AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿಯ ಇಬ್ಬರು ಸಿಂಡಿಕೇಟ್ ಸದಸ್ಯರ ಅಮಾನತು! ಸಾಮೂಹಿಕ ರಾಜೀನಾಮೆ ನೀಡಲು ಉಳಿದ ಸದಸ್ಯರಿಂದ ನಿರ್ಧಾರ

ಈ ನಡುವೆ ಕುಲಪತಿ ಪ್ರೊ. ಡಾ. ಕೆ ಆರ್ ವೇಣುಗೋಪಾಲ್ ಸುಪ್ರೀಂ ಕೋರ್ಟ್​ನಿಂದ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ತಂದಿದ್ದರು. ಕೆಲವೊಂದು ವಿಚಾರಗಳಲ್ಲಿ ಕುಲಪತಿ ಒಬ್ಬರೇ ನಿರ್ಧಾರ ತೆಗೆದುಕೊಂಡಿದ್ದಾರೆ.

ಬೆಂಗಳೂರು ವಿವಿಯ ಇಬ್ಬರು ಸಿಂಡಿಕೇಟ್ ಸದಸ್ಯರ ಅಮಾನತು! ಸಾಮೂಹಿಕ ರಾಜೀನಾಮೆ ನೀಡಲು ಉಳಿದ ಸದಸ್ಯರಿಂದ ನಿರ್ಧಾರ
ಸುದ್ದಿಗೋಷ್ಠಿ ನಡೆಸಿದ ಸಿಂಡಿಕೇಟ್ ಸದಸ್ಯರು
TV9 Web
| Edited By: sandhya thejappa|

Updated on:Apr 11, 2022 | 11:10 AM

Share

ಬೆಂಗಳೂರು: ಸೇವೆಯ ಅವಧಿ 8 ತಿಂಗಳು ಬಾಕಿಯಿದ್ದರೂ ಬೆಂಗಳೂರು ವಿವಿಯ (Bengaluru University) ಇಬ್ಬರು ಸಿಂಡಿಕೇಟ್ ಸದಸ್ಯರು (Syndicate Members) ಅಮಾನತುಗೊಂಡಿದ್ದಾರೆ. ಕಾರಣ ತಿಳಿಸದೆ ಅವಧಿಗೂ ಮುನ್ನವೇ ಪ್ರೇಮ್ ಮತ್ತು ಗೋವಿಂದರಾಜು ಎಂಬ ಇಬ್ಬರು ಸಿಂಡಿಕೇಟ್ ಸದಸ್ಯರು ಅಮಾನತುಗೊಂಡಿದ್ದಾರೆ. ಇಬ್ಬರ ರಿಲೀವ್ ಬೆನ್ನಲ್ಲೇ ಇದೀಗ ಎಲ್ಲಾ ಸದಸ್ಯರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಬಾಕಿ 6 ಜನ ಸಿಂಡಿಕೇಟ್ ಸದಸ್ಯರು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಕುಲಪತಿಗಳ ನೇಮಕ ಕ್ರಮಬದ್ಧವಾಗಿಲ್ಲ ಎಂದು ಸಿಂಡಿಕೇಟ್ ದಾಖಲೆಗಳನ್ನೂ ಒದಗಿಸಿತ್ತು. ಜೊತೆಗೆ ಕುಲಪತಿಗಳ ಸ್ಥಾನಕ್ಕೆ ಕೂಡಲೇ ಬೇರೊಬ್ಬರನ್ನು ನೇಮಿಸುವಂತೆ ಪಟ್ಟು ಹಿಡಿದಿತ್ತು.

ಈ ನಡುವೆ ಕುಲಪತಿ ಪ್ರೊ. ಡಾ. ಕೆ ಆರ್ ವೇಣುಗೋಪಾಲ್ ಸುಪ್ರೀಂ ಕೋರ್ಟ್​ನಿಂದ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ತಂದಿದ್ದರು. ಕೆಲವೊಂದು ವಿಚಾರಗಳಲ್ಲಿ ಕುಲಪತಿ ಒಬ್ಬರೇ ನಿರ್ಧಾರ ತೆಗೆದುಕೊಂಡಿದ್ದಾರೆ. ಸಿಂಡಿಕೇಟ್ ಸದಸ್ಯರ ಅಭಿಪ್ರಾಯವನ್ನು ಕೇಳಿಯೂ ಇಲ್ಲ, ಅಭಿಪ್ರಾಯವನ್ನು ತಿಳಿಸಿದಾಗ ಗಣನೆಗೂ ತೆಗೆದುಕೊಂಡಿಲ್ಲ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಟಿ.ವಿ ರಾಜು, ಸರ್ಕಾರದ ನಾಮನಿರ್ದೇಶಿತ ಇಬ್ಬರು ಸದಸ್ಯರನ್ನು ಸರ್ಕಾರ ವಜಾ ಮಾಡಿದೆ. ಸಿಂಡಿಕೇಟ್ ಸದಸ್ಯರ ಸಬ್ ಕಮಿಟ ಇರುತ್ತೆ. ಫಿನಾನ್ಸ್ ಕಮಿಟಿಯನ್ನು ಪುನರ್ ರಚನೆ ಮಾಡಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಸಿಂಡಿಕೇಟ್ ಸದಸ್ಯರಿಗೆ ಮಾಹಿತಿ ನೀಡಿಲ್ಲ. ನಾಮಿನೇಟೆಡ್ ಸದಸ್ಯರನ್ನು ಯಾವುದೇ ವಜಾ ಮಾಡಲು ವಿಸಿಗೆ ಅಧಿಕಾರ ಇಲ್ಲ. ವಿಸಿ ಅಧಿಕಾರ ಹೊರತುಪಡಿಸಿ ಈ ಕ್ರಮ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಹೇಳಿದರು.

ವಿಶ್ವವಿದ್ಯಾಲಯದಲ್ಲಿ 16 ಜನರ ಕೆಲಸವನ್ನು ಖಾಯಂ ಆಗಿ ನೇಮಿಸಿದ್ದಾರೆ. ಈ ಬಗ್ಗೆ ಸಿಂಡಿಕೇಟ್ ಸದಸ್ಯರಿಗೆ ಮಾಹಿತಿ ನೀಡಿಲ್ಲ. ಯೂನಿವರ್ಸಿಟಿಯಲ್ಲಿ ಪ್ರೊಫೆಸರ್​ಗಳ ನೇಮಕಾತಿ, ಪರೀಕ್ಷೆಗಳು ಸರಿಯಾಗಿ ನಡೆಯುತ್ತಿಲ್ಲ NEPಗೆ ಯಾವುದೇ ಸಿದ್ಧತೆ ಮಾಡಿಕೊಂಡಿಲ್ಲ. ಕಟ್ಟಡ ನಿರ್ಮಾಣ ಕೆಲಸಗಳು ಕೂಡ ಸಬ್ ಕಮಿಟಿಯಲ್ಲಿ ಚರ್ಚೆ ಮಾಡದೇ ಬೇಕಾದವರಿಗೆ ಟೆಂಡರ್ ನೀಡಿದ್ದಾರೆ. ಇಲ್ಲಿ ಸಾಕಷ್ಟು ಆರ್ಥಿಕ ಮೋಸಗಳಾಗಿವೆ. ಸಿಂಡಿಕೇಟ್ ಸದಸ್ಯರಿಗೆ ತಿಳಿಸದೇ ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಸಿಂಡಿಕೇಟ್ ಸದಸ್ಯರಿಗೆ ಕಿಂಚಿತ್ತು ಮಾರ್ಯದೆ ನೀಡಿಲ್ಲವಾದರೆ ಅಲ್ಲಿ ಯಾಕೆ ಇರಬೇಕು? ಹೀಗಾಗಿ ರಾಜೀನಾಮೆ ನೀಡಬೇಕು ಎಂದು ನಮಗೆ ಅನಿಸುತ್ತಿದೆ. ಶಿಕ್ಷಣ ವರ್ಗದಲ್ಲಿ ಈ ರೀತಿಯಾದರೆ ರಾಜ್ಯ ಯೂನಿವರ್ಸಿಟಿ ಯಾವುದೇ ಅಭಿವೃದ್ಧಿಯಾಗಲ್ಲ. ಮೌಲ್ಯಗಳಿಲ್ಲದೆ ಶಿಕ್ಷಣ ಕೇಂದ್ರ ನಡೆಯಬಾರದು ಎಂಬುದು ನಮ್ಮ ಉದ್ದೇಶ ಅಂತ ವಿವಿ ಸಿಂಡಿಕೇಟ್ ಸದಸ್ಯ ಟಿ.ವಿ ರಾಜು ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ

ಅಲ್ಲಹು ಅಕ್ಬರ್ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ವಿರುದ್ಧ ತನಿಖೆ ನಡೆಸಲು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಂಸದ ಅನಂತಕುಮಾರ ಹೆಗಡೆ

Published On - 11:06 am, Mon, 11 April 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ