Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಶಿಕ್ಷಕರಿಗೆ ಸಿಹಿ ಸುದ್ದಿ, ಗುರು ನಮನ ಕಾರ್ಯಕ್ರಮದಡಿ ಉಚಿತ ಕೀಲು ಮರುಜೋಡಣೆ ಶಸ್ತ್ರಚಿಕಿತ್ಸೆ

Free Joint Replacement Surgeries: ಸ್ಪರ್ಶ್ ಫೌಂಡೇಶನ್ ಗುರು ನಮನ ಕಾರ್ಯಕ್ರಮದ ಅಡಿಯಲ್ಲಿ ಗ್ರಾಮೀಣ ಭಾಗದ ಸುಮಾರು 100 ನಿವೃತ್ತ ಶಿಕ್ಷಕರಿಗೆ  ಉಚಿತ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜರಿ ಆಯೋಜಿಸಿದೆ. 2010ರಿಂದ ಇಲ್ಲಿಯ ವರೆಗೆ 800 ನಿವೃತ್ತ ಶಿಕ್ಷಕರಿಗೆ  ಉಚಿತ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜರಿ ಮಾಡಲಾಗಿದೆ.

ನಿವೃತ್ತ ಶಿಕ್ಷಕರಿಗೆ ಸಿಹಿ ಸುದ್ದಿ, ಗುರು ನಮನ ಕಾರ್ಯಕ್ರಮದಡಿ ಉಚಿತ ಕೀಲು ಮರುಜೋಡಣೆ ಶಸ್ತ್ರಚಿಕಿತ್ಸೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Sep 06, 2023 | 11:15 AM

ಬೆಂಗಳೂರು, ಸೆ.06: ಬೆಂಗಳೂರಿನಲ್ಲಿರುವ ಸ್ಪರ್ಶ್ ಗ್ರೂಪ್ ಆಫ್ ಹಾಸ್ಪಿಟಲ್ಸ್‌ನ ಚಾರಿಟಬಲ್ ವಿಭಾಗವಾದ ಸ್ಪರ್ಶ್ ಫೌಂಡೇಶನ್ ಗುರು ನಮನ(Guru Namana) ಕಾರ್ಯಕ್ರಮದ ಅಡಿಯಲ್ಲಿ ಗ್ರಾಮೀಣ ಭಾಗದ ಸುಮಾರು 100 ನಿವೃತ್ತ ಶಿಕ್ಷಕರಿಗೆ(Retired Teachers)  ಉಚಿತ ಕೀಲು ಮರುಜೋಡಣೆ ಶಸ್ತ್ರಚಿಕಿತ್ಸೆ ಆಯೋಜಿಸಿದೆ(Free Joint Replacement Surgeries). 2010 ರಲ್ಲಿ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಸುಮಾರು 800 ಶಿಕ್ಷಕರು ಈ ಸೌಲಭ್ಯದ ಪ್ರಯೋಜನ ಪಡೆದಿದ್ದಾರೆ. ಗುರು ನಮನ ಕಾರ್ಯಕ್ರಮದ ಅಡಿಯಲ್ಲಿ, ಬೆಂಗಳೂರು, ರಾಯಚೂರು, ಕಲಬುರ್ಗಿ, ಹಾಸನ ಮತ್ತು ದಾವಣಗೆರೆಯಲ್ಲಿ ಸ್ಕ್ರೀನಿಂಗ್ ಶಿಬಿರಗಳನ್ನು ನಡೆಸಲಾಗಿದ್ದು, ಇದರಲ್ಲಿ ಅರ್ಹ ನಿವೃತ್ತ ಶಿಕ್ಷಕರಿಗೆ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜರಿಯನ್ನು ಉಚಿತವಾಗಿ ಮಾಡಲಾಗುತ್ತಿದೆ.

ಸ್ಪರ್ಶ್ ಆಸ್ಪತ್ರೆಯ ಅಧ್ಯಕ್ಷ ಮತ್ತು ಮುಖ್ಯ ಮೂಳೆ ಶಸ್ತ್ರಚಿಕಿತ್ಸಕ ಶರಣ್ ಪಾಟೀಲ್ ಮಾತನಾಡಿ, ಅನೇಕ ನಿವೃತ್ತ ಶಿಕ್ಷಕರು ಕಡಿಮೆ ಸಂಭಾವನೆ ಪಡೆಯುತ್ತಾರೆ. ಅವರಿಗೆ ಈ ಸರ್ಜರಿ ಮಾಡಿಸಿಕೊಳ್ಳುವಷ್ಟು ಹಣ ಇರುವುದಿಲ್ಲ. ಈ ಕಾರಣದಿಂದಾಗಿ ತೀರ ಅನಿವಾರ್ಯವಿರುವ ನಿವೃತ್ತ ಶಿಕ್ಷಕರನ್ನು ಆಯ್ಕೆ ಮಾಡಿ ಅವರಿಗೆ ಗುರು ನಮನ ಕಾರ್ಯಕ್ರಮದಡಿ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜರಿಯನ್ನು ಉಚಿತವಾಗಿ ಮಾಡಿಸಲಾಗುತ್ತದೆ. ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯ ಗೌರವ ಮತ್ತು ಆಚರಣೆಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಡಾ. ಶರಣ್ ಪಾಟೀಲ್ ತಿಳಿಸಿದರು.

ಇದನ್ನೂ ಓದಿ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಮಧ್ಯಭಾಗದಲ್ಲೇ ಹೊರಟು ನಿಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಹೊರಡಿ ಎಂದ ಸತೀಶ್ ಜಾರಕಿಹೊಳಿ

ಪ್ರತಿಯೊಬ್ಬ ವ್ಯಕ್ತಿಯ ಜೀವನದ ಮೇಲೆ ಶಿಕ್ಷಕರು ಬೀರಿರುವ ಆಳವಾದ ಪ್ರಭಾವವನ್ನು ಗುರುತಿಸಿ, ಸ್ಪರ್ಶ ಗುರು-ನಮನವು ಸಂಕೀರ್ಣವಾದ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನಡೆಸುವ ಮೂಲಕ ಈ ಶ್ರೇಷ್ಠ ವೃತ್ತಿಗೆ ಕೃತಜ್ಞತೆ ಮತ್ತು ಬೆಂಬಲವನ್ನು ವ್ಯಕ್ತಪಡಿಸಲು ಪ್ರಯತ್ನಿಸುತ್ತಿದೆ. ಅಸ್ಥಿಸಂಧಿವಾತ (Osteoarthritis) ಸಂಧಿವಾತದ ಅತ್ಯಂತ ಸಾಮಾನ್ಯ ವಿಧವಾಗಿದೆ ಮತ್ತು ಇದು ಪ್ರಪಂಚದಾದ್ಯಂತದ ಹೆಚ್ಚಿನ ದೇಶಗಳಲ್ಲಿ ದೀರ್ಘಕಾಲದ ಅಂಗವೈಕಲ್ಯಕ್ಕೆ ಪ್ರಮುಖ ಕಾರಣವಾಗಿದೆ. ಪ್ರಪಂಚದಾದ್ಯಂತದ ಅಂದಾಜಿನ ಪ್ರಕಾರ 60% ರಷ್ಟು 65 ವರ್ಷಕ್ಕಿಂತ ಮೇಲ್ಪಟ್ಟವರು ರೋಗಲಕ್ಷಣದ ಅಸ್ಥಿಸಂಧಿವಾತವನ್ನು ಹೊಂದಿದ್ದಾರೆ. ಭಾರತದಲ್ಲಿ 18 ಕೋಟಿಗೂ ಹೆಚ್ಚು ಜನರು ಅಸ್ಥಿಸಂಧಿವಾತದಿಂದ ಬಳಲುತ್ತಿದ್ದಾರೆ ಮತ್ತು ಭಾರತದಲ್ಲಿ ಪ್ರತಿ ವರ್ಷ 20% ರಷ್ಟು ಜಾಯಿಂಟ್ ರಿಪ್ಲೇಸ್ಮೆಂಟ್ ಹೆಚ್ಚುತ್ತಿದೆ ಎಂದು ಡಾ. ಶರಣ್ ಹೇಳಿದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:03 am, Wed, 6 September 23

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು