AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಶೂಟ್ ಮಾಡುತ್ತಿದ್ದ ಯುವತಿಯರ ಫೋನ್ ಕಸಿಯಲು ಯತ್ನ: ಖದೀಮರ ವಿಡಿಯೋ ವೈರಲ್

ಕಳ್ಳರು ಮೊಬೈಲ್​ ಕಸಿಯುಲು ಯತ್ನಿಸಿದ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವಿಡಿಯೋ ಶೂಟ್ ಮಾಡುತ್ತಿದ್ದ ಯುವತಿಯರ ಫೋನ್ ಕಸಿಯಲು ಯತ್ನ: ಖದೀಮರ  ವಿಡಿಯೋ ವೈರಲ್
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ದೃಶ್ಯಗಳು
ಆಯೇಷಾ ಬಾನು
ಆಯೇಷಾ ಬಾನು| Edited By: ನಯನಾ ಎಸ್​ಪಿ|

Updated on:Mar 30, 2023 | 10:54 AM

Share

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಳ್ಳರು ಬೆಂಗಳೂರಿನಲ್ಲಿ ಫುಡ್ ಬ್ಲಾಗರ್‌ನ ಮೊಬೈಲ್ ದೋಚಲು ಯತ್ನಿಸಿ ವಿಫಲರಾಗಿದ್ದಾರೆ. ಕಳ್ಳರು ಮೊಬೈಲ್​ ಕಸಿಯುಲು ಯತ್ನಿಸಿದ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಬೆಂಗಳೂರಿನ ಸುರಕ್ಷತಾ ಕ್ರಮಗಳನ್ನು ಪ್ರಶ್ನಿಸಿ ಟ್ವಿಟರ್​ನಲ್ಲಿ ಕಮೆಂಟ್ ಮಾಡಲಾಗುತ್ತಿದೆ.

ಇನ್ನು ಘಟನೆಯ ಬಗ್ಗೆ ವಿವರಿಸುತ್ತಾ, ಕಂಟೆಂಟ್ ಕ್ರಿಯೇಟರ್ ರುಚಿಕಾ ತಮ್ಮ ಟ್ವಿಟರ್​ ಖಾತೆಯಲ್ಲಿ ಅನುಭವವನ್ನು ಹಂಚಿಕೊಂಡಿದ್ದಾರೆ. “ನಿನ್ನೆ ರೆಸ್ಟೊರೆಂಟ್‌ಗಾಗಿ ಚಿತ್ರೀಕರಣ ಮಾಡುವಾಗ ಅಪಾಯಕಾರಿಯಾದ ಘಟನೆ ನಡೆದಿದೆ ಮತ್ತು ನಾನು ಇದನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ ಎಂದು ಘಟನೆಯನ್ನು ವಿವರಿಸಿದ್ದಾರೆ.”

ಇದನ್ನೂ ಓದಿ: ಚಿರತೆ ಸೂರ್ಯ ನಮಸ್ಕಾರ ಹೇಗೆ ಮಾಡುತ್ತಿದೆ ನೋಡಿ: ವಿಡಿಯೋ ವೈರಲ್​​

ನಾವು ಕಂಟೆಂಟ್ ಕ್ರಿಯೇಟರ್‌ಗಳಾಗಿರುವುದರಿಂದ, ನಾವು ರೆಸ್ಟೊರೆಂಟ್​ವೊಂದರ ಶೂಟಿಂಗ್ ಮಾಡುತ್ತಿದ್ದಾಗ ಬೈಕ್​ನಲ್ಲಿ ಬಂದ ಇಬ್ಬರು ಕಳ್ಳರು ನನ್ನ ಕೈಯಿಂದ ನನ್ನ ಫೋನ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸಿದರು. ಅದೃಷ್ಟವಶಾತ್ ನಾನು ಆ ಸಮಯದಲ್ಲಿ ನನ್ನ ಫೋನ್ ಅನ್ನು ಕೆಳಗೆ ಮಾಡಿದೆ, ಆದರೆ, ವಿಡಿಯೋದಲ್ಲಿ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಸ್ಪಷ್ಟವಾಗಿಲ್ಲ ಮತ್ತು ರೆಸ್ಟೋರೆಂಟ್ ಮುಖ್ಯ ದ್ವಾರದ ಮುಂಭಾಗದಲ್ಲಿ ಸಿಸಿಟಿವಿ ಕ್ಯಾಮೆರಾ ಇದೆ ಎಂದು ಘಟನೆಯನ್ನು ವಿವರಿಸಿದ್ದಾರೆ.

ಇನ್ನು ಈ ವಿಡಿಯೋಗೆ ಪ್ರತಿಕ್ರಿಯಿಸಿದ ಬಳಕೆದಾರ, ಎಲ್ಲರೂ ಜಾಗರೂಕರಾಗಿರಿ, ಮುಖ್ಯವಾಗಿ ಕಂಟೆಂಟ್ ಕ್ರಿಯೇಟರ್ಸ್. ಫೋನ್ ಕಳ್ಳತನ ಹೆಚ್ಚುತ್ತಿದೆ ಮತ್ತು ಅಪರಾಧಿಗಳು ಎಂದಿಗಿಂತ ವಿಶ್ವಾಸ ಹೊಂದಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಟ್ವಿಟರ್ ಬಳಕೆದಾರ, ದಯವಿಟ್ಟು ಫೋನ್ ಕಸಿದುಕೊಳ್ಳಲು ಪ್ರಯತ್ನಿಸುತ್ತಿರುವ ಈ ವ್ಯಕ್ತಿಗಳ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಪೋಲಿಸರನ್ನು ಒತ್ತಾಯಿಸಿದ್ದಾರೆ. ಹಾಗೂ ವಿಡಿಯೋದಲ್ಲಿ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸರು ಭರವಸೆ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:57 am, Thu, 30 March 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ