದ್ದಾರೆ.

ಈ ವಿಚಾರ ತಿಳಿಯದ ಪೋಷಕರು ಭಯಭೀತರಾಗಿ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸಹೋದರಿಯರ ಹುಡುಕಾಟ ನಡೆಸಿದ ಪೊಲೀಸರು, ಮಕ್ಕಳು ನಾಪತ್ತೆಯಾದ ಎರಡು‌ ದಿನದ ಬಳಿಕ ಅಂದ್ರೆ ಜೂನ್ 18 ರಂದು ಧರ್ಮಸ್ಥಳದಲ್ಲಿ ಸಹೋದರಿಯರಿಬ್ಬರನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಮಕ್ಕಳ ಪತ್ತೆಯಿಂದ ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:12 am, Mon, 19 June 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ