AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಜಿಸಿಇಟಿ-2024: ಅಭ್ಯರ್ಥಿಗಳ ದಾಖಲೆಗಳ ಆಫ್ ಲೈನ್ ಪರಿಶೀಲನೆ ಆರಂಭ

ದೇಶಾದ್ಯಂತ ನೀಟ್ ಪರೀಕ್ಷೆಯ ವಿವಾದ ಭಾರೀ ಸದ್ದು ಮಾಡ್ತಿದೆ. ಎಕ್ಸಾಂ ಅಕ್ರಮ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಕೇಂದ್ರ ಸರ್ಕಾರ ಹಾಗೂ ಎನ್ಟಿಎ ವಿರುದ್ಧ ಸುಪ್ರೀಂ ಕೋರ್ಟ್ ಕೂಡ ಚಾಟಿ ಬೀಸಿದ್ದು, ಇತ್ತ ರಾಜ್ಯದಲ್ಲಿ ಸಿಇಟಿ ಕೌನ್ಸಲಿಂಗ್ ಮತಷ್ಟು ವಿಳಂಬ ಆತಂಕ ಹಿನ್ನಲೆ ಕೆಇಎ ಜೂನ್ 25ರಿಂದ ಯುಜಿಸಿಇಟಿ ದಾಖಲೆಗಳ ಆಫ್ ಲೈನ್ ಪರಿಶೀಲನೆ ಆರಂಭ ಮಾಡಿದೆ.

ಯುಜಿಸಿಇಟಿ-2024: ಅಭ್ಯರ್ಥಿಗಳ ದಾಖಲೆಗಳ ಆಫ್ ಲೈನ್ ಪರಿಶೀಲನೆ ಆರಂಭ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Jun 26, 2024 | 9:01 AM

Share

ಬೆಂಗಳೂರು, ಜೂನ್.26: ಯುಜಿಸಿಇಟಿ (UGCET) ದಾಖಲೆಗಳ ಆಫ್ ಲೈನ್ ಪರಿಶೀಲನೆ ಆರಂಭ ಮಾಡಲಾಗಿದೆ. ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ & ನ್ಯಾಚುರೋಪತಿ, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ ಕೋರ್ಸುಗಳು, ಬಿ.ಎಸ್ಸಿ ಆನರ್ಸ್ ಕೃಷಿ, ಬಿ.ಎಸ್ಸಿ ಆನರ್ಸ್ ರೇಷ್ಮೆ ಕೃಷಿ ಮುಂತಾದವು, ಬಿ.ಎಸ್ಸಿ ನರ್ಸಿಂಗ್, ಬಿ.ಫಾರ್ಮಾ, 2ನೇ ವರ್ಷದ ಬಿ-ಫಾರ್ಮಾ ಮತ್ತು ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಜೂನ್ 25ರಿಂದ ಜೂನ್ 29ರವರೆಗೆ ದಾಖಲೆಗಳ ಆಫ್ ಲೈನ್ ಪರಿಶೀಲನೆ ನಡೆಯಲಿದೆ.

ಯುಜಿಸಿಇಟಿ-2024ರ ಆನ್‌ಲೈನ್ ಅರ್ಜಿಯಲ್ಲಿ ಅರ್ಹತಾ ಕಂಡಿಕೆಗಳಾದ ಬಿ. ಸಿ. ಡಿ, ಐ, ಜೆ. ಕೆ. ಎಲ್. ಎಂ. ಎನ್, ಜೆಡ್- ಈ ಕ್ಲಾಸ್ ಗಳನ್ನು ಕ್ಷೇಮ್ ಮಾಡಿರುವ ಹಾಗೂ ರಾಂಕ್ ಪಡೆದಿರುವ ಅಭ್ಯರ್ಥಿಗಳಿಗೆ ಆಫ್ ಲೈನ್ ದಾಖಲಾತಿ ಪರಿಶೀಲನೆಯು ಜೂನ್ 25ರಿಂದ 29 ರವರೆಗೆ ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ. ಅಭ್ಯರ್ಥಿಗಳಿಗೆ ಖುದ್ದು ಹಾಜರಾಗಲು ಕೆಇಎ ಸೂಚಿಸಿದೆ. ಇನ್ನು ವೈ ಅರ್ಹತಾ ಕಂಡಿಕೆಯನ್ನು ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಅಗತ್ಯವಿಲ್ಲ ಅಂತಾ ಸ್ಪಷ್ಟಪಡಿಸಿದೆ. ವಿದ್ಯಾರ್ಥಿಗಳ ರಾಂಕ್ ಆಧರಿಸಿ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಿದ್ದು ಈಗಾಗಲೇ ಈ ವೇಳಾಪಟ್ಟಿಯನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: ಬಿಬಿಎಂಪಿಯಲ್ಲಿ ಗ್ಯಾರಂಟಿ ಯೋಜನೆ ಕಚೇರಿ! ಸಾರ್ವಜನಿಕರಿಂದ ಅಸಮಾಧಾನ

ಇನ್ನು ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಇ-ಮಾಹಿತಿ ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಹತಾ ರ್ಯಾಂಕ್ ಗೆ ಅನುಸಾರವಾಗಿ ಅವಶ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕಿದೆ ಅಂತಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕ ಪ್ರಸನ್ನ ಹೇಳಿದ್ದಾರೆ.

ಒಟ್ನಲ್ಲಿ ನೀಟ್ ಪರೀಕ್ಷೆಯ ಗೊಂದಲ ಕ್ಲಿಯರ್ ಬಳಿಕ ಎನ್ಟಿಎನಿಂದ ನೀಟ್ ಮೆರಿಟ್ ಲಿಸ್ಟ್ ಸಿಗುತ್ತಿದ್ದಂತೆ ಕೆಇಎ ಸಿಇಟಿ ಕೌನ್ಸಲಿಂಗ್ ಆರಂಭ ಮಾಡಲು ಮುಂದಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ