Sign In

By signing in or creating an account, you agree with Associated Broadcasting Company's Terms & Conditions and Privacy Policy.

NICE road: ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನಗಳ ಸಂಚಾರ ಸಂಪೂರ್ಣ ಬ್ಯಾನ್!

ಬೆಂಗಳೂರು ಹೊರವಲಯದ ನೈಸ್​ ರಸ್ತೆಯಲ್ಲಿ ಜನವರಿ 16ರಿಂದ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ದ್ವಿಚಕ್ರ ವಾಹನ ಸಂಚಾರ ನಿರ್ಬಂಧ ಮಾಡಲಾಗಿದೆ.

NICE road: ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನಗಳ ಸಂಚಾರ ಸಂಪೂರ್ಣ ಬ್ಯಾನ್!
ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರ ನಿರ್ಬಂಧ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 13, 2022 | 4:46 PM

ಬೆಂಗಳೂರು: ಬೆಂಗಳೂರು ಹೊರವಲಯದ ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸವಾರರ ಮೇಲೆ ದಾಳಿಗಳು ಮತ್ತು ದರೋಡೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜನವರಿ 16ರಿಂದ ಜಾರಿಗೆ ಬರುವಂತೆ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ದ್ವಿಚಕ್ರ ವಾಹನ ಸಂಚಾರ ನಿರ್ಬಂಧ ಮಾಡಲಾಗಿದೆ. ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್​ ಆಯುಕ್ತ (Joint Commissioner of Police, Traffic Bengaluru City) ಡಾ. ಬಿ ಆರ್​ ರವಿಕಾಂತೇ ಗೌಡ (Dr. B.R. Ravikanthe Gowda IPS) ಅವರ ಸಲಹೆಯ ಮೇರೆಗೆ ಸುರಕ್ಷತಾ ದೃಷ್ಟಿಯಿಂದ ನೈಸ್​ ಆಡಳಿತ ಮಂಡಳಿಯು (Nandi Economic Corridor Enterprises Limited) ಇನ್ನು ಮುಂದೆ ನೈಸ್ ರಸ್ತೆಯಲ್ಲಿ ದಿಚಕ್ರ ವಾಹನಗಳ ಸಂಚಾರವನ್ನು ರಾತ್ರಿ ವೇಳೆ ಸಂಪೂರ್ಣವಾಗಿ ನಿರ್ಬಂಧಿಸಿದೆ.

ನೈಸ್ ರಸ್ತೆಯಲ್ಲಿ ವಾಹನಗಳ ಅಡ್ಡಗಟ್ಟಿ ಸುಲಿಗೆ: ಕೋಣನಕುಂಟೆ ಪೊಲೀಸರಿಂದ ಮೂವರು ಯುವಕರ ಅರೆಸ್ಟ್

ಬೆಂಗಳೂರು: ನೈಸ್ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡ್ತಿದ್ದ ಮೂವರು ಯುವಕರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಸುನಿಲ್, ಹರೀಶ್ ಮತ್ತು ನವೀನ್‌ ಬಂಧಿತರು. ಬೆಂಗಳೂರಿನ ಕೋಣನಕುಂಟೆ ಪೊಲೀಸರು ಮೂವರನ್ನೂ ಅರೆಸ್ಟ್ ಮಾಡಿದ್ದಾರೆ.

ಮೂವರೂ ಅರೋಪಿಗಳು ಪ್ಲಾನ್ ಮಾಡಿದ ನಂತರ ರಸ್ತೆ ಮಧ್ಯೆ ವಾಹನ ತಡೆದು ಚಾಕುವಿನಿಂದ ಹಲ್ಲೆ ಮಾಡ್ತಿದ್ದರು. ಚಾಕುವಿನಿಂದ ಹಲ್ಲೆ ಮಾಡಿದ ಬಳಿಕ ಅರೋಪಿಗಳನ್ನು ನಗ, ನಾಣ್ಯ ದೋಚುತಿದ್ದರು. ಕಳೆದ ಶುಕ್ರವಾರ ಇಂತಹುದೇ ಹಲ್ಲೆ ಮತ್ತು ಸುಲಿಗೆ ನಡೆದಿತ್ತು. ನಾಯಂಡಹಳ್ಳಿಯಲ್ಲಿ ಒರ್ವ ಅರೋಪಿ ಕ್ಯಾಂಟರ್ ಹತ್ತಿದ್ದ. ಬಳಿಕ ದಾರಿ ಮಧ್ಯೆ ಮತ್ತೆ ಮೂವರು ಅರೋಪಿಗಳು ಕ್ಯಾಟರ್ ಹತ್ತಿದ್ದರು. ಅದಾದ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಮೊಬೈಲ್ ಹಾಗು ಹಣ ದೋಚಿದ್ದರು.

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವು

ಬೆಂಗಳೂರು: ನೈಸ್ ರಸ್ತೆಯಲ್ಲಿ ಭೀಕರ ಅಪಘಾತಗಳು ಸಂಭವಿಸುವುದು ಮುಂದುವರಿದಿದೆ. ಬೆಂಗಳೂರು ಹೊರವಯದಲ್ಲಿರುವ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮೊಹಮ್ಮದ್ ಫಾದಿಲ್(25), ಅಭಿಲಾಷ್(25) ಮತ್ತು ಶಿಲ್ಪಾ(30) ಸೇರಿ ಒಟ್ಟು ನಾಲ್ವರು ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದಾರೆ. ಓರ್ವ ಯುವತಿಯ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಮತ್ತೊಂದು ಕ್ವಾಲಿಸ್ ಕಾರಲ್ಲಿದ್ದ ನಾಲ್ವರ ಸ್ಥಿತಿಯೂ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಕುಮಾರಸ್ವಾಮಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:24 pm, Thu, 13 January 22

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ