AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ

ಮುಸ್ಲಿಂ ಸಮುದಾಯ ಈದ್ಗಾ ಮೈದಾನ ನಮ್ಮದು ಎಂದು ಹೇಳುತ್ತಿದ್ದರೆ, ಬಿಬಿಎಂಪಿ ಇದು ಆಟದ ಮೈದಾನ. ಬಿಬಿಎಂಪಿಗೆ ಸೇರಿದ್ದು ಅಂತ ಹೇಳಿದೆ. ಈ ವಿವಾದ ಹಿನ್ನೆಲೆಯಲ್ಲಿ ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ ನೀಡಲಾಗಿದೆ.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Edited By: sandhya thejappa|

Updated on:Jul 03, 2022 | 2:21 PM

Share

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ (Chamrajpet Idgah Maidan) ವಿವಾದ ಮುಗಿಯುವಂತೆ ಕಾಣಿಸುತ್ತಿಲ್ಲ. ಮುಸ್ಲಿಂ ಸಮುದಾಯ ಈದ್ಗಾ ಮೈದಾನ ನಮ್ಮದು ಎಂದು ಹೇಳುತ್ತಿದ್ದರೆ, ಬಿಬಿಎಂಪಿ ಇದು ಆಟದ ಮೈದಾನ, ಬಿಬಿಎಂಪಿಗೆ ಸೇರಿದ್ದು ಅಂತ ಹೇಳಿದೆ. ಈ ವಿವಾದ ಹಿನ್ನೆಲೆಯಲ್ಲಿ ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ ನೀಡಲಾಗಿದೆ. ಬಕ್ರೀದ್ ಹಬ್ಬದ ಬಳಿಕ ನಾಗರಿಕರ ಒಕ್ಕೂಟ ಬಂದ್​ಗೆ ಕರೆ ನೀಡಿದೆ.

ಜುಲೈ 12ರಂದು ಅಂಗಡಿ ಮುಂಗಟ್ಟು ಮುಚ್ಚಿ ಬಂದ್​ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಚಾಮರಾಜಪೇಟೆಯಲ್ಲಿ ಅಂದು ಶಾಂತಿಯುತ ಮೆರವಣಿಗೆ ಮಾಡಲು ನಿರ್ಧರಿಸಿದ್ದು, ಆಗಸ್ಟ್ 15ರಂದು ಮೈದಾನದಲ್ಲಿ ಧ್ವಜಾರೋಹಣ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ಆಟದ ಮೈದಾನ ಬಿಬಿಎಂಪಿ ಸ್ವತ್ತು ಎಂದು ಸಭೆಯಲ್ಲಿ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಪಾಲಿಕೆ ಸದಸ್ಯ ಬಿ.ವಿ ಗಣೇಶ್, ಕ್ಷೇತ್ರದಲ್ಲಿ 20 ಶಾಲೆಗಳಿದ್ದರೂ ಆಟದ ಮೈದಾನವಿಲ್ಲ. ಹೀಗಾಗಿ ಆಟದ ಮೈದಾನವಾಗಿಯೇ ಉಳಿಯಬೇಕು. ಬಂದ್, ರ್ಯಾಲಿ ಮಾಡುತ್ತೇವೆ. ಶಾಂತಿಯುತವಾಗಿ ಬಂದ್ ಮಾಡುತ್ತೇವೆ ಎಂದರು.

ಇದನ್ನೂ ಓದಿ
Image
Happiness: ನೀವು ಸದಾ ಸಂತೋಷವಾಗಿರಲು ಈ ಸಲಹೆಗಳನ್ನು ಪಾಲಿಸಿ
Image
ಬಾಳೆ ಎಲೆಯಲ್ಲಿ ಏಕೆ ಊಟ ಮಾಡಬೇಕು? ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ
Image
International Plastic Bag Free Day 2022: ಪ್ಲಾಸ್ಟಿಕ್ ಮುಕ್ತ ವಿಶ್ವದತ್ತ ಸದೃಢ ಹೆಜ್ಜೆಯ ಸಂಕಲ್ಪಕ್ಕೆ ಇಂದು ಶುಭದಿನ
Image
Benefits Of Barberries: ಮಧುಮೇಹ ಮತ್ತು ಕೊಲೆಸ್ಟ್ರಾಲ್‌ನಂತಹ ಕಾಯಿಲೆಗಳಿಗೆ ಸಹಕಾರಿ ಬಾರ್ಬೆರ್ರಿ ಹಣ್ಣು..!

ಇದನ್ನೂ ಓದಿ: ಮರುಮದುವೆಗೆ ಸಿದ್ಧರಾದ ಅಥರ್ ಅಮೀರ್ ಖಾನ್, ನಿಶ್ಚಿತಾರ್ಥ ಫೋಟೋ ಹಂಚಿಕೊಂಡ 2015ರ UPSC 2ನೇ ಟಾಪರ್ ಆಥರ್ ಅಮೀರ್

ಬಂದ್ ಮಾಡೇ ಮಾಡ್ತೀವಿ: ಪ್ರತಿಕ್ರಿಯೆ ನೀಡಿರುವ ನಾಗರೀಕರ ಒಕ್ಕೂಟ ವೇದಿಕೆಯ ಸಂಚಾಲಕ ರುಕ್ಮಾಂಗದ, ಶಾಸಕರು, ಅಧಿಕಾರಿಗಳು ಅಡ್ಡಿ ಪಡಿಸಿದರೂ ಬಂದ್ ನಿಲ್ಲಲ್ಲ. ಯಾರೇ ಅಡ್ಡಿ ಮಾಡಿದ್ರೂ ನಾವು ಬಂದ್ ಮಾಡೇ ಮಾಡೇ ಮಾಡ್ತೀವಿ. ನಮ್ಮ ಬಂದ್​ನನ್ನ ಯಾರೂ ನಿಲ್ಲಿಸೋಕೆ ಸಾಧ್ಯವಿಲ್ಲ. ಸಂವಿಧಾನದಲ್ಲಿ ಪ್ರತಿಭಟನೆ, ರ್ಯಾಲಿಗಳಿಗೆ ಅವಕಾಶ ಇದೆ. ಇದನ್ನ ಯಾರೂ ತಡಿಯೋಕೆ ಸಾಧ್ಯವಿಲ್ಲ. ಜುಲೈ 12ರಂದು ಚಾಮರಾಜಪೇಟೆ ಬಂದ್ ನಿಶ್ಚಯವಾಗಿದೆ. ಇಡೀ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿರುತ್ತವೆ. ಎಲ್ಲರೂ ಸ್ವಯಂ ಪ್ರೇರಿತರಾಗಿ ಬಂದ್​ಗೆ ಬೆಂಬಲಿಸಬೇಕು. ಆಟದ ಮೈದಾನಕ್ಕೆ ಜಯಚಾಮರಾಜೇಂದ್ರ ಮೈದಾನ ಅಂತ ಹೆಸರಿಡಬೇಕು. ಬಿಬಿಎಂಪಿ ದ್ವಂದ್ವ ಹೇಳಿಕೆ ನೀಡೋದನ್ನ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಗಲಾಟೆ: ಮೈದಾನ ವಿವಾದಕ್ಕೆ ಸಂಬಂಧಿಸಿ ಇಂದು ಸ್ಥಳೀಯರು ಸಭೆ ನಡೆಸಿದ್ದರು. ಈ ವೇಳೆ ಸಭೆಗೆ ಶಾಸಕ ಜಮೀರ್​ ಆಹ್ವಾನಿಸಿದ ವಿಚಾರವಾಗಿ ಗಲಾಟೆ ನಡೆಯಿತು. ಜಮೀರ್ ಸಭೆಗೆ ಬರಬಾರದು ಎಂದು ಕೆಲವರು ಆಕ್ರೋಶ ಹೊರಹಾಕಿದರು. ಜಮೀರ್​ ಬಂದರೆ ನಾವೆಲ್ಲರೂ ಎದ್ದು ಹೋಗುತ್ತೇವೆ. ಶಾಸಕರಿಂದಲೇ ವಿವಾದ ಆಗುತ್ತಿದೆ. ಅವರನ್ನೇಕೆ ಆಹ್ವಾನ ನೀಡಿದ್ದೀರಿ ಎಂದು ಗಲಾಟೆ ಮಾಡಿದ್ದಾರೆ.

Published On - 12:30 pm, Sun, 3 July 22

Follow Us
TV9 Web
TV9 Web

TV9 Kannada

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ