AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಸ್ತೆ ಗುಂಡಿಗೆ ತಾಯಿಯನ್ನು ಕಳೆದುಕೊಂಡ ಪುತ್ರಿಯ ಕಣ್ಣೀರಿನ ಮಾತು

ನಮ್ಮಂತಹ ಬಡವರ ಜೀವದ ಜೊತೆ ಆಟ ಆಡಬೇಡಿ ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಿ ಎಂದು ರಸ್ತೆ ಗುಂಡಿಗೆ ಬಲಿಯಾದ ಉಮಾದೇವಿ ಮಗಳು ಸುನಿತಾ ಆಗ್ರಹಿಸಿದ್ದಾರೆ.

ಬೆಂಗಳೂರಿನ ರಸ್ತೆ ಗುಂಡಿಗೆ ತಾಯಿಯನ್ನು ಕಳೆದುಕೊಂಡ ಪುತ್ರಿಯ ಕಣ್ಣೀರಿನ ಮಾತು
ಮೃತ ಉಮಾದೇವಿ ಕುಟುಂಬ
TV9 Web
| Updated By: ವಿವೇಕ ಬಿರಾದಾರ|

Updated on:Oct 18, 2022 | 4:54 PM

Share

ಬೆಂಗಳೂರು: ನಮ್ಮಂತಹ ಬಡವರ ಜೀವದ ಜೊತೆ ಆಟ ಆಡಬೇಡಿ. ಮೊದಲು ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಿ. ನಮ್ಮ ಜೀವನವನ್ನು ಕಾಪಾಡಿ. ಮತ್ತೆ ಯಾರಿಗೂ ಈ ಪರಿಸ್ಥಿತಿ ಬರಬಾರದು ಎಂದು ನಗರದ ರಸ್ತೆ ಗುಂಡಿಗೆ ಮೃತರಾದ ಉಮಾದೇವಿ ಮಗಳು ಸುನಿತಾ ಟಿವಿ9 ಎದುರು ಅಳಲು ತೋಡಿಕೊಂಡಿದ್ದಾರೆ. ನಮ್ಮ ಕುಟುಂಬ ಅತ್ತೆ ಮೇಲೆ ಆಧಾರವಾಗಿತ್ತು. ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸವನ್ನು ನೀಡಬೇಕು ಎಂದು ಮೃತ ಉಮಾ ಆಳಿಯ ರವಿ ಆಗ್ರಹಿಸಿದ್ದಾರೆ.

ಮನೆಕೆಲಸ ಮಾಡುತ್ತಿದ್ದ ಉಮಾದೇವಿ

ಮೃತ ಉಮಾದೇವಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಉಮಾದೇವಿ ಗಂಡ ಐದು ವರ್ಷದ ಹಿಂದೆ ಮೃತಪಟ್ಟಿದ್ದರು. ಸದ್ಯ ಗಾಯತ್ರಿ ನಗರ ವಾಸವಿದ್ದ ಉಮಾದೇವಿ ನಿನ್ನೆ ಶ್ರೀನಗರದ ಮಗಳ ಮನೆಗೆ ತೆರಳಿದ್ದರು. ಇಂದು ಮಗಳು ಗಾಯತ್ರಿ ನಗರಕ್ಕೆಂದು ಕರೆದುಕೊಂಡು ಹೊಗುವಾಗ ಘಟನೆ ನಡೆದಿದೆ. ಮನೆಕೆಲಸ ಮಾಡಿ ಜೀವನ ಮಾಡುತಿದ್ದ ಉಮಾದೇವಿ ಮನೆಯೊಂದರ ಮಗುವಿನ ಕೇರ್ ಟೇಕರ್ ಆಗಿದ್ದರು. ಇವರಿಗೆ ಮೂರು ಜನ ಹೆಣ್ಣು ಮಕ್ಕಳಿದ್ದಾರೆ. ಈಗಾಗಲೇ ಇಬ್ಬರಿಗೆ ಮದುವೆಯಾಗಿದೆ. ಕೊನೆ ಮಗಳ ಮದುವೆ ಇನ್ನು ಆಗಿಲ್ಲ.

ಘಟನೆ ಹಿನ್ನೆಲೆ

ನಗರದ ಸುಜಾತ ಥಿಯೇಟರ್ ಬಳಿ ಹೋಂಡಾ ಆಕ್ಟೀವಾದಲ್ಲಿ ಇಬ್ಬರು ಮಹಿಳೆಯರು ಬರುತ್ತಿದ್ದರು. ಈ ವೇಳೆ ಗಾಡಿ ಓಡಿಸುತ್ತಿದ್ದ ಮಹಿಳೆ ಗುಂಡಿ ತಪ್ಪಿಸಲು ಯತ್ನಿಸಿ, ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದಾಗ ಹಿಂದೆ ಕುಳಿತಿದ್ದ ಉಮಾದೇವಿ ಕೆಳಗೆ ಬಿದ್ದಿದ್ದರು. ಈ ವೇಳೆ ಹಿಂದೆ ಬರುತ್ತಿದ್ದ ಬಸ್ ಮಹಿಳೆಯ ಮೇಲೆ ಹರಿದಿತ್ತು. ಅವರನ್ನು ತಕ್ಷಣ ರಾಜಾಜಿನಗರ ಇಎಸ್​ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉಮೇದೇವಿ  ಮಂಗಳವಾರ ಆಸ್ಪತ್ರೆಯಲ್ಲಿ ನಿಧನರಾದರು.

ಈ ಘಟನೆಗೆ ರಸ್ತೆಯಲ್ಲಿದ್ದ ಗುಂಡಿಯೇ ಕಾರಣ. ಗುಂಡಿ ಇರಲಿಲ್ಲ ಎಂದಾದರೆ ಮಹಿಳೆಗೆ ಏನೂ ಆಗುತ್ತಿರಲಿಲ್ಲ ಎಂದು ಪ್ರತ್ಯಕ್ಷದರ್ಶಿ ಜಮೀರ್ ಘಟನೆ ಬಗ್ಗೆ ಮಾಹಿತಿ ನೀಡಿದರು. ಘಟನೆ ಕುರಿತು ಪ್ರತಿಕ್ರಿಯಿಸಿದ್ದ ಡಿಸಿಪಿ ಕುಲದೀಪ್ ಜೈನ್, ಅಪಘಾತದಲ್ಲಿ ತಾಯಿ-ಮಗಳು ಗಾಯಗೊಂಡಿದ್ದಾರೆ. ಬೈಕ್ ಹಿಂಬದಿ ಕುಳಿತಿದ್ದ ಉಮಾ ಅವರ ಸ್ಥಿತಿ ಗಂಭೀರವಾಗಿದೆ. ಕೆಎಸ್​ಆರ್​ಟಿಸಿ ಬಸ್​ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದರು.

ಕೆಎಸ್​ಆರ್​ಟಿಸಿ ಬಸ್ ಚಾಲಕನ ಬಂಧನ

ಪ್ರಕರಣ ಸಂಬಂಧ ಕೆಎಸ್​ಆರ್​ಟಿಸಿ ಬಸ್ ಚಾಲಕ ಮಾರುತಿ ರಾವ್​​​ ಅವರನ್ನು ಮಲ್ಲೇಶ್ವರಂ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೃತ ಉಮಾದೇವಿ ಪುತ್ರಿ ವನಿತಾ ನೀಡಿದ ದೂರಿನ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ.

ರಸ್ತೆ ಗುಂಡಿ ಮುಚ್ಚದ ಅಧಿಕಾರಿಗಳಿಗೆ ಕ್ಲಾಸ್

ಘಟನೆಯ ನಂತರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಗರದ ಪೂರ್ವ ವಲಯದಲ್ಲಿ ಕಾಲ್ನಡಿಗೆ ಮೂಲಕ ಜನರ ಸಮಸ್ಯೆ ಆಲಿಸಿದರು. ಹೆಣ್ಣೂರು ಮುಖ್ಯ ರಸ್ತೆ, ಬಾಣಸವಾಡಿ ಕಡೆಗಳಲ್ಲಿ ಓಡಾಡಿ ಜನರನ್ನು ಮಾತನಾಡಿಸಿದರು. ಘಟನೆ ಕುರಿತು ಪ್ರತಿಕ್ರಿಯಿಸಿದ್ದ ಅವರು, ‘ಒಂದು ಅಮೂಲ್ಯ ಜೀವ ಹೋಗಿದೆ. ಈಗ ತನಿಖೆ ನಡೆಯುತ್ತಿದೆ, ಯಾರ‌ ತಪ್ಪು ಅಂತಾ ಗೊತ್ತಾಗುತ್ತದೆ. ಅಧಿಕಾರಿಗಳ ತಪ್ಪಾ, ಗುತ್ತಿಗೆದಾರರ ತಪ್ಪಾ ಎನ್ನುವುದು ಗೊತ್ತಾದ ನಂತರ ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯ ಮಳೆ ಬರುತ್ತಿರುವ ಕಾರಣ ರಸ್ತೆ ಗುಂಡಿ ಮುಚ್ಚಲು ಆಗುತ್ತಿಲ್ಲ. ಅದಕ್ಕೆ ಜಲ್ಲಿ ಕಲ್ಲು ಹಾಕುತ್ತಿದ್ದೇವೆ’ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:48 pm, Tue, 18 October 22