ಕೊನೆಗೂ ದರ ಕಡಿಮೆ ಮಾಡಿದ ಓಲಾ, ಊಬರ್​ ಕಂಪನಿ: ಇಂದಿನಿಂದ ಮಿನಿಮಮ್ ದರ ಪಡೆಯಲು ಹೈಕೋರ್ಟ್​ ಸೂಚನೆ

ಮುಂದಿನ 15 ದಿನಗಳವರೆಗೆ ಮಿನಿಮಮ್ ದರ ಪಡೆದುಕೊಳ್ಳಬೇಕು. ಪ್ರಯಾಣಿಕರ ಸಭೆ ಮಾಡಿ, ದರ ನಿಗದಿ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಕೊನೆಗೂ ದರ ಕಡಿಮೆ ಮಾಡಿದ ಓಲಾ, ಊಬರ್​ ಕಂಪನಿ: ಇಂದಿನಿಂದ ಮಿನಿಮಮ್ ದರ ಪಡೆಯಲು ಹೈಕೋರ್ಟ್​ ಸೂಚನೆ
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 15, 2022 | 3:17 PM

ಬೆಂಗಳೂರು: ಇಂದಿನಿಂದ ಮಿನಿಮಮ್ ದರ ಪಡೆಯಲು ಊಬರ್ (Uber) ಕಂಪನಿ ಮುಂದಾಗಿದ್ದು, 2 ಕಿ.ಮೀ. ದೂರಕ್ಕೆ ಕೇವಲ 30-35 ರೂ. ಮಾತ್ರ ಚಾರ್ಜ್ ಮಾಡಲು ನಿರ್ಧರಿಸಿದೆ. ದುಪ್ಪಟ್ಟು ದರ ವಸೂಲಿ ಬಗ್ಗೆ ಟಿವಿ9 ಮೊದಲು ಸುದ್ದಿ ಮಾಡಿತ್ತು. ನಿರಂತರ ವರದಿಯಿಂದ ಓಲಾ (Ola), ಊಬರ್ ಕಂಪನಿ ಕೊನೆಗೂ ದರ ಕಡಿಮೆ ಮಾಡಿದೆ. ನಿನ್ನೆ ಹೈಕೋರ್ಟ್ ನ್ಯಾಯಾಧೀಶರು 2021ರ ದರವನ್ನು ಮಾತ್ರ ಪಡೆದುಕೊಳ್ಳುವುದರ ಜೊತೆಗೆ 10% ಹೆಚ್ಚಿನ ದರ ಮತ್ತು ಜಿಎಸ್ಟಿ ಸೇರಿಸಿ ಪ್ರಯಾಣಿಕರಿಂದ ಹಣ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದರು. ಮುಂದಿನ 15 ದಿನಗಳವರೆಗೆ ಮಿನಿಮಮ್ ದರವನ್ನು ಮಾತ್ರ ಪ್ರಯಾಣಿಕರಿಂದ ತೆಗೆದುಕೊಳ್ಳಬೇಕು. ನಂತರ ಓಲಾ, ಊಬರ್ ಮತ್ತು ರ್ಯಾಪಿಡೋ ಕಂಪನಿ ಜೊತೆಗೆ ಆರ್​ಟಿಓ ಅಧಿಕಾರಿಗಳು, ಆಟೋ ಸಂಘಟನೆಗಳು ಹಾಗೂ ಪ್ರಯಾಣಿಕರ ಸಭೆ ಮಾಡಿ, ದರ ನಿಗದಿ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ವಾಣಿವಿಲಾಸ ರೋಡ್​ನಿಂದ ದೊಡ್ಡ ಗಣಪತಿ ದೇವಸ್ಥಾನಕ್ಕೆ 33.29 ಪೈಸೆ ಮಾತ್ರ. ಆದರೆ 1.7 ಕಿಮೀ ದೂರವಿರುವ ಮಾರ್ಗಕ್ಕೆ ಊಬರ್ ಕಂಪನಿ ನಿನ್ನೆ ಮೊನ್ನೆ 80 ರಿಂದ 100 ರೂ. ಚಾರ್ಜ್ ಮಾಡಿದೆ ಎನ್ನಲಾಗುತ್ತಿದೆ.

ಹೈ ಕೋರ್ಟ್ ಆದೇಶಕ್ಕೂ ಡೊಂಟ್ ಕೇರ್ ಎಂದ ಓಲಾ!

ಇನ್ನು ಮುಂದಿನ ಹದಿನೈದು ದಿನಗಳವರೆಗೆ ಮಿನಿಮಮ್ ದರವನ್ನು ಮಾತ್ರ ಚಾರ್ಜ್ ಮಾಡಬೇಕು ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದ್ದು, ಹೈ ಕೋರ್ಟ್ ಆದೇಶಕ್ಕೂ ಓಲಾ ಕಂಪನಿ ಡೊಂಟ್ ಕೇರ್ ಎನ್ನುತ್ತಿದೆ. ಇಂದು ಬೆಳಿಗ್ಗಿನಿಂದಲೇ ಊಬರ್ ಕಂಪನಿ ದರವನ್ನು ಇಳಿಸಿ ಕೋರ್ಟ್ ಸೂಚನೆ ಪಾಲನೆ ಮಾಡಿದರೆ, ಇತ್ತ ಓಲಾ ಕಂಪನಿ ಮಾತ್ರ ಹಿಂದಿನಂತೆ ದುಪ್ಪಟ್ಟು ದರ ವಸೂಲಿ ಮಾಡುತ್ತಿದೆ. ಹಾಗಾದರೆ ಹೈ ಕೋರ್ಟ್ ಆದೇಶಕ್ಕೆ ಓಲಾ ಕಂಪನಿ ಗೌರವ ನೀಡುತ್ತಿಲ್ಲ ಎನ್ನಲಾಗುತ್ತಿದೆ. ವಾಣಿ ವಿಲಾಸ ರೋಡ್​ನಿಂದ ದೊಡ್ಡ ಗಣಪತಿ ದೇವಸ್ಥಾನಕ್ಕೆ ಊಬರ್​​​ನಲ್ಲಿ 33 ರೂ. ಆದರೆ ಅದೇ ಮಾರ್ಗಕ್ಕೆ ಓಲಾ ಮಾತ್ರ ಬರೋಬ್ಬರಿ 59 ರೂ. ವಸೂಲಿ ಮಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:06 pm, Sat, 15 October 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು