AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಠೀರವ ಸ್ಟುಡಿಯೋ ಬಳಿ ಭೀಕರ ಅಪಘಾತ; ಕ್ಯಾಂಟರ್‌ಗೆ ಹಿಂದಿನಿಂದ ದ್ವಿಚಕ್ರವಾಹನ ಡಿಕ್ಕಿ, ಇಬ್ಬರ ಸಾವು

ರಾಜ್ ಕುಮಾರ್ ಸಮಾದಿ ಬಳಿಯ ರಸ್ತೆಯಲ್ಲಿ ತಡರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ಲಗ್ಗೇರೆ ಕಡೆಯಿಂದ ಗೊರಗುಂಟೆ ಪಾಳ್ಯ ಕಡೆಗೆ ತೆರಳುತಿದ್ದಾಗ ಅಪಘಾತ ನಡೆದಿದೆ. ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಸ್ಕೂಟರ್ ನಲ್ಲಿ ತೆರಳುತಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಕಂಠೀರವ ಸ್ಟುಡಿಯೋ ಬಳಿ ಭೀಕರ ಅಪಘಾತ; ಕ್ಯಾಂಟರ್‌ಗೆ ಹಿಂದಿನಿಂದ ದ್ವಿಚಕ್ರವಾಹನ ಡಿಕ್ಕಿ, ಇಬ್ಬರ ಸಾವು
ಕಂಠೀರವ ಸ್ಟುಡಿಯೋ ಬಳಿ ಭೀಕರ ಅಪಘಾತ; ಕ್ಯಾಂಟರ್‌ಗೆ ಹಿಂದಿನಿಂದ ದ್ವಿಚಕ್ರವಾಹನ ಡಿಕ್ಕಿ, ಇಬ್ಬರ ಸಾವು
TV9 Web
| Edited By: |

Updated on:Jan 24, 2022 | 11:37 AM

Share

ಬೆಂಗಳೂರು: ನಗರದ ಕಂಠೀರವ ಸ್ಟುಡಿಯೋ ಬಳಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಕ್ಯಾಂಟರ್‌ಗೆ ಹಿಂದಿನಿಂದ ದ್ವಿಚಕ್ರವಾಹನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಚಲಿಸುತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.

ರಾಜ್ ಕುಮಾರ್ ಸಮಾದಿ ಬಳಿಯ ರಸ್ತೆಯಲ್ಲಿ ತಡರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ಲಗ್ಗೇರೆ ಕಡೆಯಿಂದ ಗೊರಗುಂಟೆ ಪಾಳ್ಯ ಕಡೆಗೆ ತೆರಳುತಿದ್ದಾಗ ಅಪಘಾತ ನಡೆದಿದೆ. ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಸ್ಕೂಟರ್ ನಲ್ಲಿ ತೆರಳುತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅಸ್ಸಾಂ ಮೂಲದ ಕುಮಾರ್ ಲಿಂಬೂ ಮತ್ತು ಸುನಿಲ್ ಸ್ಕೂಟರ್ ನಲ್ಲಿ ತೆರಳುತಿದ್ದವರು. ಅಪಘಾತದಲ್ಲಿ ಕುಮಾರ್ ಲಿಂಬು ಸ್ಥಳದಲ್ಲೇ ಮೃತಪಟ್ಟಿದ್ದು ಸುನಿಲ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದವು. ಹೀಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸುನಿಲ್ ಸಹ ಮೃತಪಟ್ಟಿದ್ದಾರೆ.

ಮಂದಗತಿಯಲ್ಲಿ ಸಾಗುತಿದ್ದ ಲೋಡೆಡ್ ಕ್ಯಾಂಟರ್ಗೆ ವೇಗವಾಗಿ ಹಿಂದಿನಿಂದ ಬಂದು ಸ್ಕೂಟರ್ ಡಿಕ್ಕಿ ಹೊಡೆದಿದೆ. ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕ್ಯಾಂಟರ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಟೈರ್ ಬ್ಲಾಸ್ಟ್ ಆಗಿ ಡಿವೈಡರ್​ಗೆ ಡಿಕ್ಕಿ ಹೊಡೆದ BMTC ಬಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ನೆರಳೂರಿನಲ್ಲಿ ಟೈರ್ ಬ್ಲಾಸ್ಟ್ ಆಗಿ ಬಿಎಂಟಿಸಿ ಬಸ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಿಎಂಟಿಸಿ ಬಸ್ ಚಾಲಕನ ಕಾಲು ಮುರಿದಿದೆ. ಬಸ್​ನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಸ್ ನಿಧಾನ ಗತಿಯಲ್ಲಿದ್ದ ಕಾರಣ ಭಾರೀ ಅನಾಹುತ ತಪ್ಪಿದೆ. ಸ್ಥಳೀಯರ ಸಹಾಯದಿಂದ ಬಸ್ ಚಾಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣ ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆ ಬಳಿ ಅಪಘಾತ ಸಂಭವಿಸಿದ್ದು ಲಕ್ಷ್ಮೀದೇವಿನಗರ ನಿವಾಸಿ ಸುರೇಶ್ ಬಾಬು ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿ ಬೈಕ್​ಗೆ ಬಿಎಂಟಿಸಿ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್​ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲ್ಲೇಶ್ವರಂ ಸಂಚಾರಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಲಾರಿ ಮೈಸೂರಿನ ಹೂಟಗಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಮನೆಗೆ ನುಗ್ಗಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ್ದು ಮನೆ ಹೊರಗಿದ್ದ ಕಾರು ಜಖಂ ಆಗಿದೆ ಕಾಂಪೌಂಡ್‌ಗೂ ಹಾನಿಯಾಗಿದೆ. ವಿ.ವಿ.ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಲಾರಿ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Petrol and Diesel Rate Today: ಬೆಂಗಳೂರು ಹಾಗೂ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ವಿವರ

Published On - 7:52 am, Mon, 24 January 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು