AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ

ಮುಸ್ಲಿಂ ಸಮುದಾಯ ಈದ್ಗಾ ಮೈದಾನ ನಮ್ಮದು ಎಂದು ಹೇಳುತ್ತಿದ್ದರೆ, ಬಿಬಿಎಂಪಿ ಇದು ಆಟದ ಮೈದಾನ. ಬಿಬಿಎಂಪಿಗೆ ಸೇರಿದ್ದು ಅಂತ ಹೇಳಿದೆ. ಈ ವಿವಾದ ಹಿನ್ನೆಲೆಯಲ್ಲಿ ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ ನೀಡಲಾಗಿದೆ.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
Follow us
TV9 Web
| Updated By: sandhya thejappa

Updated on:Jul 03, 2022 | 2:21 PM

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ (Chamrajpet Idgah Maidan) ವಿವಾದ ಮುಗಿಯುವಂತೆ ಕಾಣಿಸುತ್ತಿಲ್ಲ. ಮುಸ್ಲಿಂ ಸಮುದಾಯ ಈದ್ಗಾ ಮೈದಾನ ನಮ್ಮದು ಎಂದು ಹೇಳುತ್ತಿದ್ದರೆ, ಬಿಬಿಎಂಪಿ ಇದು ಆಟದ ಮೈದಾನ, ಬಿಬಿಎಂಪಿಗೆ ಸೇರಿದ್ದು ಅಂತ ಹೇಳಿದೆ. ಈ ವಿವಾದ ಹಿನ್ನೆಲೆಯಲ್ಲಿ ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ ನೀಡಲಾಗಿದೆ. ಬಕ್ರೀದ್ ಹಬ್ಬದ ಬಳಿಕ ನಾಗರಿಕರ ಒಕ್ಕೂಟ ಬಂದ್​ಗೆ ಕರೆ ನೀಡಿದೆ.

ಜುಲೈ 12ರಂದು ಅಂಗಡಿ ಮುಂಗಟ್ಟು ಮುಚ್ಚಿ ಬಂದ್​ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಚಾಮರಾಜಪೇಟೆಯಲ್ಲಿ ಅಂದು ಶಾಂತಿಯುತ ಮೆರವಣಿಗೆ ಮಾಡಲು ನಿರ್ಧರಿಸಿದ್ದು, ಆಗಸ್ಟ್ 15ರಂದು ಮೈದಾನದಲ್ಲಿ ಧ್ವಜಾರೋಹಣ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ಆಟದ ಮೈದಾನ ಬಿಬಿಎಂಪಿ ಸ್ವತ್ತು ಎಂದು ಸಭೆಯಲ್ಲಿ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಪಾಲಿಕೆ ಸದಸ್ಯ ಬಿ.ವಿ ಗಣೇಶ್, ಕ್ಷೇತ್ರದಲ್ಲಿ 20 ಶಾಲೆಗಳಿದ್ದರೂ ಆಟದ ಮೈದಾನವಿಲ್ಲ. ಹೀಗಾಗಿ ಆಟದ ಮೈದಾನವಾಗಿಯೇ ಉಳಿಯಬೇಕು. ಬಂದ್, ರ್ಯಾಲಿ ಮಾಡುತ್ತೇವೆ. ಶಾಂತಿಯುತವಾಗಿ ಬಂದ್ ಮಾಡುತ್ತೇವೆ ಎಂದರು.

ಇದನ್ನೂ ಓದಿ
Image
Happiness: ನೀವು ಸದಾ ಸಂತೋಷವಾಗಿರಲು ಈ ಸಲಹೆಗಳನ್ನು ಪಾಲಿಸಿ
Image
ಬಾಳೆ ಎಲೆಯಲ್ಲಿ ಏಕೆ ಊಟ ಮಾಡಬೇಕು? ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ
Image
International Plastic Bag Free Day 2022: ಪ್ಲಾಸ್ಟಿಕ್ ಮುಕ್ತ ವಿಶ್ವದತ್ತ ಸದೃಢ ಹೆಜ್ಜೆಯ ಸಂಕಲ್ಪಕ್ಕೆ ಇಂದು ಶುಭದಿನ
Image
Benefits Of Barberries: ಮಧುಮೇಹ ಮತ್ತು ಕೊಲೆಸ್ಟ್ರಾಲ್‌ನಂತಹ ಕಾಯಿಲೆಗಳಿಗೆ ಸಹಕಾರಿ ಬಾರ್ಬೆರ್ರಿ ಹಣ್ಣು..!

ಇದನ್ನೂ ಓದಿ: ಮರುಮದುವೆಗೆ ಸಿದ್ಧರಾದ ಅಥರ್ ಅಮೀರ್ ಖಾನ್, ನಿಶ್ಚಿತಾರ್ಥ ಫೋಟೋ ಹಂಚಿಕೊಂಡ 2015ರ UPSC 2ನೇ ಟಾಪರ್ ಆಥರ್ ಅಮೀರ್

ಬಂದ್ ಮಾಡೇ ಮಾಡ್ತೀವಿ: ಪ್ರತಿಕ್ರಿಯೆ ನೀಡಿರುವ ನಾಗರೀಕರ ಒಕ್ಕೂಟ ವೇದಿಕೆಯ ಸಂಚಾಲಕ ರುಕ್ಮಾಂಗದ, ಶಾಸಕರು, ಅಧಿಕಾರಿಗಳು ಅಡ್ಡಿ ಪಡಿಸಿದರೂ ಬಂದ್ ನಿಲ್ಲಲ್ಲ. ಯಾರೇ ಅಡ್ಡಿ ಮಾಡಿದ್ರೂ ನಾವು ಬಂದ್ ಮಾಡೇ ಮಾಡೇ ಮಾಡ್ತೀವಿ. ನಮ್ಮ ಬಂದ್​ನನ್ನ ಯಾರೂ ನಿಲ್ಲಿಸೋಕೆ ಸಾಧ್ಯವಿಲ್ಲ. ಸಂವಿಧಾನದಲ್ಲಿ ಪ್ರತಿಭಟನೆ, ರ್ಯಾಲಿಗಳಿಗೆ ಅವಕಾಶ ಇದೆ. ಇದನ್ನ ಯಾರೂ ತಡಿಯೋಕೆ ಸಾಧ್ಯವಿಲ್ಲ. ಜುಲೈ 12ರಂದು ಚಾಮರಾಜಪೇಟೆ ಬಂದ್ ನಿಶ್ಚಯವಾಗಿದೆ. ಇಡೀ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿರುತ್ತವೆ. ಎಲ್ಲರೂ ಸ್ವಯಂ ಪ್ರೇರಿತರಾಗಿ ಬಂದ್​ಗೆ ಬೆಂಬಲಿಸಬೇಕು. ಆಟದ ಮೈದಾನಕ್ಕೆ ಜಯಚಾಮರಾಜೇಂದ್ರ ಮೈದಾನ ಅಂತ ಹೆಸರಿಡಬೇಕು. ಬಿಬಿಎಂಪಿ ದ್ವಂದ್ವ ಹೇಳಿಕೆ ನೀಡೋದನ್ನ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಗಲಾಟೆ: ಮೈದಾನ ವಿವಾದಕ್ಕೆ ಸಂಬಂಧಿಸಿ ಇಂದು ಸ್ಥಳೀಯರು ಸಭೆ ನಡೆಸಿದ್ದರು. ಈ ವೇಳೆ ಸಭೆಗೆ ಶಾಸಕ ಜಮೀರ್​ ಆಹ್ವಾನಿಸಿದ ವಿಚಾರವಾಗಿ ಗಲಾಟೆ ನಡೆಯಿತು. ಜಮೀರ್ ಸಭೆಗೆ ಬರಬಾರದು ಎಂದು ಕೆಲವರು ಆಕ್ರೋಶ ಹೊರಹಾಕಿದರು. ಜಮೀರ್​ ಬಂದರೆ ನಾವೆಲ್ಲರೂ ಎದ್ದು ಹೋಗುತ್ತೇವೆ. ಶಾಸಕರಿಂದಲೇ ವಿವಾದ ಆಗುತ್ತಿದೆ. ಅವರನ್ನೇಕೆ ಆಹ್ವಾನ ನೀಡಿದ್ದೀರಿ ಎಂದು ಗಲಾಟೆ ಮಾಡಿದ್ದಾರೆ.

Published On - 12:30 pm, Sun, 3 July 22

ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು