AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಸಮೀಕ್ಷೆ: ಮನೆಗೆ ಬಂದ ಗಣತಿದಾರರಿಗೆ ಕೇಂದ್ರ ಸಚಿವ ಸೋಮಣ್ಣ ಕ್ಲಾಸ್​

ಬೆಂಗಳೂರಿನ ವಿಜಯನಗರದಲ್ಲಿರುವ ತಮ್ಮ ಮನೆಗೆ ಜಾತಿ ಸಮೀಕ್ಷೆಗೆಂದು ಬಂದಿದ್ದ ಗಣತಿದಾರರಿಗೆ ಕೇಂದ್ರ ಸಚಿವ ಸೋಮಣ್ಣ ಕ್ಲಾಸ್​ ತೆಗೆದುಕೊಂಡ ಪ್ರಸಂಗ ನಡೆದಿದೆ. ಮನೆಗೆ 9 ಜನ ಸಿಬ್ಬಂದಿ ನೋಡಿ ಈ ವೇಳೆ ಇಷ್ಟು ಜನ ಯಾಕೆ ಬಂದಿದ್ದೀರಾ ಎಂದು ಪ್ರಶ್ನಿಸಿರುವ ಅವರು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೇ ಜಾತಿಗಣತಿ ಮಾಡಿಸುತ್ತೆ. ಹೀಗಿರುವಾಗ ಇಷ್ಟು ಪ್ರಶ್ನೆಗಳು ಬೇಕಾ? ಇದೆಲ್ಲಾ ನೀವು ಸರ್ಕಾರಕ್ಕೆ ತಿಳಿಸಬೇಕಲ್ವಾ? ಎಂದಿದ್ದಾರೆ.

ಜಾತಿ ಸಮೀಕ್ಷೆ: ಮನೆಗೆ ಬಂದ ಗಣತಿದಾರರಿಗೆ ಕೇಂದ್ರ ಸಚಿವ ಸೋಮಣ್ಣ ಕ್ಲಾಸ್​
ವಿ. ಸೋಮಣ್ಣ ಮನೆಯಲ್ಲಿ ಜಾತಿ ಗಣತಿ
ಪ್ರಸನ್ನ ಹೆಗಡೆ
|

Updated on: Oct 05, 2025 | 12:13 PM

Share

ಬೆಂಗಳೂರು, ಅಕ್ಟೋಬರ್​ 05: ರಾಜ್ಯ ಸರ್ಕಾರದಿಂದ ನಡೆಸಲಾಗ್ತಿರುವ ಸಾಮಾಜಿಕ, ಆರ್ಥಿಕ & ಶೈಕ್ಷಣಿಕ ಸಮೀಕ್ಷೆ (Caste census) ಹಿನ್ನಲೆ ಮನೆಗೆ ಗಣತಿಗೆ ಬಂದವರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಕ್ಲಾಸ್​ ತೆಗೆದುಕೊಂಡ ಪ್ರಸಂಗ ನಡೆದಿದೆ. ಮನೆಗೆ ಬಂದವರನ್ನು ನೋಡಿ ಈ ವೇಳೆ ಇಷ್ಟು ಜನ ಯಾಕೆ ಬಂದಿದ್ದೀರಾ ಎಂದು ಸೋಮಣ್ಣ ಪ್ರಶ್ನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೇ ಜಾತಿಗಣತಿ ಮಾಡಿಸುತ್ತೆ. ಹೀಗಿರುವಾಗ ಇಷ್ಟು ಪ್ರಶ್ನೆಗಳು ಬೇಕಾ? ಇದೆಲ್ಲಾ ನೀವು ಸರ್ಕಾರಕ್ಕೆ ತಿಳಿಸಬೇಕಲ್ವಾ? ಸರ್ಕಾರಿ ನೌಕರರು ಸರ್ಕಾರದ ಏಜೆಂಟ್ ಆಗಿ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿರುವ ಕೇಂದ್ರ ಸಚಿವ ಸೋಮಣ್ಣ ಮನೆಗೆ 9 ಜನ ಸಿಬ್ಬಂದಿ ತೆರಳಿದ್ದ ವೇಳೆ ಈ ಪ್ರಸಂಗ ನಡೆದಿದೆ. ಉಪಜಾತಿ ಯಾವುದು ಅಂತಾ ಗಣತಿದಾರರು ಕೇಳಿದಾಗ ಅದೆಲ್ಲಾ ಯಾಕೆ ಬೇಕು? ಸಿದ್ದರಾಮಯ್ಯ ಜಾತಿ ಅಂತಾ ಬರೆದುಕೊಳ್ಳಿ ಎಂದು ಸೋಮಣ್ಣ ತಿಳಿಸಿದ್ದಾರೆ. ಮದುವೆ ಆದಾಗ ನಿಮಗೆ ಎಷ್ಟು ವರ್ಷ ಅಂತಾ ಸಿಬ್ಬಂದಿ ಕೇಳಿದ್ದು, ಇದನ್ನ ನಮ್ಮ ಅಪ್ಪ-ಅಮ್ಮನ ಕೇಳಬೇಕು. 26 ಅಂತಾ ಬರೆದುಕೊಳ್ಳಿ ಎಂದಿದ್ದಾರೆ. ಇದು ವೋಟ್​ ಗಾಗಿ ಸಿದ್ದರಾಮಯ್ಯ ಮಾಡಿಸುತ್ತಿರುವ ಸಮೀಕ್ಷೆ ಎಂದಿರುವ ಕೇಂದ್ರ ಸಚಿವರು, ಅನೇಕ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಮತ್ತು ಡಿಕೆಶಿ ಹೆಸರನ್ನೇ ಹಾಕೊಳ್ಳಿ ಎಂದಿದ್ದಾರೆ. ಉತ್ತರ ಕೊಡಲಾಗದ ಪ್ರಶ್ನೆಗಳನ್ನೆಲ್ಲಾ ನೀವು ಕೇಳುತ್ತಿದ್ದೀರಿ. ಸಿದ್ದರಾಮಯ್ಯ, ಡಿಕೆಶಿಯವರನ್ನ ಯಾವ ಗ್ರೂಪ್ ಹಾಕ್ತೀರಿ ಅಂತಾ ಗಣತಿದಾರ ಸಿಬ್ಬಂದಿಗೆ ಸೋಮಣ್ಣ ಮರು ಪ್ರಶ್ನಿಸಿದ ಪ್ರಸಂಗವೂ ನಡೆದಿದೆ.

ಜಾತಿಗಣತಿಗೆ ವಿದ್ಯಾರ್ಥಿಗಳ ಬಳಕೆ?

ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿಗಣತಿಗೆ ಕಾಲೇಜು ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ. ಮೈಸೂರಿನ ದೇವರಾಜ ಅರಸು ರಸ್ತೆಯ ದೇವರಾಜ ಶಾಲೆಯ ಆಸುಪಾಸಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಸಮೀಕ್ಷೆ ನಡೆಸುತ್ತಿರುವುದನ್ನ ಸ್ಥಳೀಯರು ಪ್ರಶ್ನಿಸೋ ವಿಡಿಯೋ ವೈರಲ್​ ಆಗಿದೆ. ಜನರು ಕೇಳಿದ ಪ್ರಶ್ನೆಗೆ ಉತ್ತರ ಕೊಡದ ಹಿನ್ನಲೆ ಸಮೀಕ್ಷೆಗೆ ಕಳಿಸಿದ್ದ ಜಾತಿಗಣತಿಗೆ ನಿಯೋಜಿರುವ ಸಿಬ್ಬಂದಿಗೂ ಕರೆ ಮಾಡಿ ತರಾಟೆಗೆ ಪಡೆಯಲಾಗಿದೆ. ತ್ವರಿತವಾಗಿ ಸಮೀಕ್ಷೆ ಸಲುವಾಗಿ ವಿದ್ಯಾರ್ಥಿಗಳನ್ನು ಕಳಿಸಿದ್ದೇನೆಂದು ಗಣತಿಗೆ ನಿಯೋಜಿಸಿದ ಮಹಿಳಾ ಸಿಬ್ಬಂದಿ ಸಮಜಾಯಿಷಿ‌ ನೀಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್