AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: ಬಹು ನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ 450 ಕೋಟಿ ರೂ. ಮೀಸಲು

ಬೆಂಗಳೂರು ಉಪನಗರ ರೈಲು ಯೋಜನೆಗೆ 2023-24ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ 450 ಕೋಟಿ ರೂ. ಮೀಸಲಿಡಲಾಗಿದೆ. ಕೇಂದ್ರ ಉಪನಗರ ರೈಲು ಯೋಜನೆಗೆ 1350 ಕೋಟಿ ಮೀಸಲಿಡಲಾಗಿದ್ದು ಅದರಲ್ಲಿ 450 ಕೋಟಿ ರೂ.ವನ್ನು ನೇರವಾಗಿ ಬಜೆಟ್​ನಲ್ಲಿ ಮೀಸಲಿಡಲಾಗಿದೆ.

Budget 2023: ಬಹು ನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ 450 ಕೋಟಿ ರೂ. ಮೀಸಲು
ಉಪನಗರ ರೈಲು
ನಯನಾ ರಾಜೀವ್
|

Updated on: Feb 03, 2023 | 10:21 AM

Share

ಬೆಂಗಳೂರು ಉಪನಗರ ರೈಲು ಯೋಜನೆಗೆ 2023-24ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ 450 ಕೋಟಿ ರೂ. ಮೀಸಲಿಡಲಾಗಿದೆ. ಕೇಂದ್ರ ಉಪನಗರ ರೈಲು ಯೋಜನೆಗೆ 1350 ಕೋಟಿ ಮೀಸಲಿಡಲಾಗಿದ್ದು ಅದರಲ್ಲಿ 450 ಕೋಟಿ ರೂ.ವನ್ನು ನೇರವಾಗಿ ಬಜೆಟ್​ನಲ್ಲಿ ಮೀಸಲಿಡಲಾಗಿದೆ. ಬಾಕಿ ಉಳಿದ 900 ಕೋಟಿ ರೂ.ಗಳನ್ನು ಆಂತರಿಕ ಹೆಚ್ಚುವರಿ ಬಜೆಟ್​ ಸಂಪನ್ಮೂಲದ ಮೂಲಕ ಸಂಗ್ರಹಿಸಲು ಅವಕಾಶ ಕಲ್ಪಿಸಲಾಗಿದೆ. ಬುಧವಾರ ಮಂಡಿಸಿದ ಬಜೆಟ್‌ನಲ್ಲಿ ಪ್ರಸ್ತಾವನೆ ಪ್ರಸ್ತಾಪವಾಗಿಲ್ಲ. ಬೆಂಗಳೂರಿನ ಹೊರವಲಯದಲ್ಲಿ ಫಿನ್‌ಟೆಕ್ ಸಿಟಿಯನ್ನು ಸ್ಥಾಪಿಸಲು, ಗುಜರಾತ್‌ನ ಗಿಫ್ಟ್ ಸಿಟಿ ಮಾದರಿಯಲ್ಲಿ ಸ್ಯಾಟಲೈಟ್ ಟೌನ್ ಆಗಿ ನಿರ್ಮಿಸಲು, ರಾಜ್ಯ ಸರ್ಕಾರವು ಕೇಂದ್ರ ಬಜೆಟ್‌ನಿಂದ ಧನಸಹಾಯವನ್ನು ಕೋರಿದೆ.

ಮತ್ತಷ್ಟು ಓದಿ: ಬೆಂಗಳೂರು ಉಪನಗರ ರೈಲು ಯೋಜನೆಗೆ ನಮೋ ಶಂಕುಸ್ಥಾಪನೆ, ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಉಪನಗರ ರೈಲು ಯೋಜನಾ ಕಟ್ಟಡ ಮಂಜೂರಾದಾಗ ನಾಲ್ಕು ಮಾರ್ಗಗಳಲ್ಲಿ ನಗರದಲ್ಲಿ 148 ಕಿ.ಮೀ ಜಾಲಕ್ಕೆ 15,767 ಕೋಟಿ ವೆಚ್ಚವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಎರಡೂ ಸರ್ಕಾರಗಳು 40% ಷೇರುಗಳನ್ನು ಹೊಂದಿವೆ, ಉಳಿದ 60% ವಿದೇಶಿ ಸಾಲದಿಂದ ಬರುತ್ತದೆ. KRIDE 25 ಕಿಮೀ ಕಾರಿಡಾರ್ ಅನ್ನು ನಿರ್ಮಿಸಲು ಆಯ್ಕೆ ಮಾಡಿದೆ.

ಬೈಯಪ್ಪನಹಳ್ಳಿಹಲವಾರು ಅಡೆತಡೆಗಳನ್ನು ದಾಟಿ ಚಿಕ್ಕಬಾಣಾವರೆ ಗೆ. ಈ ಕಾರಿಡಾರ್ ಒಟ್ಟಾರೆ 25 ಕಿಮೀ ಉದ್ದವಿದ್ದು, 14 ನಿಲ್ದಾಣಗಳನ್ನು ಹೊಂದಿರಲಿದೆ. ವಾಹನ ದಟ್ಟಣೆ ಕಡಿಮೆ ಮಾಡಲು ಕೆ-ರೈಡ್ ಬೆಂಗಳೂರು ಉಪನಗರ ರೈಲು ಯೋಜನೆ ಆರಂಭವಾಗಲಿದ್ದು, ನಾಲ್ಕು ಕಾರಿಡಾರ್​ಗಳಲ್ಲಿ ಈ ರೈಲು ನಿರ್ಮಾಣವಾಗಲಿದೆ.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಬಿಜೆಪಿ ಸರ್ಕಾರ 40 ತಿಂಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸುತ್ತದೆ ಎಂದು ಭರವಸೆ ನೀಡಿದ್ದರು. ಬೆಂಗಳೂರು ಉಪನಗರ ರೈಲು ಯೋಜನೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮಹತ್ವದ ಯೋಜನೆಯಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್