AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇವಪುರದಲ್ಲಿ ಕಟ್ಟಡ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಬಲಿ

ತಕ್ಷಣ ಸ್ಥಳಕ್ಕೆ ಮಹದೇವಪುರ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು ಅವಶೇಷಗಳ ಅಡಿ ಸಿಲುಕಿದ್ದ ಮೂವರನ್ನು ರಕ್ಷಿಸಿದ್ದಾರೆ. ಹಾಗೂ ಇಬ್ಬರ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ.

ಮಹದೇವಪುರದಲ್ಲಿ ಕಟ್ಟಡ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಬಲಿ
ಮಹದೇವಪುರದಲ್ಲಿ ಕಟ್ಟಡ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಬಲಿ
TV9 Web
| Updated By: ಆಯೇಷಾ ಬಾನು|

Updated on:Oct 11, 2022 | 12:54 PM

Share

ಬೆಂಗಳೂರು: ಬೆಂಗಳೂರಿನ ಮಹದೇವಪುರದಲ್ಲಿ ಕಟ್ಟಡ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಹಾಗೂ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ.

ಬೆಳಗ್ಗೆ 8:30ರ ಸುಮಾರಿಗೆ ಹೂಡಿ ಸರ್ಕಲ್‌ನ ಕೀಸ್ ಹೋಟೆಲ್ ಬಳಿಯ ಪ್ಯಾಬ್ಲೋಸ್ ಗ್ಯಾಸ್ಟ್ರೊ ಬಾರ್‌ನಲ್ಲಿ ಕಟ್ಟಡವೊಂದು ಕುಸಿದಿದೆ ಎಂದು ಕರೆ ಬಂದಿದೆ. ತಕ್ಷಣ ಸ್ಥಳಕ್ಕೆ ಮಹದೇವಪುರ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು ಅವಶೇಷಗಳ ಅಡಿ ಸಿಲುಕಿದ್ದ ಮೂವರನ್ನು ರಕ್ಷಿಸಿದ್ದಾರೆ. ಹಾಗೂ ಇಬ್ಬರ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಮೃತದೇಹವನ್ನು ಹೊರತೆಗೆದು ಶವವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ರಕ್ಷಿಸಲಾದ 3 ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: BCCI President: ಬಿಸಿಸಿಐ ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ?: ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಕೆ: ವರದಿ

ಮಹಾದೇವಪುರದ ಗ್ರಾಫೆಕ್ಟ್ ಸಿಗ್ನಲ್ ಬಳಿ ಶೆಡ್​ನ ಮೇಲ್ಛಾವಣಿ ಕುಸಿದ ಕಾರಣ ಈ ಘಟನೆ ನಡೆದಿದೆ. ಕಟ್ಟಡ ಕೆಲ್ಸಕ್ಕೆ ಬಂದಿದ್ದ ಬಿಹಾರದ ಇಬ್ಬರು ಕಾರ್ಮಿಕರಾದ 30 ವರ್ಷದ ಜೈನ್ ಉದ್ದೀನ್ ಹಾಗೂ 24 ವರ್ಷದ ಮತ್ತೊಬ್ಬ ಕಾರ್ಮಿಕ ಅರ್ಮಾನ್ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಹಳೆಯ ಕಟ್ಟಡ ತೆರವುಗೊಳಿಸುತ್ತಿದ್ದ ಹಿನ್ನೆಲೆ ಹೊರಭಾಗದಲ್ಲಿ ಮಲಗಿದ್ದ ಕಾರ್ಮಿಕರು ಮಧ್ಯರಾತ್ರಿ ಮಳೆಬಂದ ಕಾರಣ ಶೆಡ್​ ಒಳಗೆ ಹೋಗಿ ಮಲಗಿದ್ದರು. ಆದ್ರೆ ಈ ವೇಳೆ ಘಟನೆ ಸಂಭವಿಸಿದೆ.

ತೋಟದ ಮನೆಯಲ್ಲಿ ಕೂಲಿ ಕಾರ್ಮಿಕರನ್ನು ಕೂಡಿಹಾಕಿ ಹಲ್ಲೆ

ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆಯ ಪುರ ಗ್ರಾಮದಲ್ಲಿ ತೋಟದ ಮನೆಯಲ್ಲಿ ಕೂಲಿ ಕಾರ್ಮಿಕರನ್ನು ಕೂಡಿಹಾಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮುಂಗಡ ಹಣ ವಾಪಸ್ ಕೊಟ್ಟಿಲ್ಲ ಎಂದು ತೋಟದ ಮಾಲೀಕ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಹಲ್ಲೆ ಮಾಡುವುದನ್ನು ವಿಡಿಯೋ ಮಾಡಿದ್ದಕ್ಕೆ ಗರ್ಭಿಣಿ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಗರ್ಭಿಣಿ ಆಸ್ಪತ್ರೆಗೆ ದಾಖಲಾಗಿದ್ದು ಕಾರ್ಮಿಕರು ಮಾಲೀಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಅದ್ರೆ ದೂರು ನೀಡಿದ್ರೂ ಕ್ರಮಕೈಗೊಂಡಿಲ್ಲ ಎಂದು ಕಾರ್ಮಿಕರು ಆರೋಪ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:54 am, Tue, 11 October 22

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ