AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಇಬ್ಬರು ಮಹಿಳೆಯರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಒಬ್ಬಾಕೆಯ ಸಾವಿಗೆ ಆಕೆಯ ಗಂಡನೇ ಕಾರಣ ಎಂದು ಮಹಿಳೆಯ ಪೋಷಕರು ಆರೋಪಿಸುತ್ತಾ ಇದ್ದಾರೆ. ಮತ್ತೊಬ್ಬ ಮಹಿಳೆ ಶವ ಬೇರೆಯವರ ಅಪಾರ್ಟ್​ಮೆಂಟ್​ನಲ್ಲಿ ಸಿಕ್ಕಿದೆ. ಎರಡೂ ಘಟನೆಗಳ ವಿವರ ಇಲ್ಲಿದೆ.

ಬೆಂಗಳೂರು: ಇಬ್ಬರು ಮಹಿಳೆಯರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ನಿಷಾ ಚೌಧರಿ ಹಾಗೂ ಆಕೆಯ ಪತಿ ತರುಣ್ ಚೌಧರಿ
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 06, 2024 | 2:30 PM

Share

ಬೆಂಗಳೂರು, ಆಗಸ್ಟ್ 6: ಎರಡು ವರ್ಷಗಳ ಹಿಂದಷ್ಟೇ ತರುಣ್ ಚೌಧರಿ ಎಂಬ ಯುವಕನನ್ನು ವಿವಾಹವಾಗಿದ್ದ ತನಿಷಾ ಚೌಧರಿ ಎಂಬಾಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಬೆಂಗಳೂರಿನ ಆಡುಗೋಡಿಯಲ್ಲಿ ಪತ್ತೆಯಾಗಿದೆ. ಇದೀಗ ತನಿಷಾ ಪೋಷಕರು ಆಕೆಯ ಗಂಡನ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಅಂತಾ ಆರೋಪಿಸುತ್ತಿದ್ದಾರೆ.

ರಾಜಸ್ಥಾನದ ಮೂಲಕ ತರುಣ್ ಚೌಧರಿ ಬೆಂಗಳೂರಿನ ಆಡುಗೋಡಿಯಲ್ಲಿ ಚಿನ್ನದ ಅಂಗಡಿ ಇಟ್ಟುಕೊಂಡಿದ್ದರು. 2022ರಲ್ಲಿ ತರುಣ್ ಚೌಧರಿ ಜೊತೆ ರಾಜಸ್ಥಾನದ ಮೂಲದ ತನಿಷಾ ಮದುವೆ ಆಗಿತ್ತು. ತನಿಷಾ ಪೋಷಕರು ವರದಕ್ಷಿಣೆ, ಕಾರು ಕೊಟ್ಟು ಮದುವೆ ಮಾಡಿಕೊಟ್ಟಿದ್ದರು. ಹೀಗಿದ್ದರೂ ಪದೇಪದೆ ವರದಕ್ಷಿಣೆಗಾಗಿ ತರುಣ್ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಸೋಮವಾರ ತನಿಷಾ ಪೋಷಕರಿಗೆ ಕರೆ ಮಾಡಿದ್ದ ತರುಣ್, ನಿಮ್ಮ ಮಗಳು 50 ಮೆಟ್ಟಿಲಿನಿಂದ ಜಾರಿ ಬಿದ್ದಿದ್ದಾಳೆ ಬೇಗ ಬನ್ನಿ ಎಂದಿದ್ದ. ಸದ್ಯ ಹೈದರಾಬಾದ್​ನಲ್ಲಿ ನೆಲೆಸಿರುವ ತನಿಷಾ ಕುಟುಂಬದವರು ಗಾಬರಿಯಲ್ಲಿ ಬೆಂಗಳೂರಿಗೆ ಬಂದಿದ್ದಾರೆ. ಇಲ್ಲಿಗೆ ಬಂದ್ಮೇಲೆ ತನಿಷಾ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿತ್ತು ಎಂಬ ವಿಚಾರ ಗೊತ್ತಾಗಿದೆ. ಸದ್ಯ ತರುಣ್ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಲ್ಲೇಶ್ವರಂ ಸಾಯಿ ರೆಸಿಡೆನ್ಸಿಯಲ್ಲಿ ಮಹಿಳೆ ಆತ್ಮಹತ್ಯೆ

ಇತ್ತ ಮಲ್ಲೇಶ್ವರಂನ ಸಾಯಿ ರೆಸಿಡೆನ್ಸಿಯಲ್ಲಿ ಮಹಿಳೆಯೊಬ್ಬಳು ಬಾಲ್ಕನಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಯಾರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಈಕೆ ಈ ಅಪಾರ್ಟ್​ಮೆಂಟ್​ನಲ್ಲಿ ವಾಸ ಇದ್ದವಳೂ ಅಲ್ಲ. ಸದ್ಯ ಮಹಿಳೆ ಧರಿಸಿದ್ದ ಬಟ್ಟೆಯ ಜೇಬಿನಲ್ಲಿ ಬಸ್​​ ಟಿಕೆಟ್ ಮತ್ತು ಸಿನಿಮಾ ಟಿಕೆಟ್ ಪತ್ತೆಯಾಗಿದೆ. ಭಾನುವಾರ ನವರಂಗ್ ಥಿಯೇಟರ್​ನಲ್ಲಿ ಈ ಮಹಿಳೆ ಸಿನಿಮಾ ನೋಡಿದ್ದಾಳೆ. ಇಂದು ಬೆಳಗ್ಗೆ 6 ಗಂಟೆಗೆ ಮೆಜೆಸ್ಟಿಕ್​​ನಿಂದ ಮಲ್ಲೇಶ್ವರಂಗೆ ಬಿಎಂಟಿಸಿ ಬಸ್​ನಲ್ಲಿ ಬಂದಿದ್ದಾಳೆ. ಬೆಳಗ್ಗೆ 7:20 ಕ್ಕೆ ಅಪಾರ್ಟ್ಮೆಂಟ್ ಬಳಿ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಪಾರ್ಟ್​ಮೆಂಟ್​ನಲ್ಲಿ ಯಾರೂ ಇಲ್ಲದ್ದು, ಸಿಸಿಟಿವಿ ಇಲ್ಲದ್ದನ್ನ ನೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೇಣು ಹಾಕಿಕೊಳ್ಳಲು ಹೊಸ ಹಗ್ಗ ಖರೀದಿ ಮಾಡಿ ತಂದಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ: ಅಮಿತ್ ಶಾಗೆ ಮುಟ್ಟಿದ ಯಾದಗಿರಿ ಪಿಎಸ್ಐ ಪರಶುರಾಮ ನಿಗೂಢ ಸಾವಿನ ಸುದ್ದಿ

ಸದ್ಯ ಮೃತದೇಹವನ್ನು ಕೆಸಿ ಜನರಲ್ ಆಸ್ಪತ್ರೆಗೆ ರವಾನಿಸಿರುವ ಪೊಲೀಸರು‌, ಈಕೆ ಯಾರು? ಹಿನ್ನೆಲೆ ಏನು ಎಂಬುದನ್ನು ಪತ್ತೆ ಮಾಡಲು ತನಿಖೆ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Tue, 6 August 24

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ