AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಯುವಕ- ಯುವತಿ ಮೊಜು ಮಸ್ತಿ, ಬೈಕ್​ ಅಪಘಾತದಲ್ಲಿ ಎರಡು ಜೀವಗಳು ಬಲಿ..!

ರಸ್ಯೆ ಸುರಕ್ಷಿತೆ ಬಗ್ಗೆ ಟ್ರಾಫಿಕ್ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಹೆಲ್ಮೆಟ್​ ಧರಿಸಿ ಜೀವ ಉಳಿಸಿಕೊಳ್ಳಿ, ಹಾಗೇ ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ ಎಂದು ಸಾರಿ ಸಾರಿ ಹೇಳುತ್ತಿದ್ದಾರೆ. ಆದರೂ ಕೆಲವರು ಅದ್ಯಾವುದನ್ನು ಲೆಕ್ಕಿಸದೇ ವಾಹನ ಚಲಾಯಿಸಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಎರಡು ಜೀವಗಳು ಬಲಿಯಾಗಿವೆ.​

ಬೆಂಗಳೂರಿನಲ್ಲಿ ಯುವಕ- ಯುವತಿ ಮೊಜು ಮಸ್ತಿ, ಬೈಕ್​ ಅಪಘಾತದಲ್ಲಿ ಎರಡು ಜೀವಗಳು ಬಲಿ..!
ರಕ್ಷಾ, ನರಸಪ್ಪ
Jagadisha B
| Updated By: ರಮೇಶ್ ಬಿ. ಜವಳಗೇರಾ|

Updated on: Aug 16, 2023 | 12:54 PM

Share

 ಬೆಂಗಳೂರು, (ಆಗಸ್ಟ್ 16): ಸಂಚಾರ ನಿಯಮ ಉಲ್ಲಂಘಿಸಿ (Traffic Rules), ಅಜಾಗರೂಕವಾಗಿ ವಾಹನ ಚಲಾಯಿಸಿದ್ದರಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ( Bengaluru) ಮತ್ತೆರಡು ಜೀವಗಳು ಬಲಿಯಾಗಿವೆ. ನಿನ್ನೆ(ಆಗಸ್ಟ್ 15) ರಾತ್ರಿ ಮಾರುತಿ ನಗರದ (Maruti Nagar)ಮುಖ್ಯರಸ್ತೆಯಲ್ಲಿ ಅಪಘಾತ ಸಂಭವಿಸಿದ ಅಪಘಾತದಲ್ಲಿ ನರಸಪ್ಪ (51) ಹಾಗೂ ರಕ್ಷಾ ಮೃತಪಟ್ಟಿದ್ದಾರೆ. ಕಿಡ್ ಕೇರ್ ನಲ್ಲಿ ಕೆಲಸಮಾಡುತ್ತಿರುವ ರಕ್ಷಾ ಹಾಗೂ ಕಾಲೇಜು ವಿದ್ಯಾರ್ಥಿ ಚಂದನ್ ಪಲ್ಸರ್​ ಬೈಕ್​ನಲ್ಲಿ ಮಾರುತಿ ನಗರದಿಂದ ಕೆಎಲ್‍ಇ ಕಾಲೇಜಿನೆಡೆಗೆ ವೇಗವಾಗಿ ಹೋಗುತ್ತಿದ್ದಾಗ ನರಸಪ್ಪ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನರಸಪ್ಪ ಸ್ಥಳದಲ್ಲೇ ಮೃತಪಟ್ಟಿದ್ದರೆ, ತ್ರೀವೃವಾಗಿ ಗಾಯಗೊಂಡಿದ್ದ ರಕ್ಷಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ದುರಂತ ಅಂದರೆ ಮೃತ ರಕ್ಷಾ ಹೆಲ್ಮೆಟ್​ ಹಾಕಿರಲಿಲ್ಲ.

ಮೋಜು- ಮಸ್ತಿಗಾಗಿ ರಕ್ಷಾ ಹಾಗೂ ಚಂದನ್ ವೇಗವಾಗಿ ಬಂದಿದ್ದಲ್ಲದೆ, ಹೆಲ್ಮೆಟ್ ಧರಿಸದೆ ಸಂಚಾರ ನಿಯಮವನ್ನೂ ಪಾಲಿಸಿಲ್ಲ. ಮೃತ ದುರ್ದೈವಿ ನರಸಪ್ಪ ಸರ್ಕಾರಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದು, ಹೆಲ್ಮೆಟ್ ಹಾಕಿಯೂ ವಿಧಿಯಾಟಕ್ಕೆ ಬಲಿಯಾಗಿದ್ದಾರೆ. ಈ ಕುರಿತು ಕೆಂಗೇರಿ ಪೋಲಿಸ್ ಠಾಣೆಯಲ್ಲಿ ( Kengeri Police Station) ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Tumakuru News: ಪ್ರತ್ಯೇಕ ಘಟನೆ: ತುಮಕೂರಿನಲ್ಲಿ 3 ಅಪಘಾತ, ಮೂವರು ಸಾವು

ಪಶ್ಚಿಮ ವಿಭಾಗದ ಟ್ರಾಫಿಕ್​ ಡಿಸಿಪಿ ಸುಮನ ಪ್ರತಿಕ್ರಿಯೆ

ಇನ್ನು ಈ ಪ್ರಕರಣದ ಬಗ್ಗೆ ಪಶ್ಚಿಮ ವಿಭಾಗದ ಟ್ರಾಫಿಕ್​ ಡಿಸಿಪಿ ಸುಮನ ಡಿಪಿ ಪ್ರತಿಕ್ರಿಯಿಸಿದ್ದು, ನಿನ್ನೆ ಎರಡು ಬೈಕ್ ಗಳ ಮಧ್ಯೆ ಉಲ್ಲಾಳದ ಮಾರುತಿನಗರದಲ್ಲಿ ಅಪಘಾತವಾಗಿದೆ. ಚಂದನ್ ಎನ್ನುವವರ ಬೈಕ್​ ಹಿಂಬದಿಯಲ್ಲಿ ರಕ್ಷಾ ಕುಳಿತುಕೊಂಡು ಪ್ರಯಾಣ ಪ್ರಯಾಣಿಸುತ್ತಿದ್ದರು. ಮತ್ತೊಂದೆಡೆ ನರಸಪ್ಪ ಎನ್ನುವರು ತಮ್ಮ ಬೈಕ್​ ಟರ್ನಿಂಗ್ ತೆಗೆದುಕೊಳ್ಳುವಾಗ ಈ ಅಪಘಾತವಾಗಿದೆ ಎಂದರು.

ಪಲ್ಸರ್ ಬೈಕ್​ನ ಅತಿವೇಗ ಹಾಗೂ ನಿರ್ಲಲಕ್ಷ್ಯದಿಂದ ಚಂದನ್ ಡ್ರೈವಿಂಗ್ ಮಾಡಿಕೊಂಡು ಬಂದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ನರಸಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ರಕ್ಷಾ ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಡ್ರೈವರ್ ಚಂದನ್ ಕುಡಿದು ಡ್ರೈವಿಂಗ್ ಮಾಡಿರುವ ಶಂಕೆ ಇದೆ. ಚಂದನ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೈಕ್ ಗುದ್ದಿದ ರಭಸಕ್ಕೆ 50 ಮೀಟರ್ ನಷ್ಟು ಉಜ್ಜಿಕೊಂಡು ಹೋಗಿದೆ. ಮೃತ ನರಸಪ್ಪ ಲೆಕ್ಟರರ್ ಆಗಿದ್ದರು. ಇನ್ನು ಚಂದನ್ ಜೊತೆಗಿದ್ದ ರಕ್ಷಾ ಕಿಂಡರ್ ಗಾರ್ಟನ್ ನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಪಲ್ಸರ್ ಸವಾರ ಚಂದನ್ ಮೇಲೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!