AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಮತ್ತೆರಡು FIR ದಾಖಲು

ಮಂಡ್ಯ ಜಿಲ್ಲೆಯ ಶ್ರೀಗಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್‌ ಭಟ್‌ ಮುಸ್ಲಿಂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿ ಈಗ ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಶೇಷಾದ್ರಿಪುರಂ ಠಾಣೆ ಸೇರಿ 2 ಠಾಣೆಗಳಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.

ಮುಸ್ಲಿಂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಮತ್ತೆರಡು FIR ದಾಖಲು
ಕಲ್ಲಡ್ಕ ಪ್ರಭಾಕರ ಭಟ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಆಯೇಷಾ ಬಾನು|

Updated on: Dec 30, 2023 | 2:40 PM

Share

ಬೆಂಗಳೂರು, ಡಿ.30: ಮಂಡ್ಯದಲ್ಲಿ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ (Kalladka Prabhakar Bhat) ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎರಡು ಕಡೆ ಎಫ್​ಐಆರ್ (FIR) ದಾಖಲಾಗಿದೆ. ರಹೀಬ್ ವುಲ್ಲಾ ಹಾಗೂ ಉಸ್ಮಾನ್ ಎಂಬುವವರು ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಶೇಷಾದ್ರಿಪುರಂ ಠಾಣೆ ಸೇರಿ 2 ಠಾಣೆಗಳಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದು ದೂರಿನ ಮೇರೆಗೆ ಎನ್​ಸಿಆರ್​ ದಾಖಲಿಸಲಾಗಿದೆ.

ಡಿಸೆಂಬರ್‌ 24ರಂದು ಹನುಮ ಜಯಂತಿ ಕಾರ್ಯಕ್ರಮದ ಅಂಗವಾಗಿ ಮಂಡ್ಯ ಜಿಲ್ಲೆಯ ಶ್ರೀಗಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್‌ ಭಟ್‌, ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಂದು ಗಂಡ, ಪರ್ಮನೆಂಟ್ ಗಂಡನೇ ಇರಲಿಲ್ಲ. ಆದರೆ ತ್ರಿವಳಿ ತಲಾಕ್ ನಿಷೇಧದ ಮೂಲಕ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಶ್ರೀರಂಗ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಲ್ಲಡ್ಕ ಪ್ರಭಾಕರ್ ಭಟ್, ಈಗಾಗಲೇ ಹೈ ಕೋರ್ಟ್ ನಿಂದ ತಡೆಯಾಜ್ಞೆ ಪಡೆದಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ಬಳಿಕ ಕಲ್ಲಡ್ಕ್ ಪ್ರಭಾಕರ್ ಭಟ್ ಬಂಧಿಸುವಂತೆ ಆಗ್ರಹಿಸಿ ವಿವಿಧ ಮಹಿಳಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಇನ್ನು ವುಮೆನ್ ಇಂಡಿಯಾ ಮೂಮೆಂಟ್ ಸಂಘಟನೆಯ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮ ಅವರು RSSನಲ್ಲಿರುವ ಈ ರೀತಿಯ ವಿಷ ಜಂತುಗಳು ಹೇಳಿಕೆ ನೀಡುವುದು ಹೊಸದಲ್ಲ, ಅವರ ಮೇಲೆ ಎಫ್.ಐ.ಆರ್ ಆದ್ರೂ ಇನ್ನು ಸಹ ಬಂಧನ ಆಗಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಸಹ‌ ನಿಷ್ಕ್ರಿಯತೆ ತೋರಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದರು. ಮುಸ್ಲಿಂ ಓಟು ಪಡೆದು ಬಂದ ಕಾಂಗ್ರೆಸ್ ಸರ್ಕಾರ ಮೌನವಾಗಿದೆ. ಸರ್ಕಾರ ಮಹಿಳೆಯರಿಗೆ ಬಿಟ್ಟಿ ಭಾಗ್ಯ ನೀಡಿ ಮಂಗ ಮಾಡಿದೆ. ಇಲ್ಲಿ ಮಹಿಳೆಯರಿಗೆ ಯಾವುದೇ ಸುರಕ್ಷತೆ ಇಲ್ಲ. ತಕ್ಷಣ ಕಲ್ಲಡ್ಕ ಭಟ್​ನನ್ನು ಬಂಧಿಸಬೇಕು. ಮುಂದೆ ಈ ರೀತಿಯ ವಿಷ ಜಂತುಗಳು ಬಾಯಿ ತೆರೆಯದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ