AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮನ, ಅರಮನೆ ಮೈದಾನದಲ್ಲಿ ವೇದಿಕೆ ಸಿದ್ಧತೆ ಪರಿಶೀಲಿಸಿದ ಸಿಎಂ ಬೊಮ್ಮಾಯಿ

ಕೇಂದ್ರ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ರಾತ್ರಿ 9.20ಕ್ಕೆ ದೆಹಲಿಯಿಂದ‌ ಹೊರಟಿ, ಮಧ್ಯರಾತ್ರಿ 12ಕ್ಕೆ ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ಬಳಿಕ 12.30ಕ್ಕೆ ತಾಜ್ ವೆಸ್ಟೆಂಡ್ ಹೋಟೆಲ್ ತಲುಪಲಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮನ, ಅರಮನೆ ಮೈದಾನದಲ್ಲಿ ವೇದಿಕೆ ಸಿದ್ಧತೆ ಪರಿಶೀಲಿಸಿದ ಸಿಎಂ ಬೊಮ್ಮಾಯಿ
ಅರಮನೆ ಮೈದಾನದಲ್ಲಿ ವೇದಿಕೆ ಸಿದ್ಧತೆ ಪರಿಶೀಲಿಸಿದ ಸಿಎಂ ಬೊಮ್ಮಾಯಿ
TV9 Web
| Edited By: |

Updated on:Mar 30, 2022 | 4:34 PM

Share

ಬೆಂಗಳೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳು(Shivakumara Swamiji) ಇಹಲೋಕ ತ್ಯಜಿಸಿದ್ರೂ, ಭಕ್ತರ ಪಾಲಿಗೆ ಈಗಲೂ ದೇವರಾಗೇ ಉಳಿದಿದ್ದಾರೆ. ತುಮಕೂರಿನ ಸಿದ್ಧಗಂಗಾ ಶ್ರೀಗಳ(Siddaganga Seer) 115ನೇ ಜಯಂತೋತ್ಸವ ಏಪ್ರಿಲ್ ಒಂದರಂದು ನಡೆಯಲಿದೆ. ಈ ಹಿನ್ನೆಲೆ ತುಮಕೂರಿಗೆ ಕೇಂದ್ರ ಸಚಿವ ಅಮಿತ್ ಶಾ(Amit Shah) ಆಗಮಿಸಲಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ರಾತ್ರಿ 9.20ಕ್ಕೆ ದೆಹಲಿಯಿಂದ‌ ಹೊರಟಿ, ಮಧ್ಯರಾತ್ರಿ 12ಕ್ಕೆ ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ಬಳಿಕ 12.30ಕ್ಕೆ ತಾಜ್ ವೆಸ್ಟೆಂಡ್ ಹೋಟೆಲ್ ತಲುಪಲಿದ್ದಾರೆ. ಏಪ್ರಿಲ್ 1ರಂದು ರಾತ್ರಿ 7.45ಕ್ಕೆ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಿಂದ ನೇರವಾಗಿ ಹೆಚ್ಎಎಲ್ ಏರ್ ಪೋರ್ಟ್ ಗೆ ತೆರಳಲಿ ರಾತ್ರಿ 8 ಗಂಟೆಗೆ ಹೆಚ್ಎಎಲ್ ಏರ್ ಪೋರ್ಟ್ ನಿಂದ ದೆಹಲಿಗೆ ವಾಪಸಾಗಲಿದ್ದಾರೆ.

ಇನ್ನು ಮತ್ತೊಂದೆಡೆ ನಾಳೆ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ಅರಮನೆ ಮೈದಾನದಲ್ಲಿ ವೇದಿಕೆ ಸಿದ್ಧತೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪರಿಶೀಲಿಸಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಸಚಿವರು, ಶಾಸಕರು, ಸಂಸದರು, ಸಹಕಾರಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ. ವಾಹನ ನಿಲುಗಡೆ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಜನರಿಗೆ ತೊಂದರೆಯಾಗದಂತೆ ಕುಡಿವ ನೀರಿನ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರುಗಳಾದ ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಶಾಸಕರಾದ ನಾಗೇಂದ್ರ, ರಾಜಕುಮಾರ್ ಪಾಟೀಲ್ ತೆಲ್ಕೂರ್, ಮಾಡಾಳ್ ವಿರುಪಾಕ್ಷಪ್ಪ, ಪೊಲೀಸ್ ಕಮಿಷನರ್ ಕಮಲ್ ಪಂತ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Basavaraj Bommai

ಸಿಎಂ ಬಸವರಾಜ ಬೊಮ್ಮಾಯಿ

Basavaraj Bommai

ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಯುವತಿಯರ ಪೊಟೋ ಪಡೆದು, ಆನ್ ಲೈನ್ ಮೂಲಕ ಒಳ್ಳೆಯ ಸಂಬಳ‌ ಕೊಡಿಸೋದಾಗಿ ನಂಬಿಸಿ ಬ್ಲಾಕ್ ಮೇಲ್, ಅರೆಸ್ಟ್

ಮಗುವಿನ ಮಾರಕ ಕಾಯಿಲೆ ಚಿಕಿತ್ಸೆಗಾಗಿ ಮತಾಂತರ ನಿರ್ಧಾರ! ಟಿವಿ9 ವರದಿಯ ಬಳಿಕ ಬದಲಾಯ್ತು ಬಡ ಕುಟುಂಬದ ಜೀವನ

Published On - 4:30 pm, Wed, 30 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್