AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಕೊರೊನಾ ಪಾಸಿಟಿವ್​​; ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಜಂಟಿ ಆಯುಕ್ತ ಜಗದೀಶ್

ಕೊರೊನಾ 4ನೆ ಅಲೆ ಸೋಂಕಿನ ಪ್ರಕರಣಗಳು ನಗರದಲ್ಲಿ ಏರಿಕೆಯಾಗುತ್ತಿದ್ದು, ದಾಸರಹಳ್ಳಿ ವಲಯದ ರಾಜ್ ಗೋಪಾಲನಗರ ದಲ್ಲಿ ಇರುವ ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್ ಮತ್ತು ಎಂಇಎಸ್ ಪಬ್ಲಿಕ್ ಖಾಸಗಿ ಶಾಲೆಯ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಬೆಂಗಳೂರಿನ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಕೊರೊನಾ ಪಾಸಿಟಿವ್​​; ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ  ಜಂಟಿ ಆಯುಕ್ತ ಜಗದೀಶ್
ಎಮ್​​.ಇ..ಎಸ್​ ಪಬ್ಲಿಕ್​​ ಶಾಲೆ
TV9 Web
| Edited By: |

Updated on:Jun 14, 2022 | 2:49 PM

Share

ಬೆಂಗಳೂರು: ಕೊರೊನಾ 4ನೆ (Covid 4th wave) ಅಲೆ ಸೋಂಕಿನ ಪ್ರಕರಣಗಳು ನಗರದಲ್ಲಿ ಏರಿಕೆಯಾಗುತ್ತಿದ್ದು, ದಾಸರಹಳ್ಳಿ (Dasarhalli) ವಲಯದ ರಾಜ್ ಗೋಪಾಲನಗರ ದಲ್ಲಿ ಇರುವ ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್ ಮತ್ತು ಎಂಇಎಸ್ ಪಬ್ಲಿಕ್ ಖಾಸಗಿ ಶಾಲೆಯ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್​ನ  5 ಮತ್ತು 6 ನೇ ತರಗತಿಯಲ್ಲಿ ಓದುತ್ತಿರುವ 21 ಮಕ್ಕಳಿಗೆ,  ಎಂಇಎಸ್ ಪಬ್ಲಿಕ್ ಸ್ಕೂಲ್​​ನ 5 ನೇ ತರಗತಿಯಲ್ಲಿ ಓದುತ್ತಿದ್ದ  10 ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಸದ್ಯಕ್ಕೆ ಎಲ್ಲಾ ಮಕ್ಕಳಿಗೂ ಮತ್ತು ಶಾಲಾ ಸಿಬ್ಬಂದಿಗೂ  ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಸದ್ಯ ಶಾಲೆಗಳನ್ನ ಕಂಟೈನ್ಮೆಂಟ್ ಜೋನ್​​ ಅಂತಾ ಘೋಷಣೆ ಮಾಡಲಾಗಿದೆ.

ಇದನ್ನು ಓದಿ: 2022 ರಾಷ್ಟ್ರಪತಿ ಚುನಾವಣೆಯ ರೇಸ್​​ನಲ್ಲಿ ಇಲ್ಲ ಎಂದ ಶರದ್​​ ಪವಾರ್​​

ಸದ್ಯ ಪಾಸಿಟಿವ್ ಆಗಿರುವ ಮಕ್ಕಳು ಎಲ್ಲರೂ ಕೂಡ ಆರಾಮಾಗಿ ಇದ್ದು, ಆತಂಕ ಪಡುವಂತಿಲ್ಲ. ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್ 21 ವಿದ್ಯಾರ್ಥಿಗಳಿಗೆ ಪಾಸಿಟಿವ್ ಆಬಮದರು ಶಾಲೆಗೆ ರಜೆ ನೀಡಿಲ್ಲ. ಪಾಸಿಟಿವ್ ಕಾಣಿಸಿಕೊಂಡ ತರಗತಿಯ ಮಕ್ಕಳಿಗೆ ಮಾತ್ರ ರಜೆ ನೀಡಲಾಗಿದೆ. ಈ ಸಂಬಂಧ ಬಿಬಿಎಂಪಿ (BBMP) ಆರೋಗ್ಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್ ನಲ್ಲಿ 21 ವಿದ್ಯಾರ್ಥಿಗಳಿಗೆ ಪಾಸಿಟಿವ್ ಹಿನ್ನಲೆ  ಶಾಲೆಗೆ ಭೇಟಿ ನೀಡಿದ ದಾಸರಹಳ್ಳಿ ವಿಭಾಗದ ಜಂಟಿ ಆಯುಕ್ತ ಜಗದೀಶ್ ಶಾಲೆಯ ಮುಖ್ಯ ಶಿಕ್ಷಕರಿಂದ ಮಾಹಿತಿ ಪಡೆದಿದ್ದಾರೆ. ಶಾಲೆಯಲ್ಲಿ ಕೈಗೊಂಡ ಮುನ್ನೇಚ್ಚರಿಕಾ ಕ್ರಮಗಳ ಬಗ್ಗೆಯೂ ಪರಿಶೀಲನೆ ಮಾಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Tue, 14 June 22

Follow Us
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?