AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಎರಡು ಅಂತಸ್ತಿನ ಮನೆ ಕುಸಿತ..!

ಕಳೆದ ವರ್ಷ ಅಷ್ಟೇ ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣದ ಹಂತದ ಮನೆ ಕುಸಿದುಬಿದ್ದು ಎಂಟು ಜನ ಕಾರ್ಮಿಕರು ಮೃತಪಟ್ಟಿದ್ದರು. ಈ ಕರಾಳ ನೆನಪು ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಬೇರೊಂದು ಕಟ್ಟಡದ ಪಾಯ ತೆಗೆಯುತ್ತಿದ್ದ ವೇಳೆ ಪಕ್ಕದಲ್ಲಿದ್ದ ಎರಡು ಅಂತಸ್ತಿನ ಮನೆ ಕುಸಿದುಬಿದ್ದಿದೆ. ಇನ್ನು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಎರಡು ಅಂತಸ್ತಿನ ಮನೆ ಕುಸಿತ..!
Thippasandra House Collapsed
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Feb 19, 2025 | 6:43 PM

Share

ಬೆಂಗಳೂರು, (ಫೆಬ್ರವರಿ 19): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿದ್ದು, ಇಂದು (ಫೆಬ್ರವರಿ 19) ಎರಡು ಅಂತಸ್ತಿನ ಮನೆ ಉರುಳಿಬಿದ್ದಿದೆ. ಭೀವನ್ ಭೀಮಾ ನಗರದ ತಿಪ್ಪಸಂದ್ರದಲ್ಲಿ ಈ ಘಟನೆ ನಡೆದಿದೆ. ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಪಕ್ಕದಲ್ಲಿದ್ದ ಎರಡು ಅಂತಸ್ತಿನ ಮನೆ ಕುಸಿದುಬಿದ್ದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಮತ್ತು ಪೊಲೀಸರು ‌ದೌಡಾಯಿಸಿದ್ದು, ಮನೆಯಲ್ಲಿದ್ದ ಎಲ್ಲರನ್ನೂ ಹೊರ ಕಳುಹಿಸಿದ್ದಾರೆ. ಇನ್ನು ಮನೆಯೊಳಗೆ ಯಾರಾದರೂ ಸಿಲುಕಿದ್ದಾರಾ ಎನ್ನುವುದನ್ನು ಪರಿಶೀಲನೆ ನಡೆಸಿದ್ದಾರೆ.

ಬಿಲ್ಡಿಂಗ್ ನ ಗ್ರೌಂಡ್ ಫ್ಲೋರ್ ನಲ್ಲಿದ್ದ ವಿಳಕ್ಕು ಹ್ಯಾಂಡಿಕ್ರಾಪ್ಟ್ ಸ್ಟೋರ್ ಎಂಬ ಅಂಗಡಿಗೂ ಸಹ ಹೆಚ್ಚು ಹಾನಿಯಾಗಿದೆ. ಈ ಎರಡು ಅಂತಸ್ತಿನ ಕಟ್ಟಡದಲ್ಲಿ ಐದು ಮನೆಗಳು ಇದ್ದು, ಇಂದು (ಫೆಬ್ರವರಿ 19) ಸಂಜೆ 4.15 ಕ್ಕೆ ಇದ್ದಕ್ಕಿದ್ದಂತೆ ಕಟ್ಟಡ ಕುಸಿದಿದೆ. ಆ ವೇಳೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ.

ಬೇಸ್ಮೆಂಟ್ ನಲ್ಲಿದ್ದ ಐದಕ್ಕೂ ಹೆಚ್ಚು ಬೈಕ್‌ಗಳು ಜಖಂ ಆಗಿದ್ದು. ಅದೃಷ್ಟವಶಾತ್ ಸದ್ಯಕ್ಕೆ ಯಾವುದೇ ಪ್ರಾಣಹಾನಿಯಾಗಿಲ್ಲ. ಕಟ್ಟಡದಲ್ಲಿ ಯಾರು ಸಿಲುಕಿಲ್ಲ ಎನ್ನುವುದು ಗೊತ್ತಾಗಿದೆ. ಕಟ್ಟಡ ಕುಸಿತ ವೇಳೆ ಆರು ಜನರು ಇದ್ದರು. ಅವರೆಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಯಾವುದೇ ಕ್ಷಣದಲ್ಲೂ ಕಟ್ಟಡ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಹೀಗಾಗಿ ಮನೆಯ ಎರಡು ಕಡೆ ಬ್ಯಾರಿಕೇಡ್ ಹಾಕಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಕಟ್ಟಡದ ಪಕ್ಕದಲ್ಲಿ ಅವೈಜ್ಞಾನಿಕವಾಗಿ ಯಾಯ ತೋಡಿದ್ದೆ ಕಟ್ಟಡ ಕುಸಿಯಲು ಕಾರಣ ಎಂದು ಹೇಳಲಾಗುತ್ತಿದೆ.

ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!