AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PFI Ban: ಇಂದು ಕರ್ನಾಟಕಕ್ಕೆ ಯುಎಪಿಎ: ಪಿಎಫ್​ಐ ನಿಷೇಧದ ಬಗ್ಗೆ ವಿಚಾರಣೆ

ಕರ್ನಾಟಕದ ವಿವಿಧೆಡೆ ಮೂರು ದಿನಗಳ ಕಾಲ ಪ್ರಾಧಿಕಾರದ ಸದಸ್ಯರು ಸಂಚರಿಸಿ, ಮಾಹಿತಿ ಸಂಗ್ರಹಿಸಲಿದ್ದಾರೆ.

PFI Ban: ಇಂದು ಕರ್ನಾಟಕಕ್ಕೆ ಯುಎಪಿಎ: ಪಿಎಫ್​ಐ ನಿಷೇಧದ ಬಗ್ಗೆ ವಿಚಾರಣೆ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ (ಸಂಗ್ರಹ ಚಿತ್ರ)Image Credit source: PTI
TV9 Web
| Edited By: |

Updated on:Jan 27, 2023 | 10:39 AM

Share

ಬೆಂಗಳೂರು: ಸಮಾಜಬಾಹಿರ ಕೃತ್ಯ ನಡೆಸುತ್ತಿರುವ ಆರೋಪದ ಮೇಲೆ ಭಾರತದಲ್ಲಿ ಪಿಎಫ್​ಐ ಮತ್ತು ಅದರ ಸಹವರ್ತಿ ಸಂಸ್ಥೆಗಳನ್ನು ನಿಷೇಧಿಸಿ ಭಾರತ ಸರ್ಕಾರ ಹೊರಡಸಿದ್ದ ಆದೇಶವನ್ನು ಊರ್ಜಿತಗೊಳಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯುಎಪಿಎ (Unlawful Activities Prevention Act – UAPA) ಪ್ರಾಧಿಕಾರವು ದೇಶದ ವಿವಿಧೆಡೆ ವಿಚಾರಣೆ ಆರಂಭಿಸಿದೆ. ಈ ಸಂಬಂಧ ಇಂದು (ಜ 27) ಕರ್ನಾಟಕಕ್ಕೆ ಪ್ರಾಧಿಕಾರದ ಸದಸ್ಯರು ಆಗಮಿಸುತ್ತಿದ್ದು, ರಾಜ್ಯದ ವಿವಿಧೆಡೆ 3 ದಿನ ಸಂಚರಿಸಿ, ಮಾಹಿತಿ ಸಂಗ್ರಹಿಸಲಿದ್ದಾರೆ.

ವಿಚಾರಣೆ ವೇಳೆ ಪಿಎಫ್​ಐ ನಿಷೇಧಕ್ಕೆ ಕಾರಣವಾದ ಅಂಶಗಳು, ನಿಷೇಧದ ಪರ ಹಾಗೂ ವಿರೋಧ ಇರುವ ಅಂಶಗಳ ಬಗ್ಗೆ ಪ್ರಾಧಿಕಾರ ಸದಸ್ಯರು ಮಾಹಿತಿ ಪಡೆದುಕೊಳ್ಳಲಿದ್ದಾರೆ. ಪಿಎಫ್​ಐ ಸದಸ್ಯರಿಂದ ನಡೆದ ಹತ್ಯೆ ಪ್ರಕರಣಗಳ ತನಿಖಾಧಿಕಾರಿಗಳ ವಿಚಾರಣೆಯೂ ನಡೆಯಲಿದೆ. ಈ ಸಂಬಂಧ ಈಗಾಗಲೇ ಎನ್​ಐಎ ಸೇರಿ ಇತರ ತನಿಖಾಧಿಕಾರಿಗಳಿಗೆ ನೊಟೀಸ್ ಜಾರಿ ಮಾಡಲಾಗಿದೆ. ಪ್ರಾಧಿಕಾರದ ಸದಸ್ಯರು ಕರ್ನಾಟಕಕ್ಕೆ ಬರುವ ಮೊದಲು ಕೇರಳ ಹಾಗೂ ತಮಿಳುನಾಡಿನಲ್ಲಿ ವಿಚಾರಣೆ ನಡೆಸಿದ್ದರು. ಹಲವು ಪ್ರಕರಣಗಳ ವಿಚಾರಣೆ ಬಳಿಕ ಪ್ರಾಧಿಕಾರವು ತೀರ್ಪು ಪ್ರಕಟಿಸಲಿದೆ. ಪಿಎಫ್​ಐ ನಿಷೇಧದ ಬಗ್ಗೆ ಕೇಂದ್ರ ಸರ್ಕಾರದ ಆದೇಶದ ಸ್ವರೂಪವೂ ಅನಂತರ ಅಂತಿಮಗೊಳ್ಳಲಿದೆ.

ಭಯೋತ್ಪಾದನಾ ಸಂಘಟನೆಗಳ ಪಟ್ಟಿಗೆ ಪಿಎಫ್​ಐ

ಕೇಂದ್ರ ಸರ್ಕಾರವು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಯುಎಪಿಎ ಕಾಯ್ದೆಯ ಸೆಕ್ಷನ್ 35ರ ಅಡಿಯಲ್ಲಿ ಪಿಎಫ್​ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿತ್ತು. ಪಿಎಫ್‌ಐ ಜೊತೆಗೆ ಅದರ ಅಂಗಸಂಸ್ಥೆಗಳಾದ ರೆಹಾಬ್ ಇಂಡಿಯಾ ಫೌಂಡೇಷನ್ (ಆರ್‌ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ನ್ಯಾಷನಲ್ ಕಾನ್ಫೆಡರೇಷನ್ ಆಫ್ ಹ್ಯೂಮನ್ ರೈಟ್ಸ್ ಅಸೋಸಿಯೇಷನ್ (ಎನ್‌ಸಿಎಚ್‌ಆರ್‌ಒ), ನ್ಯಾಷನಲ್ ವಿಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಷನ್ ಮತ್ತು ರೆಹಾಬ್ ಫೌಂಡೇಷನ್ (ಕೇರಳ) ಸಂಘಟನೆಗಳನ್ನೂ ನಿಷೇಧಿಸಲಾಗಿತ್ತು.

ಏನಿದು ಯುಎಪಿಎ ಕಾಯ್ದೆ

ಕಾನೂನುಬಾಹಿರ ಚಟುವಟಿಕೆಗಳ ಸಂಘಟನೆಗಳನ್ನು ತಡೆಯುವ ಗುರಿಯನ್ನು ಯುಎಪಿಎ ಕಾಯ್ದೆಯು ಹೊಂದಿದೆ. ಭಾರತದ ಸಾರ್ವಭೌಮತ್ವದ ವಿರುದ್ಧ ನಡೆಸುವ ಚಟುವಟಿಕೆಗಳನ್ನು ತಡೆಯಲು ಈ ಕಾಯ್ದೆ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಅಧಿಕಾರ ನೀಡುತ್ತದೆ. ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಯಾವುದೇ ಕಾನೂನಿನ ಪ್ರಕ್ರಿಯೆ ಇಲ್ಲದೆ ವ್ಯಕ್ತಿಗಳನ್ನು ಉಗ್ರರು ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡಲಾಗಿತ್ತು. ಈ ತಿದ್ದುಪಡಿ ಮೂಲಕ ದೊರೆತ ಅಧಿಕಾರ ಬಳಸಿಕೊಂಡು ಕೇಂದ್ರ ಸರ್ಕಾರವು ಪಿಎಫ್​ಐ ಮತ್ತು ಅದರ ಅಂಗಸಂಸ್ಥೆಗಳನ್ನು ನಿಷೇಧಿಸಿತ್ತು.

Published On - 10:37 am, Fri, 27 January 23

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ