AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ದ್ವಿಚಕ್ರ ಸವಾರನಿಗೆ ಮಾರಕಾಸ್ತ್ರ ತೋರಿಸಿ ದರೋಡೆ! ಭೀತಿಗೊಳಿಸುವ ವಿಡಿಯೋ ಇಲ್ಲಿದೆ

ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಸವಾರನಿಂದ ಮೊಬೈಲ್ ದರೋಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದೆ. ಘಟನೆಯ ದೃಶ್ಯಗಳನ್ನು ನೆಟ್ಟಿಗರು ಟ್ವೀಟ್ ಮಾಡಿ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಬೆಂಗಳೂರು: ದ್ವಿಚಕ್ರ ಸವಾರನಿಗೆ ಮಾರಕಾಸ್ತ್ರ ತೋರಿಸಿ ದರೋಡೆ! ಭೀತಿಗೊಳಿಸುವ ವಿಡಿಯೋ ಇಲ್ಲಿದೆ
ದ್ವಿಚಕ್ರ ವಾಹನ ಅಡ್ಡಗಟ್ಟಿ ದರೋಡೆ ಮಾಡುತ್ತಿರುವ ದೃಶ್ಯ
Rakesh Nayak Manchi
Rakesh Nayak Manchi|

Updated on: Aug 03, 2023 | 7:56 PM

Share

ಬೆಂಗಳೂರು, ಆಗಸ್ಟ್ 3: ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಸವಾರನ ಮೊಬೈಲ್ ದರೋಡೆ (Robbery) ನಡೆಸಿದ ಘಟನೆ ನಗರದ ಬೆನ್ಸನ್ ಟೌನ್‌ನ ಉಪ-ಪ್ರದೇಶವಾದ ವಿಲಿಯಮ್ಸ್ ಟೌನ್‌ನಲ್ಲಿರುವ ಮುಬೀನ್ ತಾಜ್ ಅಪಾರ್ಟ್‌ಮೆಂಟ್ ಸಂಕೀರ್ಣದ ಬಳಿ ನಡೆದಿದೆ. ಬುಧವಾರ (ಆಗಸ್ಟ್ 2) ನಡೆದ ಘಟನೆ ಸಂಬಂಧ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದರೋಡೆಕೋರರು ದರೋಡೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು maxdudes ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಲಾಗಿದೆ.

ಇದನ್ನೂ ಓದಿ: Insta Love: ಇನ್ಸ್​​​ಟಾಗ್ರಾಮ್​​​ನಲ್ಲಿ ಪರಿಚಯವಾಗಿದ್ದ ಯುವಕನ ಭೇಟಿಗೆ ಬಂದ ವಿವಾಹಿತ ಮಹಿಳೆ, ದರೋಡೆಗೆ ತುತ್ತಾದರು!

ವಿಡಿಯೋದಲ್ಲಿರುವ ಸಮಯದ ಪ್ರಕಾರ, ಈ ಘಟನೆ ಮಧ್ಯಾಹ್ನ 2.35 ರ ಸುಮಾರಿಗೆ ನಡೆದಿದೆ. ದೃಶ್ಯಾವಳಿಯಲ್ಲಿ ಇರುವಂತೆ, ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುತ್ತಾರೆ. ಈ ವೇಳೆ ಹೆಲ್ಮೆಟ್ ಧರಿಸಿದ ಇಬ್ಬರು ದರೋಡೆಕೋರರು ಬಂದ ಅಡ್ಡಗಟ್ಟಿದ್ದಾರೆ. ನಂತರ ಓರ್ವ ಮಾರಕಾಸ್ತ್ರ ತೋರಿಸಿ ದರೋಡೆಗೆ ಇಳಿದಿದ್ದಾನೆ. ಇದಕ್ಕೆ ಪ್ರತಿರೋಧ ಒಡ್ಡಿದಾಗ ಮಾರಕಾಸ್ತ್ರದಿಂದ ಹಲ್ಲೆಗೆ ಮುಂದಾಗುತ್ತಾನೆ. ಕೊನೆಗೆ ಮೊಬೈಲ್ ಕಸಿದು ಇಬ್ಬರು ಸ್ಥಳದಿಂದ ಪರಾರಿಯಾಗುತ್ತಾರೆ.

ಟ್ವೀಟ್​ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.”

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!