AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರೇ ನೀವು ಪಿಎಂ, ಸಿಎಂ ಆಗಿ ಏನು ಮಾಡಿಲ್ಲ; ನಮ್ಮ ಸರ್ಕಾರ ಏನು ಮಾಡಿದೆ ಎಂದು ಯುವ ಕಾರ್ಯಕರ್ತರು ನಿಮಗೆ ಹೇಳುತ್ತಾರೆ: ಅಮಿತ್ ಶಾ

ಸಿದ್ದರಾಮಯ್ಯ, ಕುಮಾರಸ್ವಾಮಿ ಮುಖ ನೋಡಿ ಜನಕ್ಕೆ ಸಾಕಾಗಿದೆ'' ಮೋದಿ ಅಭಿವೃದ್ಧಿ ನೋಡಿ ಕರ್ನಾಟಕ ಜನ ಮತ ಹಾಕುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ.

ದೇವೇಗೌಡರೇ ನೀವು ಪಿಎಂ, ಸಿಎಂ ಆಗಿ ಏನು ಮಾಡಿಲ್ಲ; ನಮ್ಮ ಸರ್ಕಾರ ಏನು ಮಾಡಿದೆ ಎಂದು  ಯುವ ಕಾರ್ಯಕರ್ತರು ನಿಮಗೆ ಹೇಳುತ್ತಾರೆ: ಅಮಿತ್ ಶಾ
ಕೇಂದ್ರ ಸಚಿವ ಅಮಿತ್ ಶಾ
TV9 Web
| Edited By: ವಿವೇಕ ಬಿರಾದಾರ|

Updated on:Dec 31, 2022 | 5:23 PM

Share

ಬೆಂಗಳೂರು: ದೇವೇಗೌಡರೇ (HD Devegowda), ನೀವು ಪ್ರಧಾನಿ, ಮುಖ್ಯಮಂತ್ರಿಯಾಗಿ ಏನು ಮಾಡಿಲ್ಲ. ನಮ್ಮ ಡಬಲ್​ ಇಂಜಿನ್​ ಸರ್ಕಾರ ಏನು ಮಾಡಿದೆ ಎಂದು ನಮ್ಮ ಯುವ ಮೋರ್ಚಾ ಕಾರ್ಯಕರ್ತರು ನಿಮಗೆ ಹೇಳುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಬೂತ್ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು ”ಸಿದ್ದರಾಮಯ್ಯ, ಕುಮಾರಸ್ವಾಮಿ ನೋಡಿ ಜನಕ್ಕೆ ಸಾಕಾಗಿದೆ” ಮೋದಿ ಅಭಿವೃದ್ಧಿ ನೋಡಿ ಕರ್ನಾಟಕ ಜನ ಮತ ಹಾಕುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಯೋಜನೆ ನೀಡಿದ್ದಾರೆ ಎಂದು ನುಡಿದರು.

ಬೆಂಗಳೂರಿನ ಟ್ರಾಫಿಕ್​ ಸಮಸ್ಯೆ ನಿವಾರಣೆಗೆ ಪರ್ಯಾಯ ಕ್ರಮ

ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆ ನಿವಾರಣೆಗೆ ಪರ್ಯಾಯ ಕ್ರಮ ಕೈಗೊಳ್ಳಲಾಗುವುದು. ಮೆಟ್ರೋ ಸಂಚಾರ ಮಾರ್ಗ ಮತ್ತಷ್ಟು ವಿಸ್ತರಣೆ ಮಾಡುತ್ತೇವೆ. 3 ಸಾವಿರ ಕಿ.ಮೀ ಉದ್ದದ ರಾಜಮಾರ್ಗ ನಿರ್ಮಾಣ ಮಾಡಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ.

ಇದನ್ನೂ ಓದಿ: ನಮ್ಮದು ಭಾರತ ಮಾತಾಕೀ ಜೈ, ಅವರದು ಸೋನಿಯಾ ಮಾತಾಕೀ ಜೈ

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ 20 ಸ್ಥಾನ ಗೆಲ್ಲುವ ಸಂಕಲ್ಪ

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ 20 ಸ್ಥಾನ ಗೆಲ್ಲುವ ಸಂಕಲ್ಪ ಇದೆ. ದಕ್ಷಿಣ ಭಾರತದಲ್ಲಿ ಕರ್ನಾಟಕ ಬಿಜೆಪಿಯ ಹೆಬ್ಬಾಗಿಲು. ಗುಜರಾತ್, ಉತ್ತರಾಖಂಡ್, ಮಣಿಪುರ, ಉತ್ತರಪ್ರದೇಶ ಹಾಗೂ ಗೋವಾದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲು ಯಶಸ್ವಿಯಾಗಿದ್ದೇವೆ. ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ. 2023ರ ಚುನಾವಣೆಯಲ್ಲಿ ಗೆದ್ದು ಮತ್ತೆ ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ 6 ತಿಂಗಳು ಕಾರ್ಯಕರ್ತರು ಪಕ್ಷವನ್ನು ಬಲಪಡಿಸಿ. ಈ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯೋಣ. ಕರ್ನಾಟಕದ ಪ್ರತಿ ಬೂತ್​ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಿ. ಚೀನಾದಲ್ಲಿ ಮಹಾಮಾರಿ ಕೊವಿಡ್​ ಈಗಲೂ ಹರಡುತ್ತಿದೆ. ಭಾರತದಲ್ಲಿ ಮೋದಿ ಸರ್ಕಾರ ಎಲ್ಲರಿಗೂ ಲಸಿಕೆ ನೀಡಿದೆ. ದೇಶದ 130 ಕೋಟಿ ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ ಎಂದರು.

ಇದನ್ನೂ ಓದಿ:  ಸಿನಿಮಾಗಳಲ್ಲಿ ಅನವಶ್ಯಕವಾಗಿ ಕೇಸರಿ ಬಟ್ಟೆ ಬಳಕೆ ಯಾಕೆ? ಇದು ನೆಹರೂ ಲೆಗಸಿ ಸೃಷ್ಟಿ ಮಾಡಿದ ನರೇಟಿವ್ ಎಂದ ಬಿ ಎಲ್​ ಸಂತೋಷ್

ಪಿಎಫ್​ಐ ಸಂಘಟನೆಯನ್ನು ಬ್ಯಾನ್​ ಮಾಡಿದ್ದು ಮೋದಿ ಸರ್ಕಾರ. ಆದರೆ ಕಾಂಗ್ರೆಸ್​​ ಸರ್ಕಾರ ಅವರ ಮೇಲಿನ ಕೇಸ್ ಹಿಂಪಡೆಯಿತು. ನಾನು ಕರ್ನಾಟಕದ ಜನರ ಮೂಡ್ ಗಮನಿಸಿದ್ದೇನೆ. ನಮ್ಮನ್ನು ಸ್ವಾಗತಿಸಲು ಜನರು ತಯಾರಾಗಿದ್ದಾರೆ. ನರೇಂದ್ರ ಮೋದಿ ನಮ್ಮ ನೇತೃತ್ವ ವಹಿಸುತ್ತಾರೆ. ಇಂದಿರಾ ಗಾಂಧಿ ಬಡತನ ನಿರ್ಮೂಲನೆಗೆ ಸೂತ್ರ ಹೇಳಿದರು. ಆದರೆ ಬಡವರ ಸಮಸ್ಯೆಗಳನ್ನು ನಿವಾರಿಸಿದ್ದು ನರೇಂದ್ರ ಮೋದಿ ಸರ್ಕಾರ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಬಿಎಸ್‌ವೈ ಹಾಗೂ ಬೊಮ್ಮಾಯಿ ಸರ್ಕಾರದ ಬಗ್ಗೆ ಶಾ ಪ್ರಶಂಸೆ

ಜನರನ್ನು ತಲುಪುವುದಕ್ಕೆ ಇದು ಸರಿಯಾದ ಸಮಯ. ಕಾರ್ಯಕರ್ತರು ತಲೆಬಗ್ಗಿಸುವ ರೀತಿಯ ಕೆಲಸ  ಮಾಡಿಲ್ಲ. ಬಡವರ ಮನೆವರೆಗು ವಿದ್ಯುತ್ ತಲುಪುವಂತೆ ಮಾಡಿದ್ದು ನಾವು. ಕಟ್ಟಕಡೆಯ ಹಳ್ಳಿಗಳಿಗೆ ಅಡುಗೆ ಅನಿಲ ತಲುಪಿಸಿದ್ದು ನಾವೆ ಎಂದು ಬಿ. ಎಸ್ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ತುಕ್ಡೇ ತುಕ್ಡೇ ಗ್ಯಾಂಗ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ

ಜೆಡಿಎಸ್​, ಕಾಂಗ್ರೆಸ್​​​​ನವರು ಒಳ ಒಪ್ಪಂದ ಮಾಡಿಕೊಳ್ಳುತ್ತಾರೆ. ನಾವು ಮೈತ್ರಿ ಮಾಡಿಕೊಂಡು ಚುನಾವಣೆಗೆ ಹೋಗುವುದಿಲ್ಲ. ಚುನಾವಣೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಜೆಡಿಎಸ್ ಒಟ್ಟಿಗೆ ಕೂರುತ್ತಾರೆ. ನಮ್ಮ ಜೊತೆ ಬಿಜೆಪಿ ಇದೆ ಅಂತಾ ಜೆಡಿಎಸ್ ಹೇಳಿಕೊಳ್ಳುತ್ತದೆ. ನಾನು ಕರ್ನಾಟಕದ ಜನತೆಗೆ ಸ್ಪಷ್ಟವಾಗಿ ಹೇಳುತ್ತೇನೆ. ಬಿಜೆಪಿ ಏಕಾಂಗಿಯಾಗಿ ವಿಧಾನಸಭಾ ಚುನಾವಣೆ ಎದುರಿಸಲಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

ಜೆಡಿಎಸ್ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು

ಜೆಡಿಎಸ್ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು. ಒಂದು ಬಾರಿ ಬಿಜೆಪಿಗೆ ಅಧಿಕಾರ ಕೊಟ್ಟು ನೋಡಿ. ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೇವೆ. ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದಾರೆ. ಇಲ್ಲಿ ಟಿಪ್ಪು ಸುಲ್ತಾನ್​ನನ್ನು ಹೀರೋ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:12 pm, Sat, 31 December 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ