AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗಾಂಧಿನಗರದ ಮಿಂಚು ಫ್ಯಾಮಿಲಿ ರೆಸ್ಟೋರೆಂಟ್​ನಲ್ಲಿ ಹೊಡೆದಾಟ! ತುಮಕೂರಿನಲ್ಲಿ ಕಾರಿನಲ್ಲಿದ್ದ 15 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಆರೋಪಿ ಬಂಧನ

ಪ್ರಸನ್ನ, ಅಜಯ್ ಯುವಕನ ತಲೆಯ ಭಾಗಕ್ಕೆ ಹೊಡೆದು ಪರಾರಿಯಾಗಲು ಮುಂದಾಗಿದ್ದರು. ಹೊಯ್ಸಳ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಗಾಂಧಿನಗರದ ಮಿಂಚು ಫ್ಯಾಮಿಲಿ ರೆಸ್ಟೋರೆಂಟ್​ನಲ್ಲಿ ಹೊಡೆದಾಟ! ತುಮಕೂರಿನಲ್ಲಿ ಕಾರಿನಲ್ಲಿದ್ದ 15 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಆರೋಪಿ ಬಂಧನ
ಮಿಂಚು ಫ್ಯಾಮಿಲಿ ರೆಸ್ಟೋರೆಂಟ್, ಹಲ್ಲೆಗೆ ಒಳಗಾದ ಯುವಕ
TV9 Web
| Edited By: |

Updated on:Jun 14, 2022 | 9:07 AM

Share

ಬೆಂಗಳೂರು: ಗಾಂಧಿನಗರದಲ್ಲಿರುವ ಮಿಂಚು ಫ್ಯಾಮಿಲಿ ರೆಸ್ಟೋರೆಂಟ್​ನಲ್ಲಿ (Family Restaurant) ಹೊಡೆದಾಟ ನಡೆದಿದ್ದು, ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪಬ್ನಲ್ಲಿ (Pub) ಬಾಣಸವಾಡಿ ನಿವಾಸಿಗಳಾದ ಪ್ರಸನ್ನ, ಅಜಯ್ ಎಂಬುವವರು ಮೊಬೈಲ್ ವಿಚಾರವಾಗಿ ಜಗಳ ತೆಗೆದು ಭಕ್ಷಿಗಾರ್ಡನ್ ನಿವಾಸಿ ಸುಂದರ್ ಎಂಬುವನ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಲ್ಲೆ ಮಾಡಿದ್ದ ಇಬ್ಬರನ್ನು ವಿಚಾರಣೆ ಮಾಡುತ್ತಿದ್ದಾರೆ.

ಪ್ರಸನ್ನ, ಅಜಯ್ ಯುವಕನ ತಲೆಯ ಭಾಗಕ್ಕೆ ಹೊಡೆದು ಪರಾರಿಯಾಗಲು ಮುಂದಾಗಿದ್ದರು. ಹೊಯ್ಸಳ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ತಡರಾತ್ರಿ 1.30 ರ ಸುಮಾರಿಗೆ ನಡೆದಿದೆ.

15 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಆರೋಪಿ ಸೆರೆ: ತುಮಕೂರು: ಕಾರಿನಲ್ಲಿ ಇಟ್ಟಿದ್ದ 15 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಜಿಲ್ಲೆಯ ಕೊರಟಗೆರೆ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಬಿಹಾರ ಮೂಲದ ಕಾರು ಚಾಲಕ ಬಿಪಿನ್ ಬಂಧಿತ ಆರೋಪಿ. ಬೆಂಗಳೂರು ಮೂಲದ ಸತೀಶ್ ಎಂಬುವರು ಜಮೀನು ಕೊಳ್ಳಲು ಕೊರಟಗೆರೆಗೆ ಬಂದಿದ್ದರು. ಈ ವೇಳೆ ಕಾರಿನಲ್ಲಿ 15 ಲಕ್ಷ ರೂ. ಹಣ ಇಟ್ಟುಕೊಂಡು ಕಾರಿನಲ್ಲಿ ಬಂದಿದ್ದರು. ಈ ವೇಳೆ ಚಾಲಕ ಹಣ ಕಸಿದುಕೊಂಡು ಪರಾರಿಯಾಗಿದ್ದ. ತಮ್ಮ ಕಾರು ಚಾಲಕ ವಿರುದ್ಧ ಸತೀಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ
Image
Rahul Gandhi: ಅನುಮತಿ ಪಡೆಯದೆ ಲಂಡನ್​ಗೆ ಹೋದ ಸಂಸದ ರಾಹುಲ್ ಗಾಂಧಿ; ಪಕ್ಷದ ವತಿಯಿಂದ ಬಂತು ಪ್ರತಿಕ್ರಿಯೆ: ಏನದು? ಮತ್ತದೇ ಯಡವಟ್ಟು!
Image
ರಸ್ತೆ ಬದಿಯ ಹೋಟೆಲ್​ನಲ್ಲಿ ಊಟ ಮಾಡಿದ ಈ ಸ್ಟಾರ್​ ನಟನನ್ನು ಗುರುತಿಸುತ್ತೀರಾ? ಇಲ್ಲಿದೆ ವೈರಲ್ ವಿಡಿಯೋ
Image
ಸ್ಟೇಜ್​ ಮೇಲೆ ಕೆಜಿಎಫ್​2 ಡೈಲಾಗ್ ಹೊಡೆದ ಎಸ್.ಡಿ.ಪಿ.ಐ ಮುಖಂಡ
Image
IPL 2022 Final Tickets: ಐಪಿಎಲ್ ಫೈನಲ್ ಮ್ಯಾಚ್ ಟಿಕೆಟ್ ಖರೀದಿಸುವುದು ಹೇಗೆ?

ಇದನ್ನೂ ಓದಿ: Presidential election: ರಾಷ್ಟ್ರಪತಿ ಚುನಾವಣೆಗೆ ಸಾಮಾನ್ಯ ಪ್ರಜೆಯೂ ಸ್ಪರ್ಧಿಸಬಹುದು? ಸ್ಪರ್ಧಿಸೋಕೆ ಇರುವ ನಿಯಮಗಳು ಇಲ್ಲಿದೆ

ಸತೀಶ್ ಅಡ್ವಾನ್ಸ್ ನೀಡಲು 15 ಲಕ್ಷ ಹಣವನ್ನು ಕಾರಿನ ಡ್ರಾನಲ್ಲಿ ಇಟ್ಟು, ಡ್ರೈವರ್​ಗೆ ಹಣ ಇದೆ ಕಾರಿನಲ್ಲಿಯೇ ಕುಳಿತುಕೋ ಎಂದು ಹೇಳಿ ಪರಿಚಯಸ್ಥರ ಜೊತೆ ಜಮೀನು ನೋಡಲು ಹೋದಾಗ ಆರೋಪಿ ಹಣ ದೋಚಿ ಪರಾರಿಯಾಗಿದ್ದ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:02 am, Tue, 14 June 22

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್