AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಲ್ಲಕ್ಕಿ ಟ್ರ್ಯಾಕ್ಟರ್​ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು

ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿ ಬಳಿ ಪಲ್ಲಕ್ಕಿ ಟ್ರ್ಯಾಕ್ಟರ್​ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮೃತಪಟ್ಟಿದ್ದಾರೆ. ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗ ಘಟನೆ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಲ್ಲಕ್ಕಿ ಟ್ರ್ಯಾಕ್ಟರ್​ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು
ಪಲ್ಲಕ್ಕಿ ಟ್ರ್ಯಾಕ್ಟರ್​ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು
Follow us
ರಾಮು, ಆನೇಕಲ್​
| Updated By: ಆಯೇಷಾ ಬಾನು

Updated on: Jun 02, 2024 | 12:30 PM

ಬೆಂಗಳೂರು, ಜೂನ್.02: ಪಲ್ಲಕ್ಕಿ ಟ್ರ್ಯಾಕ್ಟರ್​ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮೃತಪಟ್ಟ (Death) ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿ ಬಳಿ ನಡೆದಿದೆ. ವೀರಸಂದ್ರ ನಿವಾಸಿ ರಂಗನಾಥ(33), ಯಾರಂಡಹಳ್ಳಿ ನಿವಾಸಿ ಹರಿಬಾಬು(25) ಮೃತ ದುರ್ದೈವಿಗಳು. ಗೊಲ್ಲಹಳ್ಳಿ ಗ್ರಾಮದ ಜಾತ್ರೆ ಪಲ್ಲಕಿ ಉತ್ಸವದ ವೇಳೆ ಅವಘಡ ಸಂಭವಿಸಿದೆ.

ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಾಲಕನ ರಕ್ಷಣೆಗೆ ಧಾವಿಸಿದ ವ್ಯಕ್ತಿಗೆ ವಿದ್ಯುತ್ ಶಾಕ್ ಹೊಡೆದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿ ರಕ್ಷಣೆ ಮಾಡಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಇಬ್ಬರೂ ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರ್ಚಕರ 2 ಗುಂಪುಗಳ ನಡುವೆ ಘರ್ಷಣೆ

ಹಣಕ್ಕಾಗಿ ಅರ್ಚಕರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಆರೋಪ ಕೇಳಿಬಂದಿದೆ. ಗಲಾಟೆಯಲ್ಲಿ ಮೂವರು ಅರ್ಚಕರಿಗೆ ಗಾಯಗಳಾಗಿವೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಚಿಕ್ಕಲ್ಲೂರು ಸಿದ್ದಾಪ್ಪಾಜಿ ದೇಗುಲದಲ್ಲಿ ಘಟನೆ ನಡೆದಿದೆ. ದೇಗುಲದಲ್ಲಿದ್ದ ಬೆತ್ತ ಹಾಗೂ ತ್ರಿಶೂಲ ಬಳಸಿ ಪರಸ್ಪರ ಹೊಡೆದಾಡಿಕೊಂಡಿದ್ದು, ಗಾಯಗೊಂಡವರು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಅವಾಂತರ: ಜಲಾವೃತಗೊಂಡ ರಸ್ತೆಗಳು, ಮರ ಬಿದ್ದು ಅನೇಕ ಕಡೆ ಸಂಚಾರ ವ್ಯತ್ಯಯ

46 ಲಕ್ಷ ದರೋಡೆ, 3 ಮಂದಿಯ ಬಂಧನ!

ವಿಜಯನಗರದಲ್ಲಿ ಮಾರಕಾಸ್ತ್ರ ತೋರಿಸಿ 46 ಲಕ್ಷ ದರೋಡೆ ಮಾಡಿದ್ದ ಮೂವರನ್ನ ಬಂಧಿಸಲಾಗಿದೆ. ಹರಪನಹಳ್ಳಿ ತಾಲೂಕಿನ ಕಂಚಿಕೆರೆ ಗ್ರಾಮದಲ್ಲಿ ಆರೋಪಿಗಳು ಕಳ್ಳತನ ಮಾಡಿದ್ರು. ಮಾರಕಾಸ್ತ್ರ ತೋರಿಸಿ 6 ಮಂದಿ ದರೋಡೆ ಮಾಡಿದ್ರು. ಇನ್ನು ಬಂಧಿತರಿಂದ 10.30 ಲಕ್ಷ ನಗದು ಹಣ, 14 ಲಕ್ಷ ಮೌಲ್ಯದ 2 ಕಾರು, 20 ಸಾವಿರ ಮೌಲ್ಯದ 2 ಮೊಬೈಲ್​ ಜಪ್ತಿ ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಕೊಂಡು ತನಿಖೆ ಮಾಡ್ತಿದ್ದಾರೆ.

ಡ್ಯಾಂನಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ಜಲಾಶಯದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವನ್ನಪ್ಪಿರೋ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮಂಚೇನಹಳ್ಳಿ ತಾಲೂಕಿನ ದಂಡಿಗಾನಹಳ್ಳಿ ಡ್ಯಾಂನಲ್ಲಿ ಮುಂಬೈ ಮೂಲದ ಜೋಯಾ ಪಾಟೀಲ್, ಆಲಿಯಾ ಸಾವನ್ನಪ್ಪಿದ್ದಾರೆ. ಶಾಲೆಗೆ ರಜೆ ಹಿನ್ನೆಲೆ ಇಬ್ಬರು ಬಾಲಕಿಯರು ಚಿಕ್ಕಮ್ಮನ ಮನೆಗೆ ಬಂದಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ