AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Umesh Katti: ಹವಾಮಾನ ವೈಪರೀತ್ಯ ಹಿನ್ನೆಲೆ ಉಮೇಶ್​ ಕತ್ತಿ ಪಾರ್ಥಿವ ಶರೀರ ಏರ್​ಲಿಫ್ಟ್​ ವಿಳಂಬ

ಚೆನ್ನೈನಲ್ಲೂ ಹವಾಮಾನ ವೈಪರೀತ್ಯ ಹಿನ್ನೆಲೆ ಚೆನ್ನೈನಿಂದ ಬೆಂಗಳೂರಿಗೆ ಬರಬೇಕಿದ್ದ ವಿಶೇಷ ವಿಮಾನ ಕ್ಯಾನ್ಸಲ್ ಆಗಿ ಹೈದರಾಬಾದ್​​ನಿಂದ ವಿಶೇಷ ವಿಮಾನ ಆಗಮಿಸುತ್ತಿದೆ.

Umesh Katti: ಹವಾಮಾನ ವೈಪರೀತ್ಯ ಹಿನ್ನೆಲೆ ಉಮೇಶ್​ ಕತ್ತಿ ಪಾರ್ಥಿವ ಶರೀರ ಏರ್​ಲಿಫ್ಟ್​ ವಿಳಂಬ
ಹೆಚ್​ಎಎಲ್​ ಏರ್​ಪೋರ್ಟ್ ಬಳಿಯ ದೃಶ್ಯ
TV9 Web
| Updated By: ಆಯೇಷಾ ಬಾನು|

Updated on:Sep 07, 2022 | 9:18 AM

Share

ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(Umesh Katti) ನಿನ್ನೆ ತಡರಾತ್ರಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಿಸಿದೆ. ಮತ್ತೊಂದು ಕಡೆ ಈಗಾಗಲೇ ಉಮೇಶ್ ಕತ್ತಿ ಪಾರ್ಥಿವ ಶರೀರ ಹೆಚ್​ಎಎಲ್​ ಏರ್​ಪೋರ್ಟ್(HAL Airport) ತಲುಪಿದ್ದು ಏರ್​ಲಿಫ್ಟ್ ಕಾರ್ಯ ವಿಳಂಬವಾಗಲಿದೆ ಎಂಬ ಮಾಹಿತಿ ಸಿಕ್ಕಿದೆ.

ಹವಾಮಾನ ವೈಪರೀತ್ಯ ಹಿನ್ನೆಲೆ ಏರ್​ಲಿಫ್ಟ್​ ವಿಳಂಬವಾಗಿದೆ. ಚೆನ್ನೈನಲ್ಲೂ ಹವಾಮಾನ ವೈಪರೀತ್ಯ ಹಿನ್ನೆಲೆ ಚೆನ್ನೈನಿಂದ ಬೆಂಗಳೂರಿಗೆ ಬರಬೇಕಿದ್ದ ವಿಶೇಷ ವಿಮಾನ ಕ್ಯಾನ್ಸಲ್ ಆಗಿ ಹೈದರಾಬಾದ್​​ನಿಂದ ವಿಶೇಷ ವಿಮಾನ ಆಗಮಿಸುತ್ತಿದೆ. ಈ ವಿಶೇಷ ವಿಮಾನ 10.30ಕ್ಕೆ ಹೆಚ್​ಎಎಲ್ ತಲುಪಲಿದೆ. ಹೀಗಾಗಿ ಏರ್​ಲಿಫ್ಟ್​ ವಿಳಂಬವಾಗಲಿದೆ.

ಇನ್ನು ರಾಜಕೀಯ ಗಣ್ಯರು ಹೆಚ್​ಎಎಲ್​ ಏರ್​ಪೋರ್ಟ್ ನಲ್ಲಿ ಉಮೇಶ್ ಕತ್ತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೃಷಿ ಸಚಿವ ಬಿಸಿ. ಪಾಟೀಲ್, ಸಚಿವ ಭೈರತಿ ಬಸವರಾಜ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕೆಜೆ ಜಾರ್ಜ್, ಎಮ್.ಟಿ.ಬಿ. ನಾಗರಾಜ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದ್ರು.

ಈ ವೇಳೆ HALನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಉಮೇಶ್​ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಉಮೇಶ್​ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ನೇರ ನುಡಿಯ ವ್ಯಕ್ತಿಯಾಗಿದ್ದವ. ಕತ್ತಿ ಆರೋಗ್ಯದ ಬಗ್ಗೆ ಮೊದಲಿಂದ ನಿರ್ಲಕ್ಷ್ಯ ವಹಿಸಿದ್ರು. ಸರ್ಕಾರ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಯಾಕೆಂದರೆ ಉಮೇಶ್​ ಕತ್ತಿ ಹಾಲಿ ಸಚಿವರಾಗಿದ್ದವರು. ಹಾಗಾಗಿ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಉಮೇಶ್ ಕತ್ತಿ ನನ್ನ ಜೊತೆ ಬಹಳ ಆತ್ಮೀಯವಾಗಿದ್ದರು. ನಾನು ಕೂಡ ಬೆಳಗಾವಿಗೆ ಹೋಗುತ್ತೇನೆ ಎಂದರು.

ಉಮೇಶ್ ಕತ್ತಿ ಅವರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:18 am, Wed, 7 September 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?