AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3D-printed Post Office Building: ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿ ಉದ್ಘಾಟಿಸಿದ ಅಶ್ವಿನಿ ವೈಷ್ಣವ್‌

ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಕೆಂಬ್ರಿಡ್ಜ್‌ ಲೇಔಟ್‌ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ​ ಬಿಡುಗಡೆ ಮಾಡಿದರು.

3D-printed Post Office Building: ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿ ಉದ್ಘಾಟಿಸಿದ ಅಶ್ವಿನಿ ವೈಷ್ಣವ್‌
3ಡಿ ಅಂಚೆ ಕಚೇರಿ ಉದ್ಘಾಟಿಸಿದ ಸಚಿವ ಅಶ್ವಿನಿ ವೈಷ್ಣವ್​
Follow us
ವಿವೇಕ ಬಿರಾದಾರ
|

Updated on:Aug 18, 2023 | 10:21 AM

ಬೆಂಗಳೂರು: ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ಅವರು ಇಂದು (ಆ.18) ಬೆಳಿಗ್ಗೆ ಬೆಂಗಳೂರಿನ ಕೆಂಬ್ರಿಡ್ಜ್‌ ಲೇಔಟ್‌ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು (3D Post Office) ಉದ್ಘಾಟಿಸಿದರು. ಬಳಿಕ ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ​ ಬಿಡುಗಡೆ ಮಾಡಿದರು.

ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ನನಗೆ ಬೆಂಗಳೂರಿಗೆ ಬರಲು ಸಂತಸವಾಗುತ್ತದೆ. ಈ ನಗರವು ಸಾಕಷ್ಟು ಶಕ್ತಿಯನ್ನು ಹೊಂದಿದೆ. ಇಲ್ಲಿ ಸಕಾರಾತ್ಮಕ ಚಿಂತನೆ ಅಧಿಕವಾಗಿದೆ. ಬೆಂಗಳೂರು ಯಾವಾಗಲೂ ಭಾರತಕ್ಕೆ ಹೊಸ ಚಿತ್ರಣವನ್ನು ನೀಡುತ್ತಿರುತ್ತದೆ. ಈ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡ ನೀವು ನೋಡಿದ ಹೊಸ ಚಿತ್ರ.  ಭಾರತವು ಇಂದು ಅಭಿವೃದ್ಧಿಯಾಗುತ್ತಿದ್ದು, ನಮ್ಮದೇ ತಂತ್ರಜ್ಞಾನದಿಂದ.  ಇದೆಲ್ಲವೂ ಸಾಧ್ಯವಾದದ್ದು ದೇಶವು ನಿರ್ಣಾಯಕ ಮತ್ತು ನಮ್ಮ ಜನರ ಸಾಮರ್ಥ್ಯಗಳಲ್ಲಿ ವಿಶ್ವಾಸವನ್ನು ಹೊಂದಿರುವ ನಾಯಕತ್ವವನ್ನು ಹೊಂದಿರುವುದರಿಂದ ಎಂದು ಹೇಳಿದರು.

ಅಂಚೆ ಕಚೇರಿ ವಿಶೇಷತೆ

ಈ ಅಂಚೆ ಕಚೇರಿಗೆ “ಕೇಂಬ್ರಿಡ್ಜ್ ಲೇಔಟ್ ಪಿಒ” ಎಂದು ಹೆಸರಿಸಲಾಗಿದೆ. ಇದೇ ವರ್ಷ ಮಾರ್ಚ್ 21 ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡದ ನಿರ್ಮಾಣ ಕಾರ್ಯ ಮೇ 3ರ ಒಳಗಡೆಯೇ ಪೂರ್ಣಗೊಂಡಿದ್ದರೂ, ಒಳಚರಂಡಿ ಮತ್ತು ನೀರಿನ ಸಂಪರ್ಕ ಸಂಬಂಧ ಎರಡು ತಿಂಗಳು ಸಮಯ ತೆಗೆದುಕೊಂಡಿತು. ಇನ್ನು ಉದ್ಘಾಟನೆಗೆ ಸಚಿವರ ಲಭ್ಯತೆಗಾಗಿ ಒಂದು ತಿಂಗಳು ಹಿಡಿಯಿತು. ಈ ಕಚೇರಿ ಆರಂಭವಾದ ನಂತರ ಹಲಸೂರು ಬಜಾರ್‌ನಲ್ಲಿರುವ ಪ್ರಸ್ತುತ ಅಂಚೆ ಕಚೇರಿಯನ್ನು ಮುಚ್ಚಲಾಗುವುದು. ಮತ್ತು ಅಲ್ಲಿಯ ಸಿಬ್ಬಂದಿ ಮತ್ತು ಸಾಮಗ್ರಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಸ್ಟಾರ್ಟಪ್ ಮಾತ್ರವಲ್ಲ, ಉದ್ಯೋಗ ಸೃಷ್ಟಿಯಲ್ಲಿಯೂ ಮುಂಚೂಣಿಯಲ್ಲಿದೆ ಬೆಂಗಳೂರು; ಅಧ್ಯಯನ ವರದಿ

“ಎಲ್ & ಟಿ (ಲಾರ್ಸೆನ್ ಮತ್ತು ಟೂಬ್ರೊ) ನಿರ್ಮಿಸಿರುವ ಕಟ್ಟಡವು ಸುಮಾರು 1,100 ಚದರ ಅಡಿ ವಿಸ್ತೀರ್ಣದಲ್ಲಿದೆ. 3ಡಿ ತಂತ್ರಜ್ಞಾನ ಅಳವಡಿಸಲು ತೆರಿಗೆ ಸೇರಿ ಸುಮಾರು 26 ಲಕ್ಷ ರೂ. ಖರ್ಚಾಯಿತು. ಇನ್ನು ಪೇವರ್ಸ್​, ಡ್ರೈನೇಜ್ ಸಂಪರ್ಕ ಮತ್ತು ನೀರಿನ ಸಂಪರ್ಕದಂತಹ ಇತರ ವೆಚ್ಚಗಳು ಸೇರಿ ಸುಮಾರು 40 ಲಕ್ಷ ರೂಪಾಯಿ ಖರ್ಚಾಗಿದೆ. ಈ ಮೂಲಕ ಸಾಂಪ್ರದಾಯಿಕ ಅಂಚೆ ಕಚೇರಿ ನಿರ್ಮಿಸಿದರೇ ಎಷ್ಟು ಖರ್ಚಾಗುತ್ತಿತ್ತು ಅದಕ್ಕೆ ಹೋಲಿಸಿದರೆ ಈ ಅಂಚೆ ಕಚೇರಿಯ ನಿರ್ಮಾಣ ವೆಚ್ಚದಲ್ಲಿ ಶೇ. 30ರಿಂದ 40ರಷ್ಟು ಹಣ ಕಡಿಮೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:02 am, Fri, 18 August 23

‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್