AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ವಿಶೇಷ ರೈಲು ಸೇವೆ ಪುನಾರಂಭ-ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ

ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ರೈಲು ಓಡಾಟದ ಪುನರಾರಂಭದ ಅಗತ್ಯತೆಯನ್ನು ಸಚಿವ ಹಾಗೂ ಅಧಿಕಾರಿಗಳಿಗೆ ಮನವರಿಕೆ ಮಾಡಿದರು. ಪ್ರಲ್ಹಾದ್​ ಜೋಶಿಯವರ ಮಾತುಕತೆಯ ಫಲವಾಗಿ ನೈರುತ್ಯ ರೈಲ್ವೆ ಆಡಳಿತ ಮಂಡಳಿ, ಈ ರೈಲು ಸೇವೆಯನ್ನು ನವೆಂಬರ್​ 30 ರಿಂದ 2024 ಮಾ.01 ರವರೆಗೆ ಮುಂದುವರೆಸಿ ಇಂದೇ ಆದೇಶ ಹೊರಡಿಸಿದೆ.

ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ವಿಶೇಷ ರೈಲು ಸೇವೆ ಪುನಾರಂಭ-ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ
ಕಿರಣ್ ಹನುಮಂತ್​ ಮಾದಾರ್
|

Updated on:Nov 26, 2023 | 8:44 PM

Share

ಬೆಂಗಳೂರು, ನ.26: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ(Pralhad Joshi)ಯವರ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw) ಅವರು ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್(Bangalore-Hubli Super Fast) ವಿಶೇಷ ರೈಲು ಸೇವೆಯನ್ನು ಇದೇ ನ. 30 ರಿಂದ ಮತ್ತೆ ಪುನಾರಂಭ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿಯವರು ತಿಳಿಸಿದ್ದಾರೆ. ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ವಿಶೇಷ ರೈಲು (ರೈಲು ಸಂಖ್ಯೆ 07339 / 07340) ಸಂಚಾರ ಸೇವೆಯನ್ನು ಇದೇ 30 ರಿಂದ ಮತ್ತೆ ಪುನರಾರಂಭಗೊಳ್ಳಲಿದೆ ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಕಡಿಮೆ ಪ್ರಯಾಣಿಕರ ಕೊರತೆ ಕಾರಣ ಓಡಾಟ ರದ್ದಾಗಿತ್ತು

ಕಡಿಮೆ ಪ್ರಯಾಣಿಕರ ಕೊರತೆ ಕಾರಣ ಓಡಾಟ ರದ್ದುಗೊಳಿಸಲಾಗಿದೆಯೆಂದು ನೈರುತ್ಯ ರೈಲ್ವೆ ಆಡಳಿತ ಮಂಡಳಿ ತಿಳಿಸಿತ್ತು. ನಂತರ ಈ ಭಾಗದ ಪ್ರಯಾಣಿಕರಿಗೆ ಆಗುವ ಅನಾನುಕೂಲತೆ ಬಗ್ಗೆ ಹಾಗೂ ಜನರ ಆಗ್ರಹದ ಕಾರಣದಿಂದ ಸಚಿವ ಪ್ರಲ್ಹಾದ್​ ಜೋಶಿಯವರು, ರೈಲ್ವೆ ಸಚಿವ ಆಶ್ವಿನಿ ವೈಷ್ಣವ್ ಹಾಗೂ ನೈರುತ್ಯ ರೈಲ್ವೆ ಮಹಾ ಪ್ರಭಂದಕ ಸಂಜೀವ ಕಿಶೋರ್ ಅವರೊಂದಿಗೆ ಮಾತುಕತೆ ನಡೆಸಿದರು.

ಇದನ್ನೂ ಓದಿ:ನಾಳೆ ಜನ್ಮದಿನ: ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಪ್ರಲ್ಹಾದ್ ಜೋಶಿ ವಿಶೇಷ ಮನವಿ

ಈ ವೇಳೆ ಈ ರೈಲು ಓಡಾಟದ ಪುನರಾರಂಭದ ಅಗತ್ಯತೆಯನ್ನು ಸಚಿವ ಹಾಗೂ ಅಧಿಕಾರಿಗಳಿಗೆ ಮನವರಿಕೆ ಮಾಡಿದರು. ಪ್ರಲ್ಹಾದ್​ ಜೋಶಿಯವರ ಮಾತುಕತೆಯ ಫಲವಾಗಿ ನೈರುತ್ಯ ರೈಲ್ವೆ ಆಡಳಿತ ಮಂಡಳಿ, ಈ ರೈಲು ಸೇವೆಯನ್ನು ನವೆಂಬರ್​ 30 ರಿಂದ 2024 ಮಾ.01 ರವರೆಗೆ ಮುಂದುವರೆಸಿ ಇಂದೇ ಆದೇಶ ಹೊರಡಿಸಿದೆ. ತಮ್ಮ ಹಾಗೂ ಜನತೆಯ ಆಗ್ರಹಕ್ಕೆ ಸ್ಪಂದಿಸಿದ ಕೇಂದ್ರ ರೈಲ್ವೆ ಸಚಿವ ಆಶ್ವಿನಿ ವೈಷ್ಣವ್ ಹಾಗೂ ನೈರುತ್ಯ ರೈಲ್ವೆ ಮಹಾಪ್ರಭಂದಕರಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿಯವರು ಧನ್ಯವಾದ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Sun, 26 November 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ