AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮನೆ ಮಾಡಿದ ಯುಗಾದಿ ಸಂಭ್ರಮ; ಹಣ್ಣು, ಹೂವುಗಳ ಬೆಲೆಗೆ ಗ್ರಾಹಕರು ಶಾಕ್!

ಹಣ್ಣುಗಳಿಗೆ 20 ರಿಂದ 30 ರೂಪಾಯಿ, ಹೂವುಗಳಿಗೆ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ. ಯುಗಾದಿ ಹಬ್ಬದ ಹಿನ್ನೆಲೆ ಇಂದು ಒಂದು ಕಟ್ಟು ಮಾವಿನ ಎಲೆಗೆ 10 ರೂ. ಇದೆ.

ಬೆಂಗಳೂರಿನಲ್ಲಿ ಮನೆ ಮಾಡಿದ ಯುಗಾದಿ ಸಂಭ್ರಮ; ಹಣ್ಣು, ಹೂವುಗಳ ಬೆಲೆಗೆ ಗ್ರಾಹಕರು ಶಾಕ್!
ಕೆಆರ್ ಮಾರ್ಕೆಟ್​ನಲ್ಲಿ ಜನ ಸಾಗರ
TV9 Web
| Edited By: sandhya thejappa|

Updated on:Apr 02, 2022 | 9:51 AM

Share

ಬೆಂಗಳೂರು: ನಾಡಿನೆಲ್ಲೆಡೆ ಇಂದು (ಏಪ್ರಿಲ್ 2) ಚಾಂದ್ರಮಾನ ಯುಗಾದಿ (Ugadi) ಹಬ್ಬ. ಬೆಳಿಗ್ಗೆ ಬೇಗನೇ ಎದ್ದು ಮನೆ ಮಂದಿ ಎಲ್ಲಾ ದೇವರ ಪೂಜೆಗೆ ಸಿದ್ಧಪಡಿಸುವುದು, ಸಂಜೆ ಊಟಕ್ಕೆ ತಯಾರಿ ಮಾಡುವುದೇ ಒಂಥರಾ ಸಂಭ್ರಮ ಸಡಗರ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ (Bengaluru) ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆಯಲ್ಲಿ ದೇವರಿಗೆ ನೈವೇದ್ಯ ಇಟ್ಟು ಪೂಜೆ ಮಾಡುವುದಕ್ಕೆ ತಯಾರಿ ನಡೆಸುತ್ತಿದ್ದಾರೆ. ಕಳೆದ 2 ವರ್ಷದಿಂದ ಕೊರೊನಾ (Coronvirus) ಕಾರಣದಿಂದ ಯುಗಾದಿ ಹಬ್ಬವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಆದರೆ ಈ ಬಾರಿ ಎಲ್ಲೆಲ್ಲೂ ಯುಗಾದಿ ಹಬ್ಬ ಸಂಭ್ರಮ ಜೋರಾಗಿದೆ.

ಇನ್ನು ಹಬ್ಬದ ಹಿನ್ನೆಲೆ ನಗರದ ಜನರಿಗೆ ಶಾಕ್ ಎದುರಾಗಿದ್ದು, ಹಣ್ಣು , ಹೂ ಬೆಲೆ ಹೆಚ್ಚಳವಾಗಿದೆ. ಹಣ್ಣುಗಳಿಗೆ 20 ರಿಂದ 30 ರೂಪಾಯಿ, ಹೂವುಗಳಿಗೆ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ. ಯುಗಾದಿ ಹಬ್ಬದ ಹಿನ್ನೆಲೆ ಇಂದು ಒಂದು ಕಟ್ಟು ಮಾವಿನ ಎಲೆಗೆ 10 ರೂ. ಇದೆ. ಬೇವಿನ ಸೊಪ್ಪಿಗೆ 20 ರೂ. ನಿಗದಿಯಾಗಿದೆ. ಒಂದು ಮಾರು ತುಳಸಿಗೆ 50 ರೂ. ಇದ್ದರೆ. ಒಂದು ಕೆಜಿ ಬೆಲ್ಲಕ್ಕೆ (ಅಚ್ಚು/ಉಂಡೆ) 50- 60 ರೂಪಾಯಿ ಇದೆ.

ಇಂದಿನ ಹೂವುಗಳ ಬೆಲೆ ಹೀಗಿದೆ: * ಒಂದು ಕೆಜಿ ಮಲ್ಲಿಗೆ ಮೊಗ್ಗು – 600 ರೂ. * ಒಂದು ಸೇವಂತಿಗೆ – 200 ರೂ. * ಕನಕಾಂಬರ 400 – ರೂ. * ಸುಗಂಧರಾಜ 80 – ರೂ. * ಗುಲಾಬಿ 150 – ರೂ. * ಚೆಂಡು ಹೂವು- 60 ರೂಪಾಯಿ ಇದೆ.

ಇಂದಿನ ಹಣ್ಣುಗಳ ಬೆಲೆ ಹೀಗಿದೆ: * ಒಂದು ಕೆಜಿ ಸೇಬು – 160 ರೂ. * ದಾಳಿಂಬೆ 250 – ರೂ * ಮೂಸಂಬಿ 100 – ರೂ. * ಆರೆಂಜ್ 120 – ರೂ. * ಸಪೋಟ 100 – ರೂ. * ಸೀಬೆಹಣ್ಣು 120 – ರೂ. * ಏಲಕ್ಕಿ ಬಾಳೆಹಣ್ಣು – 70 ರೂ. * ದ್ರಾಕ್ಷಿ 100-120 ರೂ. ಇದೆ.

ಇದನ್ನೂ ಓದಿ

Andre Russell: ಸಿಕ್ಸರ್ ಮ್ಯಾನ್ ರಸೆಲ್ ಅವರ ಒಂದೊಂದು ಸಿಕ್ಸ್​​ ಹೇಗಿತ್ತು ಗೊತ್ತೇ?: ಇಲ್ಲಿದೆ ನೋಡಿ

ಸಚಿವ ಎಮ್ ಟಿ ಬಿ ನಾಗರಾಜ ಕ್ಷೇತ್ರದ ಜನರಿಗೆ ಯುಗಾದಿ ಹಬ್ಬಕ್ಕೆ ಅಕ್ಕಿ, ಬೇಳೆ ಮತ್ತು ಅಡುಗೆ ಎಣ್ಣೆ ಹಂಚಿದರು!

Published On - 8:22 am, Sat, 2 April 22

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?