AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ವಿಶೇಷ ರೈಲು ಸೇವೆ ಪುನಾರಂಭ-ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ

ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ರೈಲು ಓಡಾಟದ ಪುನರಾರಂಭದ ಅಗತ್ಯತೆಯನ್ನು ಸಚಿವ ಹಾಗೂ ಅಧಿಕಾರಿಗಳಿಗೆ ಮನವರಿಕೆ ಮಾಡಿದರು. ಪ್ರಲ್ಹಾದ್​ ಜೋಶಿಯವರ ಮಾತುಕತೆಯ ಫಲವಾಗಿ ನೈರುತ್ಯ ರೈಲ್ವೆ ಆಡಳಿತ ಮಂಡಳಿ, ಈ ರೈಲು ಸೇವೆಯನ್ನು ನವೆಂಬರ್​ 30 ರಿಂದ 2024 ಮಾ.01 ರವರೆಗೆ ಮುಂದುವರೆಸಿ ಇಂದೇ ಆದೇಶ ಹೊರಡಿಸಿದೆ.

ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ವಿಶೇಷ ರೈಲು ಸೇವೆ ಪುನಾರಂಭ-ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ
ಕಿರಣ್ ಹನುಮಂತ್​ ಮಾದಾರ್
|

Updated on:Nov 26, 2023 | 8:44 PM

Share

ಬೆಂಗಳೂರು, ನ.26: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ(Pralhad Joshi)ಯವರ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw) ಅವರು ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್(Bangalore-Hubli Super Fast) ವಿಶೇಷ ರೈಲು ಸೇವೆಯನ್ನು ಇದೇ ನ. 30 ರಿಂದ ಮತ್ತೆ ಪುನಾರಂಭ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿಯವರು ತಿಳಿಸಿದ್ದಾರೆ. ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ವಿಶೇಷ ರೈಲು (ರೈಲು ಸಂಖ್ಯೆ 07339 / 07340) ಸಂಚಾರ ಸೇವೆಯನ್ನು ಇದೇ 30 ರಿಂದ ಮತ್ತೆ ಪುನರಾರಂಭಗೊಳ್ಳಲಿದೆ ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಕಡಿಮೆ ಪ್ರಯಾಣಿಕರ ಕೊರತೆ ಕಾರಣ ಓಡಾಟ ರದ್ದಾಗಿತ್ತು

ಕಡಿಮೆ ಪ್ರಯಾಣಿಕರ ಕೊರತೆ ಕಾರಣ ಓಡಾಟ ರದ್ದುಗೊಳಿಸಲಾಗಿದೆಯೆಂದು ನೈರುತ್ಯ ರೈಲ್ವೆ ಆಡಳಿತ ಮಂಡಳಿ ತಿಳಿಸಿತ್ತು. ನಂತರ ಈ ಭಾಗದ ಪ್ರಯಾಣಿಕರಿಗೆ ಆಗುವ ಅನಾನುಕೂಲತೆ ಬಗ್ಗೆ ಹಾಗೂ ಜನರ ಆಗ್ರಹದ ಕಾರಣದಿಂದ ಸಚಿವ ಪ್ರಲ್ಹಾದ್​ ಜೋಶಿಯವರು, ರೈಲ್ವೆ ಸಚಿವ ಆಶ್ವಿನಿ ವೈಷ್ಣವ್ ಹಾಗೂ ನೈರುತ್ಯ ರೈಲ್ವೆ ಮಹಾ ಪ್ರಭಂದಕ ಸಂಜೀವ ಕಿಶೋರ್ ಅವರೊಂದಿಗೆ ಮಾತುಕತೆ ನಡೆಸಿದರು.

ಇದನ್ನೂ ಓದಿ:ನಾಳೆ ಜನ್ಮದಿನ: ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಪ್ರಲ್ಹಾದ್ ಜೋಶಿ ವಿಶೇಷ ಮನವಿ

ಈ ವೇಳೆ ಈ ರೈಲು ಓಡಾಟದ ಪುನರಾರಂಭದ ಅಗತ್ಯತೆಯನ್ನು ಸಚಿವ ಹಾಗೂ ಅಧಿಕಾರಿಗಳಿಗೆ ಮನವರಿಕೆ ಮಾಡಿದರು. ಪ್ರಲ್ಹಾದ್​ ಜೋಶಿಯವರ ಮಾತುಕತೆಯ ಫಲವಾಗಿ ನೈರುತ್ಯ ರೈಲ್ವೆ ಆಡಳಿತ ಮಂಡಳಿ, ಈ ರೈಲು ಸೇವೆಯನ್ನು ನವೆಂಬರ್​ 30 ರಿಂದ 2024 ಮಾ.01 ರವರೆಗೆ ಮುಂದುವರೆಸಿ ಇಂದೇ ಆದೇಶ ಹೊರಡಿಸಿದೆ. ತಮ್ಮ ಹಾಗೂ ಜನತೆಯ ಆಗ್ರಹಕ್ಕೆ ಸ್ಪಂದಿಸಿದ ಕೇಂದ್ರ ರೈಲ್ವೆ ಸಚಿವ ಆಶ್ವಿನಿ ವೈಷ್ಣವ್ ಹಾಗೂ ನೈರುತ್ಯ ರೈಲ್ವೆ ಮಹಾಪ್ರಭಂದಕರಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿಯವರು ಧನ್ಯವಾದ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Sun, 26 November 23

Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ