AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಶೂಟ್ ಮಾಡುತ್ತಿದ್ದ ಯುವತಿಯರ ಫೋನ್ ಕಸಿಯಲು ಯತ್ನ: ಖದೀಮರ ವಿಡಿಯೋ ವೈರಲ್

ಕಳ್ಳರು ಮೊಬೈಲ್​ ಕಸಿಯುಲು ಯತ್ನಿಸಿದ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವಿಡಿಯೋ ಶೂಟ್ ಮಾಡುತ್ತಿದ್ದ ಯುವತಿಯರ ಫೋನ್ ಕಸಿಯಲು ಯತ್ನ: ಖದೀಮರ  ವಿಡಿಯೋ ವೈರಲ್
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ದೃಶ್ಯಗಳು
Follow us
ಆಯೇಷಾ ಬಾನು
| Updated By: ನಯನಾ ಎಸ್​ಪಿ

Updated on:Mar 30, 2023 | 10:54 AM

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಳ್ಳರು ಬೆಂಗಳೂರಿನಲ್ಲಿ ಫುಡ್ ಬ್ಲಾಗರ್‌ನ ಮೊಬೈಲ್ ದೋಚಲು ಯತ್ನಿಸಿ ವಿಫಲರಾಗಿದ್ದಾರೆ. ಕಳ್ಳರು ಮೊಬೈಲ್​ ಕಸಿಯುಲು ಯತ್ನಿಸಿದ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಬೆಂಗಳೂರಿನ ಸುರಕ್ಷತಾ ಕ್ರಮಗಳನ್ನು ಪ್ರಶ್ನಿಸಿ ಟ್ವಿಟರ್​ನಲ್ಲಿ ಕಮೆಂಟ್ ಮಾಡಲಾಗುತ್ತಿದೆ.

ಇನ್ನು ಘಟನೆಯ ಬಗ್ಗೆ ವಿವರಿಸುತ್ತಾ, ಕಂಟೆಂಟ್ ಕ್ರಿಯೇಟರ್ ರುಚಿಕಾ ತಮ್ಮ ಟ್ವಿಟರ್​ ಖಾತೆಯಲ್ಲಿ ಅನುಭವವನ್ನು ಹಂಚಿಕೊಂಡಿದ್ದಾರೆ. “ನಿನ್ನೆ ರೆಸ್ಟೊರೆಂಟ್‌ಗಾಗಿ ಚಿತ್ರೀಕರಣ ಮಾಡುವಾಗ ಅಪಾಯಕಾರಿಯಾದ ಘಟನೆ ನಡೆದಿದೆ ಮತ್ತು ನಾನು ಇದನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ ಎಂದು ಘಟನೆಯನ್ನು ವಿವರಿಸಿದ್ದಾರೆ.”

ಇದನ್ನೂ ಓದಿ: ಚಿರತೆ ಸೂರ್ಯ ನಮಸ್ಕಾರ ಹೇಗೆ ಮಾಡುತ್ತಿದೆ ನೋಡಿ: ವಿಡಿಯೋ ವೈರಲ್​​

ನಾವು ಕಂಟೆಂಟ್ ಕ್ರಿಯೇಟರ್‌ಗಳಾಗಿರುವುದರಿಂದ, ನಾವು ರೆಸ್ಟೊರೆಂಟ್​ವೊಂದರ ಶೂಟಿಂಗ್ ಮಾಡುತ್ತಿದ್ದಾಗ ಬೈಕ್​ನಲ್ಲಿ ಬಂದ ಇಬ್ಬರು ಕಳ್ಳರು ನನ್ನ ಕೈಯಿಂದ ನನ್ನ ಫೋನ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸಿದರು. ಅದೃಷ್ಟವಶಾತ್ ನಾನು ಆ ಸಮಯದಲ್ಲಿ ನನ್ನ ಫೋನ್ ಅನ್ನು ಕೆಳಗೆ ಮಾಡಿದೆ, ಆದರೆ, ವಿಡಿಯೋದಲ್ಲಿ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಸ್ಪಷ್ಟವಾಗಿಲ್ಲ ಮತ್ತು ರೆಸ್ಟೋರೆಂಟ್ ಮುಖ್ಯ ದ್ವಾರದ ಮುಂಭಾಗದಲ್ಲಿ ಸಿಸಿಟಿವಿ ಕ್ಯಾಮೆರಾ ಇದೆ ಎಂದು ಘಟನೆಯನ್ನು ವಿವರಿಸಿದ್ದಾರೆ.

ಇನ್ನು ಈ ವಿಡಿಯೋಗೆ ಪ್ರತಿಕ್ರಿಯಿಸಿದ ಬಳಕೆದಾರ, ಎಲ್ಲರೂ ಜಾಗರೂಕರಾಗಿರಿ, ಮುಖ್ಯವಾಗಿ ಕಂಟೆಂಟ್ ಕ್ರಿಯೇಟರ್ಸ್. ಫೋನ್ ಕಳ್ಳತನ ಹೆಚ್ಚುತ್ತಿದೆ ಮತ್ತು ಅಪರಾಧಿಗಳು ಎಂದಿಗಿಂತ ವಿಶ್ವಾಸ ಹೊಂದಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಟ್ವಿಟರ್ ಬಳಕೆದಾರ, ದಯವಿಟ್ಟು ಫೋನ್ ಕಸಿದುಕೊಳ್ಳಲು ಪ್ರಯತ್ನಿಸುತ್ತಿರುವ ಈ ವ್ಯಕ್ತಿಗಳ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಪೋಲಿಸರನ್ನು ಒತ್ತಾಯಿಸಿದ್ದಾರೆ. ಹಾಗೂ ವಿಡಿಯೋದಲ್ಲಿ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸರು ಭರವಸೆ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:57 am, Thu, 30 March 23

ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!