AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಸಮೀಕ್ಷೆ: ಮನೆಗೆ ಬಂದ ಗಣತಿದಾರರಿಗೆ ಕೇಂದ್ರ ಸಚಿವ ಸೋಮಣ್ಣ ಕ್ಲಾಸ್​

ಬೆಂಗಳೂರಿನ ವಿಜಯನಗರದಲ್ಲಿರುವ ತಮ್ಮ ಮನೆಗೆ ಜಾತಿ ಸಮೀಕ್ಷೆಗೆಂದು ಬಂದಿದ್ದ ಗಣತಿದಾರರಿಗೆ ಕೇಂದ್ರ ಸಚಿವ ಸೋಮಣ್ಣ ಕ್ಲಾಸ್​ ತೆಗೆದುಕೊಂಡ ಪ್ರಸಂಗ ನಡೆದಿದೆ. ಮನೆಗೆ 9 ಜನ ಸಿಬ್ಬಂದಿ ನೋಡಿ ಈ ವೇಳೆ ಇಷ್ಟು ಜನ ಯಾಕೆ ಬಂದಿದ್ದೀರಾ ಎಂದು ಪ್ರಶ್ನಿಸಿರುವ ಅವರು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೇ ಜಾತಿಗಣತಿ ಮಾಡಿಸುತ್ತೆ. ಹೀಗಿರುವಾಗ ಇಷ್ಟು ಪ್ರಶ್ನೆಗಳು ಬೇಕಾ? ಇದೆಲ್ಲಾ ನೀವು ಸರ್ಕಾರಕ್ಕೆ ತಿಳಿಸಬೇಕಲ್ವಾ? ಎಂದಿದ್ದಾರೆ.

ಜಾತಿ ಸಮೀಕ್ಷೆ: ಮನೆಗೆ ಬಂದ ಗಣತಿದಾರರಿಗೆ ಕೇಂದ್ರ ಸಚಿವ ಸೋಮಣ್ಣ ಕ್ಲಾಸ್​
ವಿ. ಸೋಮಣ್ಣ ಮನೆಯಲ್ಲಿ ಜಾತಿ ಗಣತಿ
ಪ್ರಸನ್ನ ಹೆಗಡೆ
|

Updated on: Oct 05, 2025 | 12:13 PM

Share

ಬೆಂಗಳೂರು, ಅಕ್ಟೋಬರ್​ 05: ರಾಜ್ಯ ಸರ್ಕಾರದಿಂದ ನಡೆಸಲಾಗ್ತಿರುವ ಸಾಮಾಜಿಕ, ಆರ್ಥಿಕ & ಶೈಕ್ಷಣಿಕ ಸಮೀಕ್ಷೆ (Caste census) ಹಿನ್ನಲೆ ಮನೆಗೆ ಗಣತಿಗೆ ಬಂದವರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಕ್ಲಾಸ್​ ತೆಗೆದುಕೊಂಡ ಪ್ರಸಂಗ ನಡೆದಿದೆ. ಮನೆಗೆ ಬಂದವರನ್ನು ನೋಡಿ ಈ ವೇಳೆ ಇಷ್ಟು ಜನ ಯಾಕೆ ಬಂದಿದ್ದೀರಾ ಎಂದು ಸೋಮಣ್ಣ ಪ್ರಶ್ನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೇ ಜಾತಿಗಣತಿ ಮಾಡಿಸುತ್ತೆ. ಹೀಗಿರುವಾಗ ಇಷ್ಟು ಪ್ರಶ್ನೆಗಳು ಬೇಕಾ? ಇದೆಲ್ಲಾ ನೀವು ಸರ್ಕಾರಕ್ಕೆ ತಿಳಿಸಬೇಕಲ್ವಾ? ಸರ್ಕಾರಿ ನೌಕರರು ಸರ್ಕಾರದ ಏಜೆಂಟ್ ಆಗಿ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿರುವ ಕೇಂದ್ರ ಸಚಿವ ಸೋಮಣ್ಣ ಮನೆಗೆ 9 ಜನ ಸಿಬ್ಬಂದಿ ತೆರಳಿದ್ದ ವೇಳೆ ಈ ಪ್ರಸಂಗ ನಡೆದಿದೆ. ಉಪಜಾತಿ ಯಾವುದು ಅಂತಾ ಗಣತಿದಾರರು ಕೇಳಿದಾಗ ಅದೆಲ್ಲಾ ಯಾಕೆ ಬೇಕು? ಸಿದ್ದರಾಮಯ್ಯ ಜಾತಿ ಅಂತಾ ಬರೆದುಕೊಳ್ಳಿ ಎಂದು ಸೋಮಣ್ಣ ತಿಳಿಸಿದ್ದಾರೆ. ಮದುವೆ ಆದಾಗ ನಿಮಗೆ ಎಷ್ಟು ವರ್ಷ ಅಂತಾ ಸಿಬ್ಬಂದಿ ಕೇಳಿದ್ದು, ಇದನ್ನ ನಮ್ಮ ಅಪ್ಪ-ಅಮ್ಮನ ಕೇಳಬೇಕು. 26 ಅಂತಾ ಬರೆದುಕೊಳ್ಳಿ ಎಂದಿದ್ದಾರೆ. ಇದು ವೋಟ್​ ಗಾಗಿ ಸಿದ್ದರಾಮಯ್ಯ ಮಾಡಿಸುತ್ತಿರುವ ಸಮೀಕ್ಷೆ ಎಂದಿರುವ ಕೇಂದ್ರ ಸಚಿವರು, ಅನೇಕ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಮತ್ತು ಡಿಕೆಶಿ ಹೆಸರನ್ನೇ ಹಾಕೊಳ್ಳಿ ಎಂದಿದ್ದಾರೆ. ಉತ್ತರ ಕೊಡಲಾಗದ ಪ್ರಶ್ನೆಗಳನ್ನೆಲ್ಲಾ ನೀವು ಕೇಳುತ್ತಿದ್ದೀರಿ. ಸಿದ್ದರಾಮಯ್ಯ, ಡಿಕೆಶಿಯವರನ್ನ ಯಾವ ಗ್ರೂಪ್ ಹಾಕ್ತೀರಿ ಅಂತಾ ಗಣತಿದಾರ ಸಿಬ್ಬಂದಿಗೆ ಸೋಮಣ್ಣ ಮರು ಪ್ರಶ್ನಿಸಿದ ಪ್ರಸಂಗವೂ ನಡೆದಿದೆ.

ಜಾತಿಗಣತಿಗೆ ವಿದ್ಯಾರ್ಥಿಗಳ ಬಳಕೆ?

ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿಗಣತಿಗೆ ಕಾಲೇಜು ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ. ಮೈಸೂರಿನ ದೇವರಾಜ ಅರಸು ರಸ್ತೆಯ ದೇವರಾಜ ಶಾಲೆಯ ಆಸುಪಾಸಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಸಮೀಕ್ಷೆ ನಡೆಸುತ್ತಿರುವುದನ್ನ ಸ್ಥಳೀಯರು ಪ್ರಶ್ನಿಸೋ ವಿಡಿಯೋ ವೈರಲ್​ ಆಗಿದೆ. ಜನರು ಕೇಳಿದ ಪ್ರಶ್ನೆಗೆ ಉತ್ತರ ಕೊಡದ ಹಿನ್ನಲೆ ಸಮೀಕ್ಷೆಗೆ ಕಳಿಸಿದ್ದ ಜಾತಿಗಣತಿಗೆ ನಿಯೋಜಿರುವ ಸಿಬ್ಬಂದಿಗೂ ಕರೆ ಮಾಡಿ ತರಾಟೆಗೆ ಪಡೆಯಲಾಗಿದೆ. ತ್ವರಿತವಾಗಿ ಸಮೀಕ್ಷೆ ಸಲುವಾಗಿ ವಿದ್ಯಾರ್ಥಿಗಳನ್ನು ಕಳಿಸಿದ್ದೇನೆಂದು ಗಣತಿಗೆ ನಿಯೋಜಿಸಿದ ಮಹಿಳಾ ಸಿಬ್ಬಂದಿ ಸಮಜಾಯಿಷಿ‌ ನೀಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ