AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ

ಮುಸ್ಲಿಂ ಸಮುದಾಯ ಈದ್ಗಾ ಮೈದಾನ ನಮ್ಮದು ಎಂದು ಹೇಳುತ್ತಿದ್ದರೆ, ಬಿಬಿಎಂಪಿ ಇದು ಆಟದ ಮೈದಾನ. ಬಿಬಿಎಂಪಿಗೆ ಸೇರಿದ್ದು ಅಂತ ಹೇಳಿದೆ. ಈ ವಿವಾದ ಹಿನ್ನೆಲೆಯಲ್ಲಿ ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ ನೀಡಲಾಗಿದೆ.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 03, 2022 | 2:21 PM

Share

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ (Chamrajpet Idgah Maidan) ವಿವಾದ ಮುಗಿಯುವಂತೆ ಕಾಣಿಸುತ್ತಿಲ್ಲ. ಮುಸ್ಲಿಂ ಸಮುದಾಯ ಈದ್ಗಾ ಮೈದಾನ ನಮ್ಮದು ಎಂದು ಹೇಳುತ್ತಿದ್ದರೆ, ಬಿಬಿಎಂಪಿ ಇದು ಆಟದ ಮೈದಾನ, ಬಿಬಿಎಂಪಿಗೆ ಸೇರಿದ್ದು ಅಂತ ಹೇಳಿದೆ. ಈ ವಿವಾದ ಹಿನ್ನೆಲೆಯಲ್ಲಿ ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ ನೀಡಲಾಗಿದೆ. ಬಕ್ರೀದ್ ಹಬ್ಬದ ಬಳಿಕ ನಾಗರಿಕರ ಒಕ್ಕೂಟ ಬಂದ್​ಗೆ ಕರೆ ನೀಡಿದೆ.

ಜುಲೈ 12ರಂದು ಅಂಗಡಿ ಮುಂಗಟ್ಟು ಮುಚ್ಚಿ ಬಂದ್​ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಚಾಮರಾಜಪೇಟೆಯಲ್ಲಿ ಅಂದು ಶಾಂತಿಯುತ ಮೆರವಣಿಗೆ ಮಾಡಲು ನಿರ್ಧರಿಸಿದ್ದು, ಆಗಸ್ಟ್ 15ರಂದು ಮೈದಾನದಲ್ಲಿ ಧ್ವಜಾರೋಹಣ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ಆಟದ ಮೈದಾನ ಬಿಬಿಎಂಪಿ ಸ್ವತ್ತು ಎಂದು ಸಭೆಯಲ್ಲಿ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಪಾಲಿಕೆ ಸದಸ್ಯ ಬಿ.ವಿ ಗಣೇಶ್, ಕ್ಷೇತ್ರದಲ್ಲಿ 20 ಶಾಲೆಗಳಿದ್ದರೂ ಆಟದ ಮೈದಾನವಿಲ್ಲ. ಹೀಗಾಗಿ ಆಟದ ಮೈದಾನವಾಗಿಯೇ ಉಳಿಯಬೇಕು. ಬಂದ್, ರ್ಯಾಲಿ ಮಾಡುತ್ತೇವೆ. ಶಾಂತಿಯುತವಾಗಿ ಬಂದ್ ಮಾಡುತ್ತೇವೆ ಎಂದರು.

ಇದನ್ನೂ ಓದಿ
Image
Happiness: ನೀವು ಸದಾ ಸಂತೋಷವಾಗಿರಲು ಈ ಸಲಹೆಗಳನ್ನು ಪಾಲಿಸಿ
Image
ಬಾಳೆ ಎಲೆಯಲ್ಲಿ ಏಕೆ ಊಟ ಮಾಡಬೇಕು? ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ
Image
International Plastic Bag Free Day 2022: ಪ್ಲಾಸ್ಟಿಕ್ ಮುಕ್ತ ವಿಶ್ವದತ್ತ ಸದೃಢ ಹೆಜ್ಜೆಯ ಸಂಕಲ್ಪಕ್ಕೆ ಇಂದು ಶುಭದಿನ
Image
Benefits Of Barberries: ಮಧುಮೇಹ ಮತ್ತು ಕೊಲೆಸ್ಟ್ರಾಲ್‌ನಂತಹ ಕಾಯಿಲೆಗಳಿಗೆ ಸಹಕಾರಿ ಬಾರ್ಬೆರ್ರಿ ಹಣ್ಣು..!

ಇದನ್ನೂ ಓದಿ: ಮರುಮದುವೆಗೆ ಸಿದ್ಧರಾದ ಅಥರ್ ಅಮೀರ್ ಖಾನ್, ನಿಶ್ಚಿತಾರ್ಥ ಫೋಟೋ ಹಂಚಿಕೊಂಡ 2015ರ UPSC 2ನೇ ಟಾಪರ್ ಆಥರ್ ಅಮೀರ್

ಬಂದ್ ಮಾಡೇ ಮಾಡ್ತೀವಿ: ಪ್ರತಿಕ್ರಿಯೆ ನೀಡಿರುವ ನಾಗರೀಕರ ಒಕ್ಕೂಟ ವೇದಿಕೆಯ ಸಂಚಾಲಕ ರುಕ್ಮಾಂಗದ, ಶಾಸಕರು, ಅಧಿಕಾರಿಗಳು ಅಡ್ಡಿ ಪಡಿಸಿದರೂ ಬಂದ್ ನಿಲ್ಲಲ್ಲ. ಯಾರೇ ಅಡ್ಡಿ ಮಾಡಿದ್ರೂ ನಾವು ಬಂದ್ ಮಾಡೇ ಮಾಡೇ ಮಾಡ್ತೀವಿ. ನಮ್ಮ ಬಂದ್​ನನ್ನ ಯಾರೂ ನಿಲ್ಲಿಸೋಕೆ ಸಾಧ್ಯವಿಲ್ಲ. ಸಂವಿಧಾನದಲ್ಲಿ ಪ್ರತಿಭಟನೆ, ರ್ಯಾಲಿಗಳಿಗೆ ಅವಕಾಶ ಇದೆ. ಇದನ್ನ ಯಾರೂ ತಡಿಯೋಕೆ ಸಾಧ್ಯವಿಲ್ಲ. ಜುಲೈ 12ರಂದು ಚಾಮರಾಜಪೇಟೆ ಬಂದ್ ನಿಶ್ಚಯವಾಗಿದೆ. ಇಡೀ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿರುತ್ತವೆ. ಎಲ್ಲರೂ ಸ್ವಯಂ ಪ್ರೇರಿತರಾಗಿ ಬಂದ್​ಗೆ ಬೆಂಬಲಿಸಬೇಕು. ಆಟದ ಮೈದಾನಕ್ಕೆ ಜಯಚಾಮರಾಜೇಂದ್ರ ಮೈದಾನ ಅಂತ ಹೆಸರಿಡಬೇಕು. ಬಿಬಿಎಂಪಿ ದ್ವಂದ್ವ ಹೇಳಿಕೆ ನೀಡೋದನ್ನ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಗಲಾಟೆ: ಮೈದಾನ ವಿವಾದಕ್ಕೆ ಸಂಬಂಧಿಸಿ ಇಂದು ಸ್ಥಳೀಯರು ಸಭೆ ನಡೆಸಿದ್ದರು. ಈ ವೇಳೆ ಸಭೆಗೆ ಶಾಸಕ ಜಮೀರ್​ ಆಹ್ವಾನಿಸಿದ ವಿಚಾರವಾಗಿ ಗಲಾಟೆ ನಡೆಯಿತು. ಜಮೀರ್ ಸಭೆಗೆ ಬರಬಾರದು ಎಂದು ಕೆಲವರು ಆಕ್ರೋಶ ಹೊರಹಾಕಿದರು. ಜಮೀರ್​ ಬಂದರೆ ನಾವೆಲ್ಲರೂ ಎದ್ದು ಹೋಗುತ್ತೇವೆ. ಶಾಸಕರಿಂದಲೇ ವಿವಾದ ಆಗುತ್ತಿದೆ. ಅವರನ್ನೇಕೆ ಆಹ್ವಾನ ನೀಡಿದ್ದೀರಿ ಎಂದು ಗಲಾಟೆ ಮಾಡಿದ್ದಾರೆ.

Published On - 12:30 pm, Sun, 3 July 22

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!