AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಧಿಕೃತ ಶಾಲೆಗಳಿಂದ ಪೋಷಕರಿಗೆ ಶುರುವಾಯ್ತು ಟೆನ್ಷನ್; ಸರ್ಕಾರದ ನಡೆ ವಿರುದ್ಧ ಆಕ್ರೋಶ

ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾಗಿರುವ ವಿದ್ಯಾ ದೇಗುಲಗಳು ಮಕ್ಕಳ ಜೀವನದ ಜೊತೆ ಚಲ್ಲಾಟವಾಡ್ತಿವೆ. ಪೋಷಕರ ನೂರಾರು ಕನಸುಗಳು ನುಚ್ಚು ನೂರು ಮಾಡ್ತಿವೆ. ಸದ್ಯ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸಾವಿರಾರು ಅನಧಿಕೃತ ಶಾಲೆಗಳು ತಲೆ ಎತ್ತಿದ್ದು ಪೋಷಕರ ನಿದ್ದೆಗೆಡಸಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ 1645 ಅನಧಿಕೃತ ಶಾಲೆಗಳಿವೆ ಎಂದು ಶಿಕ್ಷಣ ಸಚಿವರೇ ಒಪ್ಪಿಕೊಂಡಿದ್ದಾರೆ. ಆದರೆ ಶಿಕ್ಷಣ ಇಲಾಖೆ ಮಾತ್ರ ಈವರೆಗೂ ಸೂಕ್ತಕ್ರಮ ಕೈಗೊಂಡಿಲ್ಲ. ಕ್ಷಣಕ್ಕೊಂದು ನಿಲವು ತೋರ್ತಿದೆ. ಇದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಅನಧಿಕೃತ ಶಾಲೆಗಳಿಂದ ಪೋಷಕರಿಗೆ ಶುರುವಾಯ್ತು ಟೆನ್ಷನ್; ಸರ್ಕಾರದ ನಡೆ ವಿರುದ್ಧ ಆಕ್ರೋಶ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ಆಯೇಷಾ ಬಾನು

Updated on: Nov 02, 2023 | 9:32 AM

ಬೆಂಗಳೂರು, ನ.02: ಮಕ್ಕಳನ್ನ ಚೆನ್ನಾಗಿ ಓದಿಸಬೇಕು, ಒಳ್ಳೆ ಶಿಕ್ಷಣ ನೀಡಿ ಐಎಎಸ್ ಐಪಿಎಸ್ ಹುದ್ದೆಗೇರಿಸಬೇಕು ಅಂತಾ ಅದೇಷ್ಟೋ ಪೋಷಕರು ಹಗಲಿರುಳು ಕಷ್ಟಪಟ್ಟು ದುಡಿದು ಲಕ್ಷ ಲಕ್ಷ ಶುಲ್ಕ ಕಟ್ಟಿ ಖಾಸಗಿ ಶಾಲೆಗಳಿಗೆ ಕಳಿಸ್ತಾರೆ. ಮಕ್ಕಳನ್ನ ಹೈಟೆಕ್ ಶಾಲೆ ಸಿಬಿಎಸ್ಇ ಸಿಲೆಬಸ್ ಅಂದ್ರೆ ಹಿಂದೆ ಮುಂದೆ ನೋಡ್ದೆ ಪ್ರತಿಷ್ಠತೆಯನ್ನೇ ಪಣಕ್ಕಿಟ್ಟು ಮಕ್ಕಳ ದಾಖಲಾತಿ ಮಾಡಿಸ್ತಾರೆ. ಆದರೆ ಲಕ್ಷ ಲಕ್ಷ ಶುಲ್ಕ ಕಟ್ಟಿಸಿಕೊಂಡ ಶಾಲೆಗಳು ಪೋಷಕರ ಕನಸು ಆಸೆಗಳಿಗೆ ಬೆಂಕಿ ಹಚ್ಚುತ್ತಿವೆ (unauthorised Schools). ಸಿಲಿಕಾನ್ ಸಿಟಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ 1645 ಅನಧಿಕೃತ ಶಾಲೆಗಳಿವೆ ಎಂದು ಶಿಕ್ಷಣ ಸಚಿವರೇ ಒಪ್ಪಿಕೊಂಡಿದ್ದಾರೆ. ಆದರೆ ಶಿಕ್ಷಣ ಇಲಾಖೆ ಮಾತ್ರ ಈವರೆಗೂ ಸೂಕ್ತಕ್ರಮ ಕೈಗೊಂಡಿಲ್ಲ. ಕ್ಷಣಕ್ಕೊಂದು ನಿಲವು ತೋರ್ತಿದೆ. ಇದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಪೋಷಕರಿಗೆ ರಾಜ್ಯದ ಅನಧಿಕೃತ ಶಾಲೆಗಳು ಹೊಸ ಟೆನ್ಷನ್ ತಂದಿಟ್ಟಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನವೆಂಬರ್ ನಿಂದಲೇ 2023 -24 ನೇ ಶೈಕ್ಷಣಿಕ ವರ್ಷಕ್ಕೆ ದಾಖಲಾತಿ ಶುರುವಾಗಿದೆ. ಈಗಾಗಲೇ ಅನೇಕ ಶಾಲೆಗಳು ಮುಂದಿನ ವರ್ಷದ ದಾಖಲಾತಿ ಶುರು ಮಾಡಿವೆ. ಆದರೆ ಪೋಷಕರಿಗೆ ಮಾತ್ರ ಇದು ದೊಡ್ಡ ಸಮಸ್ಯೆಯಾಗಿದೆ. ಕೆಲವು ಅನಧಿಕೃತ ಶಾಲೆಗಳು ಕೂಡಾ ಮುಂದಿನ ಶೈಕ್ಷಣಿಕ ವರ್ಷದ ದಾಖಲಾತಿ ಶುರು ಮಾಡಿಕೊಂಡಿವೆ. ಪೋಷಕರಿಗೆ ಅನಧಿಕೃತ ಶಾಲೆಗಳ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲದ ಕಾರಣ ಮಕ್ಕಳನ್ನು ಯಾವ ಶಾಲೆಗೆ ಸೇರಿಸಬೇಕು ಎಂಬ ತಲೆ ನೋವು ಉಂಟಾಗಿದೆ.

ಇದನ್ನೂ ಓದಿ: ಮೈಸೂರು ಹುಲಿ ದಾಳಿ ಪ್ರಕರಣ: ಶೀಘ್ರದಲ್ಲೇ ಕೂಂಬಿಂಗ್ ಆಪರೇಷನ್ ಮಾಡಿಸುವುದಾಗಿ ಭರವಸೆ ಕೊಟ್ಟ ಶಾಸಕ ದರ್ಶನ್ ಧ್ರುವನಾರಾಯಣ್

ಸದ್ಯ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ 1645 ಅನಧಿಕೃತ ಶಾಲೆಗಳಿವೆ ಎಂದು ಶಿಕ್ಷಣ ಇಲಾಖೆಯೇ ಒಪ್ಪಿಕೊಂಡಿದೆ. ಆದರೆ ಸರ್ಕಾರ ಈ ಅನಧಿಕೃತ ಶಾಲೆಗಳ ಪಟ್ಟಿಯನ್ನ ವೆಬ್ ಸೈಟ್, ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುತ್ತಿಲ್ಲ. ಅನಧಿಕೃತ ಶಾಲೆಗಳ ಮುಂದೆ ಶಿಕ್ಷಣ ಇಲಾಖೆ ಯಾವುದೇ ಬೋರ್ಡ್ ಅಥವಾ ನೋಟಿಸ್ ಕೂಡಾ ಹಾಕಿಲ್ಲ. ಇಲಾಖೆಯ ವೆಬ್ ಸೈಟ್ ಪತ್ರಿಕಾ ಪ್ರಕಟಣೆ ಕೂಡಾ ನೀಡುತ್ತಿಲ್ಲ. ಇದು ಪೋಷಕರ ಟೆನ್ಷನ್ ಗೆ ಕಾರಣವಾಗಿದೆ. ಇಲಾಖೆ ಗರುತಿಸಿರುವ ಅನಧಿಕೃತ ಶಾಲೆ ಯಾವವು ಎಂಬ ಮಾಹಿತಿ ತಿಳಿಯದಾಗಿದೆ. ಇದರಿಂದ ಯಾವ ಶಾಲೆಗೆ ದಾಖಲಾತಿ ಮಾಡಿಸಬೇಕು ಯಾವುದು ಅನಧಿಕೃತ ಶಾಲೆ ಅಂತಾ ತಿಳಿಯದೇ ಪೋಷಕರು ಪರದಾಡುತ್ತಿದ್ದಾರೆ. ಹೀಗಾಗಿ ಶಿಕ್ಷಣ ಇಲಾಖೆ ಪೋಷಕರ ಸಮಿತಿ ಒತ್ತಾಯ ಶುರು ಮಾಡಿದೆ. ಶಿಕ್ಷಣ ಇಲಾಖೆ ಗುರುತಿಸಿರುವ 1645 ಅನಧಿಕೃತ ಶಾಲೆಗಳ ಪಟ್ಟಿಯನ್ನ ಪತ್ರಿಕಾ ಪ್ರಕಟಣೆ ನೀಡುವಂತೆ ಅಥವಾ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವಂತೆ, ಇಲ್ಲವೇ ಅನಧಿಕೃತ ಶಾಲೆಗಳ ಮುಂದೆ ಇಲಾಖೆಯ ನೋಟಿಸ್ ಬೋರ್ಡ್ ಆದ್ರೂ ಹಾಕುವಂತೆ ಒತ್ತಾಯ ಮಾಡಿದೆ. ಇಲ್ಲದೇ ಹೋದ್ರೆ ಶಿಕ್ಷಣ ಇಲಾಖೆ ವಿರುದ್ಧ ಪೋಷಕರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಕೆಲವು ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷಕ್ಕೆ ಅಂದ್ರೆ 2023-24 ಕ್ಕೆ ದಾಖಲಾತಿ ನೀಡಲು ಮುಂದಾಗಿವೆ. ಆದರೆ ಶಿಕ್ಷಣ ಇಲಾಖೆ ಇದುವರೆಗೂ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿನ ಅನಧಿಕೃತ ಶಾಲೆಗಳ ಪಟ್ಟಿಯನ್ನ ಜಾಲತಾಣದಲ್ಲಿ ಹಾಕಿ ಬಹಿರಂಗ ಪಡಿಸಿ ಆದೇಶ ಮಾಡಿ ಕ್ರಮಕ್ಕೆ ಮುಂದಾಗಿಲ್ಲ. ಇದು ಪೋಷಕರ ಟೆನ್ಷನ್ ಗೆ ಕಾರಣವಾಗಿದ್ದು ಈ ಬಗ್ಗೆ ಶಿಕ್ಷಣ ಸಚಿವರು ಹಾಗೂ ಆಯುಕ್ತರು ಮಾಧ್ಯಮಗಳಿಗೆ ಯಾವುದೇ ಮಾಹಿತಿ ಕೂಡಾ ನೀಡದೇ ದಿವ್ಯ ನಿರ್ಲಕ್ಷ್ಯವಹಿಸಿದ್ದಾರೆ.

ಒಟ್ನಲ್ಲಿ ಬೆಂಗಳೂರು ಸೇರಿದಂತೆ ಹಲವಡೆ ಪೋಷಕರಿಗೆ ಮಕಮಲ್ ಟೋಪಿ ಹಾಕಿರುವ ಅನಧಿಕೃತ ಶಾಲೆಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟ ಮಾಡಬೇಕಿದೆ. ಮುಂದಿನ ದಿನಗಳಲ್ಲಿ ಪೋಷಕರು ಮೋಸ ಹೋಗದಂತೆ ತಡೆಯಲು ಈ ಅನಧಿಕೃತ ಶಾಲೆಗಳ ಪಟ್ಟಿ ನೀಡಿ ಅತಂಹ ಶಾಲೆಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ