AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಎರಡು ಅಂತಸ್ತಿನ ಮನೆ ಕುಸಿತ..!

ಕಳೆದ ವರ್ಷ ಅಷ್ಟೇ ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣದ ಹಂತದ ಮನೆ ಕುಸಿದುಬಿದ್ದು ಎಂಟು ಜನ ಕಾರ್ಮಿಕರು ಮೃತಪಟ್ಟಿದ್ದರು. ಈ ಕರಾಳ ನೆನಪು ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಬೇರೊಂದು ಕಟ್ಟಡದ ಪಾಯ ತೆಗೆಯುತ್ತಿದ್ದ ವೇಳೆ ಪಕ್ಕದಲ್ಲಿದ್ದ ಎರಡು ಅಂತಸ್ತಿನ ಮನೆ ಕುಸಿದುಬಿದ್ದಿದೆ. ಇನ್ನು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಎರಡು ಅಂತಸ್ತಿನ ಮನೆ ಕುಸಿತ..!
Thippasandra House Collapsed
TV9 Web
| Edited By: |

Updated on: Feb 19, 2025 | 6:43 PM

Share

ಬೆಂಗಳೂರು, (ಫೆಬ್ರವರಿ 19): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿದ್ದು, ಇಂದು (ಫೆಬ್ರವರಿ 19) ಎರಡು ಅಂತಸ್ತಿನ ಮನೆ ಉರುಳಿಬಿದ್ದಿದೆ. ಭೀವನ್ ಭೀಮಾ ನಗರದ ತಿಪ್ಪಸಂದ್ರದಲ್ಲಿ ಈ ಘಟನೆ ನಡೆದಿದೆ. ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಪಕ್ಕದಲ್ಲಿದ್ದ ಎರಡು ಅಂತಸ್ತಿನ ಮನೆ ಕುಸಿದುಬಿದ್ದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಮತ್ತು ಪೊಲೀಸರು ‌ದೌಡಾಯಿಸಿದ್ದು, ಮನೆಯಲ್ಲಿದ್ದ ಎಲ್ಲರನ್ನೂ ಹೊರ ಕಳುಹಿಸಿದ್ದಾರೆ. ಇನ್ನು ಮನೆಯೊಳಗೆ ಯಾರಾದರೂ ಸಿಲುಕಿದ್ದಾರಾ ಎನ್ನುವುದನ್ನು ಪರಿಶೀಲನೆ ನಡೆಸಿದ್ದಾರೆ.

ಬಿಲ್ಡಿಂಗ್ ನ ಗ್ರೌಂಡ್ ಫ್ಲೋರ್ ನಲ್ಲಿದ್ದ ವಿಳಕ್ಕು ಹ್ಯಾಂಡಿಕ್ರಾಪ್ಟ್ ಸ್ಟೋರ್ ಎಂಬ ಅಂಗಡಿಗೂ ಸಹ ಹೆಚ್ಚು ಹಾನಿಯಾಗಿದೆ. ಈ ಎರಡು ಅಂತಸ್ತಿನ ಕಟ್ಟಡದಲ್ಲಿ ಐದು ಮನೆಗಳು ಇದ್ದು, ಇಂದು (ಫೆಬ್ರವರಿ 19) ಸಂಜೆ 4.15 ಕ್ಕೆ ಇದ್ದಕ್ಕಿದ್ದಂತೆ ಕಟ್ಟಡ ಕುಸಿದಿದೆ. ಆ ವೇಳೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ.

ಬೇಸ್ಮೆಂಟ್ ನಲ್ಲಿದ್ದ ಐದಕ್ಕೂ ಹೆಚ್ಚು ಬೈಕ್‌ಗಳು ಜಖಂ ಆಗಿದ್ದು. ಅದೃಷ್ಟವಶಾತ್ ಸದ್ಯಕ್ಕೆ ಯಾವುದೇ ಪ್ರಾಣಹಾನಿಯಾಗಿಲ್ಲ. ಕಟ್ಟಡದಲ್ಲಿ ಯಾರು ಸಿಲುಕಿಲ್ಲ ಎನ್ನುವುದು ಗೊತ್ತಾಗಿದೆ. ಕಟ್ಟಡ ಕುಸಿತ ವೇಳೆ ಆರು ಜನರು ಇದ್ದರು. ಅವರೆಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಯಾವುದೇ ಕ್ಷಣದಲ್ಲೂ ಕಟ್ಟಡ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಹೀಗಾಗಿ ಮನೆಯ ಎರಡು ಕಡೆ ಬ್ಯಾರಿಕೇಡ್ ಹಾಕಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಕಟ್ಟಡದ ಪಕ್ಕದಲ್ಲಿ ಅವೈಜ್ಞಾನಿಕವಾಗಿ ಯಾಯ ತೋಡಿದ್ದೆ ಕಟ್ಟಡ ಕುಸಿಯಲು ಕಾರಣ ಎಂದು ಹೇಳಲಾಗುತ್ತಿದೆ.

ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು.

Follow Us
Web contact
Web contact

TV9 Kannada

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​