AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಯುಗಾದಿ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಹೂವು-ಹಣ್ಣಿನ ದರ ಏರಿಕೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾರ್ಚ್ 18 ರಂದೇ ಯುಗಾದಿಯ ಸಂಭ್ರಮ ಕಂಡುಬರಲು ಶುರುವಾಗಿದೆ. ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ವಿವಿಧೆಡೆ ಹಬ್ಬಕ್ಕೆ ವಸ್ತುಗಳ ಖರೀದಿ ಜೋರಾಗಿದೆ. ಆದರೆ, ಹಬ್ಬದ ಸಂದರ್ಭದಲ್ಲೇ ಹೂವು, ಹಣ್ಣುಗಳ ದರ ತುಸು ಏರಿಕೆಯಾಗಿದ್ದು, ಗ್ರಾಹಕರಿಗೆ ಬಿಸಿ ಮುಟ್ಟಿಸಿದೆ. ಹೂವು-ಹಣ್ಣಿನ ದರ ವಿವರ ಇಲ್ಲಿದೆ.

ಬೆಂಗಳೂರು: ಯುಗಾದಿ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಹೂವು-ಹಣ್ಣಿನ ದರ ಏರಿಕೆ
ಸಾಂದರ್ಭಿಕ ಚಿತ್ರ
ಪ್ರದೀಪ್​ ಚಿಕ್ಕಾಟಿ
| Edited By: |

Updated on: Mar 18, 2026 | 7:05 AM

Share

ಬೆಂಗಳೂರು, ಮಾರ್ಚ್ 18: ಮಾರ್ಚ್ 19 ರಂದು ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ (Bangalore) ಹೃದಯಭಾಗವಾದ ಕೆಆರ್ ಮಾರುಕಟ್ಟೆಯಲ್ಲಿ (KR Market) ಬುಧವಾರ ಬೆಳ್ಳಂಬೆಳಿಗ್ಗೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಹಬ್ಬಕ್ಕೆ ಬೇಕಾದ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಜನ ಸಾಗರವೇ ಹರಿದುಬಂದಿದೆ.

ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣುಗಳ ದರ ಕೊಂಚ ಏರಿಕೆ ಕಂಡಿದೆ. ವಿಶೇಷವಾಗಿ ಮಲ್ಲಿಗೆ ಹೂವು ಸಾಮಾನ್ಯ ದಿನಗಳಿಗಿಂತ ದುಬಾರಿಯಾಗಿದ್ದು, ಕೆಜಿಗೆ 1,000 ರೂಪಾಯಿ ತನಕ ಮಾರಾಟವಾಗುತ್ತಿದೆ. ಹಬ್ಬದ ಪ್ರಮುಖ ಆಕರ್ಷಣೆಯಾದ ಬೇವು ಮತ್ತು ಮಾವಿನ ಸೊಪ್ಪಿಗೂ ಭಾರಿ ಬೇಡಿಕೆ ಸೃಷ್ಟಿಯಾಗಿದೆ.

ಹೂವು ದರ ವಿವರ (ಕೆಜಿಗೆ ರೂ.ಗಳಲ್ಲಿ)

  • ಮಲ್ಲಿಗೆ – 1,000
  • ಮಲ್ಲಿಗೆ ಹೂವಿನ ಹಾರ – 100
  • ಸೇವಂತಿಗೆ – 200-250
  • ಗುಲಾಬಿ – 250
  • ಚೆಂಡು ಹೂ – 40-50
  • ಒಂದು ಕಟ್ಟು ಬೇವಿನ ಸೊಪ್ಪು – 20
  • ಒಂದು ಕಟ್ಟು ಮಾವಿನ ಸೊಪ್ಪು- 25

ಹಣ್ಣುಗಳ ದರ ವಿವರ (ಕೆಜಿಗೆ ರೂ.ಗಳಲ್ಲಿ)

  • ಖರಬೂಜ – 100
  • ಬೇಲದ ಹಣ್ಣು – 50
  • ದ್ರಾಕ್ಷಿ- 120
  • ದಾಳಿಂಬೆ – 220

ಇದನ್ನೂ ಓದಿ: ಯುಗಾದಿ ಹಬ್ಬದಂದು ಬೇವು-ಬೆಲ್ಲ ಹಂಚುವುದರ ಹಿಂದಿನ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವೇನು?

ಬೆಲೆ ಏರಿಕೆಯ ನಡುವೆಯೂ ಜನರು ಹಬ್ಬದ ಸಂಭ್ರಮಕ್ಕೆ ಖರೀದಿಗಾಗಿ ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ. ಕೆಆರ್ ಮಾರ್ಕೆಟ್ ಮಾತ್ರವಲ್ಲದೆ ಮಲ್ಲೇಶ್ವರಂ, ಗಾಂಧಿ ಬಜಾರ್ ಹಾಗೂ ಯಶವಂತಪುರ ಮಾರುಕಟ್ಟೆಗಳಲ್ಲೂ ಯುಗಾದಿ ಹಬ್ಬದ ಖರೀದಿ ಸಡಗರ ಕಂಡುಬರುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!