AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಶಾಕ್​: ಯುಗಾದಿ -ರಂಜಾನ್ ಹಬ್ಬ ಪ್ರಯುಕ್ತ ಖಾಸಗಿ ಬಸ್​​ ಟಿಕೆಟ್ ಡಬಲ್, ತ್ರಿಬಲ್

ಯುಗಾದಿ ಮತ್ತು ರಂಜಾನ್ ಹಬ್ಬಗಳಿಂದಾಗಿ ಬೆಂಗಳೂರಿನಿಂದ ಊರುಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಖಾಸಗಿ ಬಸ್ ಮಾಲೀಕರು ಟಿಕೆಟ್ ದರವನ್ನು 50% ರಷ್ಟು ಏರಿಸಿದ್ದಾರೆ. ಈ ಅತಿಯಾದ ದರ ಏರಿಕೆಯಿಂದ ಪ್ರಯಾಣಿಕರು ತೀವ್ರ ಅಸಮಾಧಾನಗೊಂಡಿದ್ದಾರೆ. ಸಾರಿಗೆ ಇಲಾಖೆ ಮತ್ತು ಆರ್ಟಿಒ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಖಾಸಗಿ ಬಸ್ ಮಾಲೀಕರ ಮೇಲೆ ಕ್ರಮ ಜರುಗಿಸಲು 10 ತಂಡಗಳನ್ನು ರಚಿಸಲಾಗಿದೆ.

ಪ್ರಯಾಣಿಕರಿಗೆ ಶಾಕ್​: ಯುಗಾದಿ -ರಂಜಾನ್ ಹಬ್ಬ ಪ್ರಯುಕ್ತ ಖಾಸಗಿ ಬಸ್​​ ಟಿಕೆಟ್ ಡಬಲ್, ತ್ರಿಬಲ್
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 28, 2025 | 7:29 PM

Share

ಬೆಂಗಳೂರು, ಮಾರ್ಚ್​ 28: ಯುಗಾದಿ (Ugadi) ಮತ್ತು ರಂಜಾನ್​ (Ramzan) ಹಬ್ಬ ಒಟ್ಟಿಗೆ ಬಂದ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಗಳಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ (Bengaluru) ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ಬಸ್​ ಮಾಲೀಕರು ಟಿಕೆಟ್​ ದರ ಏರಿಕೆ ಮಾಡಿದ್ದಾರೆ. ಖಾಸಗಿ ಬಸ್ ಟಿಕೆಟ್ ದರ ಶೇ.50ರವರೆಗೂ ಏರಿಕೆಯಾಗಿದೆ.

ಇಷ್ಟೊಂದು ಪ್ರಮಾಣದಲ್ಲಿ ಟಿಕೆಟ್ ದರ ಏರಿಕೆ ಮಾಡಿದ್ದರೂ, ಕಡಿವಾಣ ಹಾಕದ ಕಣ್ಮುಚ್ಚಿ ಕುಳುತಿರುವ ಸಾರಿಗೆ ಇಲಾಖೆ ಮತ್ತು ಆರ್​ಟಿಒ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಅಸಮಾಧಾನಗೊಂಡಿದ್ದಾರೆ. ಹಬ್ಬ ಅಥವಾ ಬೇಡಿಕೆಯ ಸಂದರ್ಭಗಳಲ್ಲಿ ಟಿಕೆಟ್ ನೆಪದಲ್ಲಿ ಖಾಸಗಿ ಬಸ್​ ಮಾಲೀಕರು ಸುಲಿಗೆ ಮಾಡುತ್ತಿದ್ದಾರೆ ಎಂದು ಪ್ರಯಾಣಿಕರು ಆಕ್ರೋಶಗೊಂಡಿದ್ದಾರೆ . ಕೊನೆಗೆ ಪ್ರಯಾಣಿಕರು ಬೇರೆ ವಿಧಿಯಿಲ್ಲದೆ ದುಪ್ಪಟ್ಟು ದರ ಕೊಟ್ಟು ತೆತ್ತು ಪ್ರಯಾಣಿಸುತ್ತಿದ್ದಾರೆ.

ಖಾಸಗಿ ಟಿಕೆಟ್ ದರ ಗಗನಕ್ಕೆ!

ಊರು ಸಾಮಾನ್ಯ ದರ (ರೂ.ಗಳಲ್ಲಿ)
ಈಗಿನ ದರ (ರೂ.ಗಳಲ್ಲಿ) (ಬೆಂಗಳೂರಿನಿಂದ)
ಶಿವಮೊಗ್ಗ 750 1000-1,500
ಮಂಗಳೂರು 900 1,500-2,000
ಹುಬ್ಬಳ್ಳಿ 1,000 1,500
ಬೆಳಗಾವಿ 1,000 1,400-1,700
ಕಾರವಾರ 1,000-1,500 2,000-3,000
ದಾವಣಗೆರೆ 800 1,500
ರಾಯಚೂರು 850 1,500

ಇದನ್ನೂ ಓದಿ: ಯುಗಾದಿ ಹಬ್ಬದಂದು ಏನು ಮಾಡಬೇಕು ಮತ್ತು ಏನು ಮಾಡಬಾರದು?

ಇದನ್ನೂ ಓದಿ
Image
ವಿಶ್ವಾವಸು ಸಂವತ್ಸರಕ್ಕೆ ಮೇಷದಿಂದ ಮೀನ ರಾಶಿ ತನಕ ಯುಗಾದಿ ವರ್ಷ ಭವಿಷ್ಯ
Image
ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿ, ರಂಜಾನ್​​ ಹಬ್ಬಕ್ಕೆ ಹೆಚ್ಚುವರಿ ಬಸ್
Image
ಯುಗಾದಿ, ರಂಜಾನ್​ಗೆ ಊರಿಗೆ ಹೋಗುವವರಿಗೆ ಶಾಕ್: ಬಸ್ ಟಿಕೆಟ್ ದರ ಭಾರಿ ಏರಿಕೆ
Image
ಯುಗಾದಿ, ರಂಜಾನ್: ಬೆಂಗಳೂರು, ಮೈಸೂರಿನಿಂದ ವಿಶೇಷ ರೈಲು

ಬಿಸಿ ಮುಟ್ಟಿಸಲು ಸಾರಿಗೆ ಇಲಾಖೆ ಪ್ಲಾನ್

ಪ್ರಯಾಣಿಕರು ಛೀಮಾರಿ ಹಾಕಿದ ಬಳಿಕ ಖಾಸಗಿ ಬಸ್ ಮಾಲೀಕರಿಗೆ ಬಿಸಿ ಮುಟ್ಟಿಸಲು ಬೆಂಗಳೂರು ಕೇಂದ್ರೀಯ ವಿಭಾಗ ಆರ್​ಟಿಒ ಅಧಿಕಾರಿಗಳು ಮುಂದಾಗಿದ್ದಾರೆ. ಬೆಂಗಳೂರು ಹಾಗೂ ಸುತ್ತಮುತ್ತ 10 ತಂಡಗಳ ಮೂಲಕ ಕಾರ್ಯಾಚರಣೆ ನಡೆಸಲು ಸಿದ್ಧವಾಗಿದೆ. ಬೆಂಗಳೂರು ಕೇಂದ್ರೀಯ ವಿಭಾಗದ ಆರ್​ಟಿಒ ಅಧಿಕಾರಿಗಳು ಕಲಾಸಿಪಾಳ್ಯ, ಆನಂದ್​ರಾವ್ ಸರ್ಕಲ್, ಮೈಸೂರ್ ರಸ್ತೆ, ಟಿನ್ ಫ್ಯಾಕ್ಟರಿ, ಗೋರಗುಂಟೆ ಪಾಳ್ಯ ಸೇರಿ 10 ಕಡೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವರದಿ: ಲಕ್ಷ್ಮೀ ನರಸಿಂಹ್

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್