AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ, ವಾಮಾಚಾರ ಆರೋಪ; ಮಾರಾಮಾರಿ, ನಿವೃತ್ತ ಎಎಸ್ಐ ಕುಟುಂಬಸ್ಥರ ಮೇಲೆ ಪೀಣ್ಯ ಠಾಣೆಯಲ್ಲಿ ಎಫ್ಐಆರ್

ಕಳೆದ ಗುರವಾರ ಅನಿತಾ ಕುಟುಂಬ ಮಂತ್ರಾಲಯಕ್ಕೆ ತೆರಳಿತ್ತು. ಈ ವೇಳೆ ಶುಕ್ರವಾರ ಬೆಳಗ್ಗೆ ಲಕ್ಷ್ಮಮ್ಮ ನಿಂಬೆಹಣ್ಣು ಹಾಕಿ ವಾಮಾಚಾರ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಸ, ವಾಮಾಚಾರ ಆರೋಪ; ಮಾರಾಮಾರಿ, ನಿವೃತ್ತ ಎಎಸ್ಐ ಕುಟುಂಬಸ್ಥರ ಮೇಲೆ ಪೀಣ್ಯ ಠಾಣೆಯಲ್ಲಿ ಎಫ್ಐಆರ್
ಎರಡು ಕುಟುಂಬಗಳ ನಡುವೆ ಮಾರಾಮಾರಿ
TV9 Web
| Updated By: ಆಯೇಷಾ ಬಾನು|

Updated on: Feb 17, 2022 | 9:54 AM

Share

ಬೆಂಗಳೂರು: ಜಗಳ ಶುರು ಆಗುವುದಕ್ಕೆ ಚಿಕ್ಕ ಕಾರಣಗಳು ಸಾಕು. ಆದ್ರೆ ಆ ಜಗಳದ ಪರಿಣಾಮ ಮಾತ್ರ ತುಂಬ ಕೆಟ್ಟ ರೀತಿಯಲ್ಲಾಗಿರುತ್ತೆ. ಸದ್ಯ ಕಸ(Garbage) ಹಾಕುವ‌ ಬಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೊತೆಗೆ ನಿವೃತ್ತ ಎಎಸ್ಐ ಪತ್ನಿಯಿಂದ ಗಾರ್ಮೆಂಟ್ಸ್ ಮುಂದೆ ವಾಮಾಚಾರ(Black Magic) ಮಾಡಲಾಗಿದೆ ಎಂಬ ಆರೋಪ ಸಹ ಕೇಳಿ ಬಂದಿದೆ. ಅನಿತಾ ಹಾಗೂ ಕುಟುಂಬಸ್ಥರ ಮೇಲೆ ಜವರೇಗೌಡ ಫ್ಯಾಮಿಲಿಯಿಂದ ಹಲ್ಲೆ ಆರೋಪ ಹಿನ್ನೆಲೆ ನಿವೃತ್ತ ಎಎಸ್ಐ ಜವರೇಗೌಡ, ಮಕ್ಕಳಾದ ಆನಂದ್ ಪಾಪು, ಮಗಳು ಕೋಮಲ ಮೇಲೆ ಎಫ್ಐಆರ್(FIR) ದಾಖಲಾಗಿದೆ.

ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನನಾಯಕನ ಪಾಳ್ಯದಲ್ಲಿ ಕಳೆದ ಮೂರುವರೆ ವರ್ಷದ ಹಿಂದೆ ಒಂದು ಗಾರ್ಮೆಂಟ್ಸ್ ಆರಂಭವಾಗಿತ್ತು. ಅದನ್ನು ಅನಿತಾ ಎಂಬುವವರು ನಡೆಸುತ್ತಿದ್ದಾರೆ. ರೆಸಿಡೆನ್ಸಿಯಲ್ ಏರಿಯಾದಲ್ಲಿ ಗಾರ್ಮೆಂಟ್ಸ್ ಹೊಂದಿದ್ದರಿಂದ ಮಾಜಿ ಎಎಸ್ಐ ಜವರೇಗೌಡ, ಅನಿತಾರಿಗೆ ಪ್ರಶ್ನೆ ಮಾಡಿದ್ದರು. ಹೀಗಾಗಿ ಇತ್ತೀಚೆಗೆ ಗಾರ್ಮೆಂಟ್ಸ್ ಶಿಫ್ಟ್ ಮಾಡಲು ಅನಿತಾ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಅಲ್ಲದೇ ಎಎಸ್ಐ ಮನೆ ಹಿಂದೆ ಖಾಲಿ ಜಾಗ ಕೂಡ ಇದೆ. ಆ ಖಾಲಿ ಜಾಗದಲ್ಲಿ ಸ್ಥಳೀಯರು ಕಸ ತಂದು ಹಾಕುತ್ತಿದ್ದರು. ಗಾರ್ಮೆಂಟ್ಸ್ ಆರಂಭವಾದ ಮೇಲೆ ಆ ಖಾಲಿ ಜಾಗಕ್ಕೆ ರಸ್ತೆ ಹಾಕಿಸಲಾಗಿತ್ತು. ಹಾಗಾಗಿ ಜನ‌ ಬಂದು ಕಸ ಹಾಕ್ತಿದ್ದಾರೆಂದು ಕೋಪಗೊಂಡಿದ್ದ ಎಎಸ್ಐ ಕುಟುಂಬ ಅನಿತಾರ ಜೊತೆ ಜಗಳವಾಡಿತ್ತು. ಇದರ ನಡುವೆ ಕಳೆದ ಗುರವಾರ ಅನಿತಾ ಕುಟುಂಬ ಮಂತ್ರಾಲಯಕ್ಕೆ ತೆರಳಿತ್ತು. ಈ ವೇಳೆ ಶುಕ್ರವಾರ ಬೆಳಗ್ಗೆ ಲಕ್ಷ್ಮಮ್ಮ ನಿಂಬೆಹಣ್ಣು ಹಾಕಿ ವಾಮಾಚಾರ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೀಗಾಗಿ ಅನಿತಾ ಕುಟುಂಬ ಇದನ್ನು ಪ್ರಶ್ನಿಸಿದೆ. ಈ ವೇಳೆ ಇಬ್ಬರು ಕುಟುಂಬಸ್ಥರ ಮಧ್ಯೆ ಮಾರಾಮಾರಿಯಾಗಿದೆ.

ಅನಿತಾ ಕುಟುಂಬಸ್ಥರ ಮೇಲೆ ಜವರೇಗೌಡ ಕುಟುಂಬ ಹಲ್ಲೆ ಮಾಡಿದ್ದಾರೆಂಬ ಆರೋಪ ಹಿನ್ನೆಲೆ ನಿವೃತ್ತ ಎಎಸ್ಐ ಜವರೇಗೌಡ, ಮಕ್ಕಳಾದ ಆನಂದ್ ಪಾಪು, ಮಗಳು ಕೋಮಲ ಮೇಲೆ ಎಫ್ಐಆರ್ ದಾಖಲಾಗಿದೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

bng Two families fight

ಮನೆ ಮುಂದೆ ನಿಂಬೆ ಹಣ್ಣು ತುಳಿದ ಮಹಿಳೆ

ಇದನ್ನೂ ಓದಿ: ನಾಯ್ಕರ ಬೆವರ ಶ್ರಮಕ್ಕೆ ಭಾಗೀರಥಿ ಒಲಿದಳು, ಇದೀಗ ಶ್ರಮದ ಬದುಕಿಗೆ ಪದ್ಮಶ್ರೀ ಗೌರವ!

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?