AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ವಿದ್ಯುತ್ ಉತ್ಪಾದನೆಗಾಗಿ ಸುಧಾರಿತ ಮಾರ್ಗದಲ್ಲಿ ಕಲ್ಲಿದ್ದಲು ಪೂರೈಕೆಗೆ ಒತ್ತು -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Electricity: ಇಂಧನ ನಿಗಮಗಳು ಹಾಗೂ ಕಂಪೆನಿಗಳಿಗೆ ಕಲ್ಲಿದ್ದಲು ಸಾಗಣೆ ಮಾಡಲು ರಸ್ತೆ ಹಾಗೂ ರೈಲು ಎರಡು ಮಾರ್ಗಗಳನ್ನು ಬಳಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

Pralhad Joshi: ವಿದ್ಯುತ್ ಉತ್ಪಾದನೆಗಾಗಿ ಸುಧಾರಿತ ಮಾರ್ಗದಲ್ಲಿ ಕಲ್ಲಿದ್ದಲು ಪೂರೈಕೆಗೆ ಒತ್ತು -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ವಿದ್ಯುತ್ ಉತ್ಪಾದನೆಗಾಗಿ ಸುಧಾರಿತ ಮಾರ್ಗದಲ್ಲಿ ಕಲ್ಲಿದ್ದಲು ಪೂರೈಕೆಗೆ ಒತ್ತು -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: ಸಾಧು ಶ್ರೀನಾಥ್​|

Updated on:Dec 03, 2022 | 6:43 PM

Share

ಬೆಂಗಳೂರು: ವಿದ್ಯುತ್ (Electricity) ಉತ್ಪಾದನಾ ಕಂಪನಿಗಳು ಹಾಗು ನಿಗಮಗಳಿಗೆ ಕಲ್ಲಿದ್ದಲನ್ನು (Coal) ಸುಧಾರಿತ ಮಾರ್ಗದಲ್ಲಿ ಪೂರೈಸುವಂತೆ ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಇಂದು ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಸಭೆ ನಡೆಸಿದರು. ಕಲ್ಲಿದ್ದಲು ಸುಗಮ ಪೂರೈಕೆ ಕುರಿತಂತೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು.

ಕಲ್ಲಿದ್ದಲು ವಿತರಣೆಯಲ್ಲಿ ಪ್ರಸ್ತುತ ಎದುರಾಗುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಕೊಂಡು ಯಾವ ರೀತಿ ಟಿಪಿಪಿಗಳಿಗೆ ಕಲ್ಲಿದ್ದಲು ವಿತರಣೆಯನ್ನು ಸುಗಮಗೊಳಿಸಬಹುದು ಎಂಬುದರ ಕುರಿತು ಚರ್ಚೆ ನಡೆಸಲಾಯಿತು. ಇಂಧನ ನಿಗಮಗಳು ಹಾಗೂ ಕಂಪೆನಿಗಳಿಗೆ ಕಲ್ಲಿದ್ದಲು ಸಾಗಣೆ ಮಾಡಲು ರಸ್ತೆ ಹಾಗೂ ರೈಲು ಎರಡು ಮಾರ್ಗಗಳನ್ನು ಬಳಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಕಲ್ಲಿದ್ದಲು ವ್ಯಾಗನ್‌ಗಳ ಇಳಿಸುವಿಕೆಯ ಸಮಯವನ್ನು ಸುಧಾರಿಸಲು ಒತ್ತು ನೀಡಬೇಕಾಗಿದೆ. ದೀರ್ಘಾವಧಿಯ ಕಲ್ಲಿದ್ದಲು ದಾಸ್ತಾನು ನಿರ್ಮಿಸಲು ಆರ್‌ಎಸ್‌ಆರ್ (ರೈಲ್ ಕಮ್ ಸೀ) ಮೋಡ್ ಅನ್ನು ಅನ್ವೇಷಿಸಲು ಜೆನ್‌ಕೋಗೆ ಪ್ರಲ್ಹಾದ್ ಜೋಶಿ ಒತ್ತಾಯಿಸಿದ್ದಾರೆ. ಇದಲ್ಲದೆ, ರೋಡ್ ಮೋಡ್ ಮತ್ತು ರೋಪ್‌ವೇ ಮೂಲಕ 40,000 TPD ಕಲ್ಲಿದ್ದಲನ್ನು ಎತ್ತಬಹುದು. ವ್ಯಾಗನ್ ಅನ್‌ಲೋಡಿಂಗ್ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸುಧಾರಿತ ತಂತ್ರಜ್ಞಾನ ಬಳಕೆಗೆ ಜೋಶಿ ಸಲಹೆ ನೀಡಿದರು.

Also Read: ದೇಶದ ಜಿಡಿಪಿಗೆ ಶೇ 2.5 ಕೊಡುಗೆ ಗಣಿಗಾರಿಕೆಯಿಂದ ನೀಡಲಿದ್ದೇವೆ -ಗಣಿ ಹೂಡಿಕೆದಾರರ ಸಮಾವೇಶದಲ್ಲಿ ಕೇಂದ್ರ ಸಚಿವ ಜೋಶಿ ಘೋಷಣೆ

ಕರ್ನಾಟಕ ಇಂಧನ ನಿಗಮ, ಆಂಧ್ರ ಪ್ರದೇಶ ಜೆನ್ಕೋ, ತೆಲಂಗಾಣಾ ಜೆನ್ಕೋ ಮತ್ತು ತಮಿಳನಾಡು ಉತ್ಪಾದನೆ ಹಾಗೂ ವಿತರಣೆ ನಿಗಮದ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸಿದ್ದರು.

Published On - 6:40 pm, Sat, 3 December 22

Follow Us
TV9 Web
TV9 Web

TV9 Kannada

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!