AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ದ್ವಿಚಕ್ರ ಸವಾರನಿಗೆ ಮಾರಕಾಸ್ತ್ರ ತೋರಿಸಿ ದರೋಡೆ! ಭೀತಿಗೊಳಿಸುವ ವಿಡಿಯೋ ಇಲ್ಲಿದೆ

ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಸವಾರನಿಂದ ಮೊಬೈಲ್ ದರೋಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದೆ. ಘಟನೆಯ ದೃಶ್ಯಗಳನ್ನು ನೆಟ್ಟಿಗರು ಟ್ವೀಟ್ ಮಾಡಿ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಬೆಂಗಳೂರು: ದ್ವಿಚಕ್ರ ಸವಾರನಿಗೆ ಮಾರಕಾಸ್ತ್ರ ತೋರಿಸಿ ದರೋಡೆ! ಭೀತಿಗೊಳಿಸುವ ವಿಡಿಯೋ ಇಲ್ಲಿದೆ
ದ್ವಿಚಕ್ರ ವಾಹನ ಅಡ್ಡಗಟ್ಟಿ ದರೋಡೆ ಮಾಡುತ್ತಿರುವ ದೃಶ್ಯ
Rakesh Nayak Manchi
|

Updated on: Aug 03, 2023 | 7:56 PM

Share

ಬೆಂಗಳೂರು, ಆಗಸ್ಟ್ 3: ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಸವಾರನ ಮೊಬೈಲ್ ದರೋಡೆ (Robbery) ನಡೆಸಿದ ಘಟನೆ ನಗರದ ಬೆನ್ಸನ್ ಟೌನ್‌ನ ಉಪ-ಪ್ರದೇಶವಾದ ವಿಲಿಯಮ್ಸ್ ಟೌನ್‌ನಲ್ಲಿರುವ ಮುಬೀನ್ ತಾಜ್ ಅಪಾರ್ಟ್‌ಮೆಂಟ್ ಸಂಕೀರ್ಣದ ಬಳಿ ನಡೆದಿದೆ. ಬುಧವಾರ (ಆಗಸ್ಟ್ 2) ನಡೆದ ಘಟನೆ ಸಂಬಂಧ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದರೋಡೆಕೋರರು ದರೋಡೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು maxdudes ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಲಾಗಿದೆ.

ಇದನ್ನೂ ಓದಿ: Insta Love: ಇನ್ಸ್​​​ಟಾಗ್ರಾಮ್​​​ನಲ್ಲಿ ಪರಿಚಯವಾಗಿದ್ದ ಯುವಕನ ಭೇಟಿಗೆ ಬಂದ ವಿವಾಹಿತ ಮಹಿಳೆ, ದರೋಡೆಗೆ ತುತ್ತಾದರು!

ವಿಡಿಯೋದಲ್ಲಿರುವ ಸಮಯದ ಪ್ರಕಾರ, ಈ ಘಟನೆ ಮಧ್ಯಾಹ್ನ 2.35 ರ ಸುಮಾರಿಗೆ ನಡೆದಿದೆ. ದೃಶ್ಯಾವಳಿಯಲ್ಲಿ ಇರುವಂತೆ, ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುತ್ತಾರೆ. ಈ ವೇಳೆ ಹೆಲ್ಮೆಟ್ ಧರಿಸಿದ ಇಬ್ಬರು ದರೋಡೆಕೋರರು ಬಂದ ಅಡ್ಡಗಟ್ಟಿದ್ದಾರೆ. ನಂತರ ಓರ್ವ ಮಾರಕಾಸ್ತ್ರ ತೋರಿಸಿ ದರೋಡೆಗೆ ಇಳಿದಿದ್ದಾನೆ. ಇದಕ್ಕೆ ಪ್ರತಿರೋಧ ಒಡ್ಡಿದಾಗ ಮಾರಕಾಸ್ತ್ರದಿಂದ ಹಲ್ಲೆಗೆ ಮುಂದಾಗುತ್ತಾನೆ. ಕೊನೆಗೆ ಮೊಬೈಲ್ ಕಸಿದು ಇಬ್ಬರು ಸ್ಥಳದಿಂದ ಪರಾರಿಯಾಗುತ್ತಾರೆ.

ಟ್ವೀಟ್​ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.”

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್