AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಜಮೀರ್ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ್ಯಾರು? ಸ್ಫೋಟಕ ಅಂಶ ಬಯಲಿಗೆ

ಜಮೀರ್ ಅಹ್ಮದ್ ಖಾನ್ ರಾಜ್ಯದ ಪ್ರಭಾವಿ ಸಚಿವರು. ಇತ್ತಿಚೇಗೆ ಕಳೆದ ಕೆಲ ದಿನಗಳ ಹಿಂದೆ ಜಮೀರ್ ತಾಯಿಯ ಚಿನ್ನಾಭರಣ ಕಳುವಾಗಿತ್ತು. ಖುದ್ದು ಸಚಿವರ ತಾಯಿ ಪೊಲೀಸ್ ಠಾಣೆ ಮೆಟ್ಟಿಲೇರಿ ಕಳವು ಪ್ರಕರಣ ದಾಖಲಿಸಿದ್ರು. ಪೊಲೀಸರ ತನಿಖೆ ವೇಳೆ ದೂರದ ಸಂಬಂಧಿಕರ ಕೈಚಳಕ ಪತ್ತೆಯಾಗಿದ್ದು, ಕದ್ದ ಮಾಲ್ ಸಮೇತ ತಗ್ಲಾಕೊಂಡಿದ್ದಾರೆ. ಹಾಗಾದ್ರೆ, ಖದೀಮರ ಕೈ ಚಳಕ ಬಯಲಿಗೆ ಬಂದಿದ್ಹೇಗೆ? ಎನ್ನುವ ಡಿಟೇಲ್ಸ್ ಇಲ್ಲಿದೆ.

ಸಚಿವ ಜಮೀರ್ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ್ಯಾರು? ಸ್ಫೋಟಕ ಅಂಶ ಬಯಲಿಗೆ
Zameer Ahmed Khan Home
TV9 Web
| Edited By: |

Updated on: May 05, 2026 | 10:16 PM

Share

ಬೆಂಗಳೂರು, (ಮೇ 05): ಉಂಡು ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಅವರಿಗೆ ದ್ರೋಹಬಗೆದಿರುವ ಘಟನೆ ನಡೆದಿದೆ. ಹೌದು…ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ವರ್ಷಗಳಿಂದ ಗುಟ್ಟಾಗಿ ನಡೆದಿದ್ದ ಕಳ್ಳತನದ ಅಸಲಿಯತ್ತು ಹೊರಬಿದ್ದಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಅಂದರೆ 1.13 ಮೌಲ್ಯದಷ್ಟು ಚಿನ್ನವನ್ನು ಕದ್ದು ನೌಟಂಕಿ ಆಟವಾಡುತ್ತಿದ್ದವರನ್ನು ಶಿವಾಜಿನಗರ ಪೊಲೀಸರು ಬಂಧಿಸಿವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳತನ ಮಾಡಿದ್ದು ಬೇರೆ ಯಾರೂ ಅಲ್ಲ. ಸಚಿವರ ತಾಯಿಯ ಸಂಬಂಧಿಕರು. ಸಂಬಂಧಿ ಸೈಯದ್ ಅಮೀರ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 1 ಕೆಜಿಗೂ ಹೆಚ್ಚು ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

  • ಸಚಿವ ಜಮೀರ್ ಅಹಮ್ಮದ್ ಖಾನ್ ನಿವಾಸದಲ್ಲಿ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ.
  • ಬೆಂಗಳೂರಿನ ಶಿವಾಜಿನಗರ ಠಾಣೆ ಪೊಲೀಸರಿಂದ ಇಬ್ಬರ ಬಂಧನ.
  • ಸೈಯದ್ ಅಮೀರ್, ಅಮಿರ್ ಅಹ್ಮದ್ ಬಂಧಿತ ಆರೋಪಿಗಳು.
  • ಟ್ರಾವೆಲ್ಸ್ ಬ್ಯುಸಿನೆಸ್​ನಲ್ಲಿ ಲಾಸ್ ಆಗಿದ್ದಕ್ಕೆ ಕಳ್ಳತನ

ಸಚಿವರ ತಾಯಿ ಸಂಬಂಧಿಯಿಂದಲೇ ಕೃತ್ಯ

ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ವರ್ಷಗಳಿಂದ ಗುಟ್ಟಾಗಿ ನಡೆದಿದ್ದ ಕಳ್ಳತನದ ಅಸಲಿಯತ್ತು ಹೊರಬಿದ್ದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯದ್ ಅಮೀನ್ ಮತ್ತು ಆತನ ಸ್ನೇಹಿತ ಅಮಿರ್ ಅಹ್ಮದ್ ಎಂಬಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.​ಬಂಧಿತ ಸೈಯದ್ ಅಮೀನ್, ಸಚಿವ ಜಮೀರ್ ತಾಯಿಯ ಹತ್ತಿರದ ಸಂಬಂಧಿ. ಈ ನಂಟಿನಿಂದಾಗಿ ಸಚಿವರ ಮನೆಗೆ ಈತನಿಗೆ ಮುಕ್ತ ಪ್ರವೇಶವಿತ್ತು. ಪ್ರತಿದಿನ ಮನೆಗೆ ಬಂದು ಒಳ್ಳೆಯವನಂತೆ ನಟಿಸುತ್ತಿದ್ದ ಅಮೀನ್, ಯಾರೂ ಇಲ್ಲದ ಸಮಯ ನೋಡಿ ಕಳೆದ 2025 ರಿಂದಲೂ ಹಂತ ಹಂತವಾಗಿ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ. ಮನೆಯಲ್ಲಿ ಮದುವೆ ಸಮಾರಂಭಗಳು ಇದ್ದಾಗ ಆಭರಣಗಳನ್ನು ಎಗರಿಸುವುದು ಈತನ ಚಾಳಿಯಾಗಿತ್ತು.

ಇದನ್ನೂ ನೋಡಿ: ಸಚಿವ ಜಮೀರ್ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ

​ಬಂಧಿತ ಸೈಯದ್ ಅಮೀನ್, ಸಚಿವ ಜಮೀರ್ ತಾಯಿಯ ಹತ್ತಿರದ ಸಂಬಂಧಿ. ಈ ನಂಟಿನಿಂದಾಗಿ ಸಚಿವರ ಮನೆಗೆ ಈತನಿಗೆ ಮುಕ್ತ ಪ್ರವೇಶವಿತ್ತು. ಪ್ರತಿದಿನ ಮನೆಗೆ ಬಂದು ಒಳ್ಳೆಯವನಂತೆ ನಟಿಸುತ್ತಿದ್ದ ಅಮೀನ್, ಯಾರೂ ಇಲ್ಲದ ಸಮಯ ನೋಡಿ ಕಳೆದ 2025 ರಿಂದಲೂ ಹಂತ ಹಂತವಾಗಿ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ. ಮನೆಯಲ್ಲಿ ಮದುವೆ ಸಮಾರಂಭಗಳು ಇದ್ದಾಗ ಆಭರಣಗಳನ್ನು ಎಗರಿಸುತ್ತಿದ್ದ. ಅದರಂತೆ ಸ್ನೇಹಿತ ಅಮೀರ್ ಅಹಮದ್ ಸಹಾಯ ಪಡೆದು ಸುಮಾರು 1 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ. ಬಳಿಕ ಆಭರಣಗಳನ್ನು ಅಡವಿಟ್ಟು ಹಣ ಸಹ ಪಡೆದುಕೊಂಡಿದ್ರು. ಅಷ್ಟೇ ಅಲ್ಲದೆ, ಆ ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡಿ ದೊಡ್ಡ ಲಾಭ ಗಳಿಸುವ ಕನಸು ಕಂಡಿದ್ದರು.

ಕಳ್ಳತನಕ್ಕೆ ಕಾರಣವೇನು?

ಆರೋಪಿಗಳು ಟ್ರಾವೆಲ್ ಬ್ಯುಸಿನೆಸ್ ನಡೆಸುತ್ತಿದ್ದರು. ಆದರೆ ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ಇವರ ವ್ಯವಹಾರ ತೀವ್ರ ನಷ್ಟಕ್ಕೆ ಸಿಲುಕಿತ್ತು. ಕಳೆದುಕೊಂಡ ಹಣವನ್ನು ಮರಳಿ ಪಡೆಯಲು ಮತ್ತು ಸಾಲ ತೀರಿಸಲು ಇವರು ಹಣದ ಹಪಹಪಿಯಲ್ಲಿದ್ದರು. ಎಲ್ಲಿಯೂ ಫೈನಾನ್ಸ್ ಅಥವಾ ಸಾಲ ಸಿಗದಿದ್ದಾಗ, ಅಂತಿಮವಾಗಿ ತಮ್ಮದೇ ಸಂಬಂಧಿಯಾದ ಸಚಿವರ ಮನೆಯ ಮೇಲೆ ಕಣ್ಣು ಹಾಕಿದ್ದರು. ಕಳೆದೊಂದು ವರ್ಷದಿಂದ ಹಂತ ಹಂತವಾಗ ಮನೆಯಲ್ಲಿದ್ದ ಜಮೀರ್ ತಾಯಿ ಚಿನ್ನವನ್ನು ಕಳ್ಳತನ ಮಾಡಿದ್ದು, ಬಳಿಕ ಚಿನ್ನಾಭರಣಗಳನ್ನು ಅಡವಿಟ್ಟು ಆ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿ ಲಾಭ ಗಳಿಸುವ ದುರಾಲೋಚನೆ ಇವರದ್ದಾಗಿತ್ತು.

ಕಳ್ಳರು ಸಿಕ್ಕಿಬಿದ್ದಿದ್ಹೇಗೆ?

ಕಳ್ಳತನ ನಡೆದ ಮೇಲೆ ಆರೋಪಿ ಅಮೀನ್ ನಡವಳಿಕೆ ಬದಲಾಗಿದ್ದು ಪೊಲೀಸರಿಗೆ ಕ್ಲ್ಯೂ ನೀಡಿತ್ತು. ಆಗಾಗ ಜಮೀರ್ ಮನೆ ಬರುತ್ತಿದ್ದವನು ಕಳ್ಳತನವಾದ ನಂತರ ಬರುವುದನ್ನೇ ನಿಲ್ಲಿಸಿದ್ದ. ಸಚಿವರ ತಾಯಿ ಫೋನ್ ಮಾಡಿದರೂ ಸ್ವೀಕರಿಸದೆ ತಪ್ಪಿಸಿಕೊಳ್ಳುತ್ತಿದ್ದ.​ಯಾವಾಗ ಇವನ ಮೊಬೈಲ್ ಸ್ವಿಚ್ ಆಫ್ ಆಯ್ತೋ, ಆಗ ಪೊಲೀಸರಿಗೆ ಇವನೇ ಆರೋಪಿ ಎಂಬುದು ಗೊತ್ತಾಗಿತ್ತು. ಸದ್ಯ ಕಾರ್ಯಾಚರಣೆ ನಡೆಸಿ ಇಬ್ಬರು ಖದೀಮರ ಹೆಡೆಮುರಿ ಕಟ್ಟಿರುವ ಪೊಲೀಸರ ವಿಚಾರಣೆ ವೇಳೆ ಈತ ತನ್ನ ಪಾಪದ ಪುರಾಣವನ್ನು ಬಿಚ್ಚಿಟ್ಟಿದ್ದಾನೆ. ಸದ್ಯ ಬಂಧಿತರಿಂದ ಒಟ್ಟು 759 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಒಟ್ಟಿನಲ್ಲಿ ನಂಬಿಕಸ್ಥನೇ ದ್ರೋಹ ಬಗೆದ ಈ ಘಟನೆ ಸಚಿವ ಜಮೀರ್ ಅಹಮದ್ ಖಾನ್ ಕುಟುಂಬವನ್ನೇ ದಂಗಾಗಿಸಿದೆ. ಸದ್ಯ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಕಂಬಿ ಎಣಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್