AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್​​ ಖರ್ಗೆ ವಿರುದ್ಧ ಕುಮಾರಸ್ವಾಮಿ ಬಿಗ್​​ ಬಾಂಬ್​​: ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ!

ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ಹಿಂದೆ ಸಚಿವರಾಗಿದ್ದ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯಲ್ಲಿ ಅವ್ಯವಹಾರ ನಡೆದಿದೆ. ತರಾತುರಿಯಲ್ಲಿ ಎಇಇಗಳ ನೇಮಕಾತಿ ಸಂಬಂಧ ಸಚಿವರು ರಾಜೀನಾಮೆ ನೀಡಬೇಕು ಎಂದವರು ಆಗ್ರಹಿಸಿದ್ದಾರೆ. ಆದರೆ ತಮ್ಮ ಮೇಲಿನ ಆರೋಪಗಳಿಗೆ ಪ್ರಿಯಾಂಕ್​​ ಖರ್ಗೆ ಖಡಕ್​​ ತಿರುಗೇಟು ನೀಡಿದ್ದಾರೆ.

ಪ್ರಿಯಾಂಕ್​​ ಖರ್ಗೆ ವಿರುದ್ಧ ಕುಮಾರಸ್ವಾಮಿ ಬಿಗ್​​ ಬಾಂಬ್​​: ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ!
ಪ್ರಿಯಾಂಕ್​​ ಖರ್ಗೆ ವಿರುದ್ಧ ಕುಮಾರಸ್ವಾಮಿ ಬಿಗ್​​ ಬಾಂಬ್​​Image Credit source: Tv9 Kannada
ಸುನಿಲ್​ ಎಮ್​ ಹೆಚ್​
| Edited By: |

Updated on:Aug 28, 2026 | 12:51 PM

Share

ಬೆಂಗಳೂರು, ಆಗಸ್ಟ್​​ 28: ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ (Priyank Kharge) ವಿರುದ್ಧ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದು, ಅವರು ಈ ಹಿಂದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ಸಚಿವರಾಗಿದ್ದ ವೇಳೆ ಅವ್ಯವಹಾರ ನಡೆದಿದೆ. ತರಾತುರಿಯಲ್ಲಿ ಎಇಇಗಳ ನೇಮಕಾತಿ ಮಾಡಿಕೊಂಡಿದ್ದು, ಈ ಅಕ್ರಮ ಸಂಬಂಧ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ತರಾತುರಿಯಲ್ಲಿ 24 ಎಇಇ ನೇಮಕ ಮಾಡಿದ್ದು ಯಾಕೆ ಎಂದ ಹೆಚ್​ಡಿಕೆ, ಈ ಸಂಬಂಧ ಒಎಮ್​ಆರ್​​ ಶೀಟ್​ ಮತ್ತು ದಾಖಲೆಯನ್ನೂ ಬಿಡುಗಡೆ ಮಾಡಿದ್ದಾರೆ. ತರಾತುರಿಯಲ್ಲಿ ಕೊಡಬಾರದೆಂದು ಕೋರ್ಟ್ ಆದೇಶವಿದೆ. ಹೀಗಿದ್ದರೂ ಏಕೆ ಅಪಾಯಿಂಟ್ಮೆಂಟ್ ಕೊಟ್ರಿ? ಎಂದು ಪ್ರಿಯಾಂಕ್​​ ಖರ್ಗೆ ಅವರನ್ನು ಪ್ರಶ್ನಿಸಿದ್ದಾರೆ.

‘ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ’

ಪ್ರಿಯಾಂಕ್ ಖರ್ಗೆ ಎಲ್ಲದರಲ್ಲೂ ನಾನು ಪಾರದರ್ಶಕ, ಪರಿಶುದ್ಧವಾಗಿ ಇದ್ದೇನೆ ಅಂತ ಹೇಳುತ್ತಾರೆ. ನಾನು ಅಧಿಕಾರಕ್ಕೆ ಬಂದ್ರೆ ಎಲ್ಲವೂ ಕ್ಲೀನ್ ಮಾಡ್ತೇನೆ ಅಂದವರು ಸರ್ಕಾರದ ವಿರುದ್ಧ ಮಾತನಾಡುವವರ ಧ್ವನಿ ಅಡಗಿಸಲು ಯತ್ನಿಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆಯವರೇ ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ. ಆರ್​​ಎಸ್​​ಎಸ್​​ ಅಕೌಂಟ್​​ ಬಗ್ಗೆ ದಿನಾ ಕೇಳುವ ನೀವು ನಿಮ್ಮ ನಾಲಗೆ ಸರಿ ಇಟ್ಟುಕೊಳ್ಳಿ. ಆಡುಮುಟ್ಟಿದ ಸೊಪ್ಪಿಲ್ಲ ಅನ್ನೋ ಹಾಗೆ ನೀವು ಚರ್ಚಿಸದ ವಿಚಾರವೇ ಇಲ್ಲ. ಕೆಪಿಎಸ್​​ಸಿ ಹಗರಣ ಸಂಬಂಧ ಎಕ್ಸಾಂ ಕಂಟ್ರೋಲರ್​​ ಜ್ಞಾನೇಂದ್ರ ಕುಮಾರ್ ಆರೋಗ್ಯ ಸರಿಯಿಲ್ಲ ಎಂದು ಸಚಿವರೇ ಹೇಳಿದ್ದರು. ಊರಿಗೆ ಹೋಗಿದ್ದಾರೆ ಇನ್ನೆರಡು ದಿನಗಳಲ್ಲಿ ವಾಪಸ್ ಬರುತ್ತಾರೆ ಅಂದಿದ್ದರು. ಆ ಬಳಿಕ ಅವರೇ ಜ್ಞಾನೇಂದ್ರ ಎಲ್ಲಿದ್ದಾರೋ ಗೊತ್ತಿಲ್ಲ ಅಂತಾರೆ. ಗೊತ್ತಿಲ್ಲ ಅಂದ‌ಮೇಲೆ ಗೃಹ ಇಲಾಖೆ ಯಾಕೆ ನಡೆಸುತ್ತೀರಿ ಎಂದು ಹೆಚ್​​ಡಿಕೆ ಕಿಡಿ ಕಾರಿದ್ದಾರೆ.

ಇದನ್ನೂ ಓದಿ:  ಹೆಚ್​​.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ?: ಮೋದಿ-ಕೇಂದ್ರ ಸಚಿವರ ಭೇಟಿ ಬೆನ್ನಲ್ಲೇ ಹೆಚ್ಚಿದ ಚರ್ಚೆ

ಆರೋಪಗಳಿಗೆ ಪ್ರಿಯಾಂಕ್​​ ಖರ್ಗೆ ಕೌಂಟರ್​​

ಇನ್ನು ತಮ್ಮ ಮೇಲೆ ಕೇಂದ್ರ ಸಚಿವರು ಮಾಡಿರುವ ಆರೋಪಗಳಿಗೆ ಕೌಂಟರ್​​ ನೀಡಿರುವ ಪ್ರಿಯಾಂಕ್​​ ಖರ್ಗೆ, ನನ್ನ ನಾಲಿಗೆ ಬಗ್ಗೆ ಮಾತನಾಡುವವರ ಜೆಡಿಎಸ್ ನವರು ಯಾರು? ನಿಮ್ಮ ಪಕ್ಷದ ಅಸ್ತಿತ್ವ ಉಲಿಸಿಕೊಳ್ಳಲು ಪ್ರಿಯಾಂಕ ಖರ್ಗೆ ಬೇಕಾಗಿದೆಯಾ ಎಂದು ಪ್ರಶ್ನಿಸಿದ್ದಾರೆ. ನನ್ನಿಂದ ರಾಜಕೀಯ ಅಸ್ತಿತ್ವ ಉಳಿಯುತ್ತೆ ಅನದನೋದಾದ್ರೆ ಮಾತನಾಡಲಿ. ಅಧಿಕಾರಕ್ಕಾಗಿ ತತ್ತ್ವ ಸಿದ್ದಾಂತ ಬಿಟ್ಟು ಹೋಗುವವರ ಬಗ್ಗೆ ನಾನು ಏನು ಹೇಳಲಿ? ಜೆಡಿಎಸ್, ಬಿಜೆಪಿಯಿಂದ ನಾನು ಕಲಿಯಬೇಕಾಗಿರುವುದು ಏನೂ ಇಲ್ಲ ಎಂದವರು ಕಿಡಿ ಕಾರಿದ್ದಾರೆ. ಐಎಎಸ್​ ಅಧಿಕಾರಿ ನಾಪತ್ತೆಯಾಗಿದ್ದ ವಿಚಾರವಾಗಿಯೂ ಉತ್ತರಿಸಿರುವ ಅವರು, ಆ ಐಎಎಸ್​ ಅಧಿಕಾರಿ ಎಲ್ಲಿದ್ದಾರೆ ಎಂದು ನನಗೆ ಗೊತ್ತಿದೆ. ಅದನ್ನು ಕುಮಾರಸ್ವಾಮಿಗೆ, ಬಿಜೆಪಿಯವರಿಗೆ ಹೇಳುವ ಅಗತ್ಯವಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:43 pm, Fri, 28 August 26

Follow Us
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ