AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ನಾಗರಿಕರ ಒಕ್ಕೂಟದಿಂದ ಬೃಹತ್ ಬೈಕ್ ರ್ಯಾಲಿಗೆ ನಿರ್ಧಾರ

ಇಂದು ನಾಗರಿಕರ ಒಕ್ಕೂಟ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ರನ್ನ ಭೇಟಿ ಮಾಡಲಿದೆ. ಚಾಮರಾಜಪೇಟೆಯಲ್ಲಿರುವ ಮೈದಾನ ಬಿಬಿಎಂಪಿಯ ಸ್ವತ್ತು.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ನಾಗರಿಕರ ಒಕ್ಕೂಟದಿಂದ ಬೃಹತ್ ಬೈಕ್ ರ್ಯಾಲಿಗೆ ನಿರ್ಧಾರ
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 14, 2022 | 8:44 AM

Share

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ (Idgah Maidan) ವಿವಾದ ಮುಗಿಯುವಂತೆ ಕಾಣಿಸುತ್ತಿಲ್ಲ. ಬಂದ್ ಬಳಿಕ ನಾಗರಿಕರ ಒಕ್ಕೂಟ ಹೋರಾಟವನ್ನು ತೀವ್ರಗೊಳಿಸಲು ಸಿದ್ಧತೆ ನಡೆಸುತ್ತಿದ್ದು, ಬೃಹತ್ ಬೈಕ್ ರ್ಯಾಲಿ (Bike Rally) ನಡೆಸಲು ನಿರ್ಧಾರ ಮಾಡಿದೆ. ಮೈದಾನ ಆಟದ ಮೈದಾನವಾಗಿ ಉಳಿಯಬೇಕೆಂದು ನಾಗರಿಕರ ಒಕ್ಕೂಟ ನಾಳೆ (ಜುಲೈ 15) ಚಾಮರಾಜಪೇಟೆಯ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಲು ಮುಂದಾಗಿದೆ. ರ್ಯಾಲಿಯಲ್ಲಿ ಹಿಂದೂಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಭಾಗಿಯಾಗಲಿವೆ. ರ್ಯಾಲಿ ಬಳಿಕ ಬಿಬಿಎಂಪಿ ಆಯುಕ್ತರಿಗೆ ಘೇರಾವ್ ಹಾಕಲು ಚಿಂತನೆಯನ್ನೂ ನಡೆಸಿದ್ದಾರೆ.

ಇಂದು ನಾಗರಿಕರ ಒಕ್ಕೂಟ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ರನ್ನ ಭೇಟಿ ಮಾಡಲಿದೆ. ಚಾಮರಾಜಪೇಟೆಯಲ್ಲಿರುವ ಮೈದಾನ ಬಿಬಿಎಂಪಿಯ ಸ್ವತ್ತು. ಹೀಗಾಗಿ ಆಟದ ಮೈದಾನವೆಂದು ಪಾಲಿಕೆ ಘೋಷಿಸಬೇಕೆಂದು ಆಗ್ರಹಿಸಲಿದ್ದಾರೆ.

ಚಾಮರಾಜಪೇಟೆ ಮೈದಾನ ವಿವಾದದ ಹಿನ್ನೆಲೆ ಏನು?: ಆಟದ ಮೈದಾನವನ್ನು ಈದ್ಗಾ ಮೈದಾನ ಎಂದು ಕರೆಯಲಾಗುತ್ತದೆ. 1952ರಿಂದಲೇ ಈ ಮೈದಾನದ ಬಗ್ಗೆ ವಿವಾದ ಪ್ರಾರಂಭವಾಗಿತ್ತು. ಈ ಮೈದಾನದಲ್ಲಿ ಹಿಂದೂಗಳ ಧಾರ್ಮಿಕ ಆಚರಣೆಗಳಿಗೆ ಅವಕಾಶ ಕೊಡದಿದ್ದರೆ ಈದ್ಗಾ ಮೈದಾನವನ್ನು ನೆಲಸಮ ಮಾಡುತ್ತೇವೆ ಎಂದು ವಿಶ್ವ ಸನಾತನ ಪರಿಷತ್ ಸಂಘಟನೆಯ ಅಧ್ಯಕ್ಷ ಎಸ್. ಭಾಸ್ಕರನ್ ಹೇಳಿದ್ದರು. ಕೋರ್ಟ್ ಆದೇಶವಿದ್ದರೂ ಧಾರ್ಮಿಕ ಆಚರಣೆಗೆ ಪೊಲೀಸರು ಅವಕಾಶ ಕೊಡುತ್ತಿಲ್ಲ, ಮುಸ್ಲಿಂ ಸಮುದಾಯದವರು ಹಿಂದೂಗಳ ಧಾರ್ಮಿಕ ಆಚರಣೆಗೆ ವಿರೋಧಿಸುತ್ತಿಲ್ಲ. ಆದರೆ ಶಾಸಕ ಜಮೀರ್ ಅಹಮದ್ ಖಾನ್ ಪೊಲೀಸರ ಮೂಲಕ ಅಡ್ಡಿ ಪಡಿಸುತ್ತಿದ್ದಾರೆಂದು ಹಿಂದೂಪರ ಸಂಘಟನೆಗಳ ಆರೋಪವಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ; ಹವಾಮಾನ ಇಲಾಖೆ

ಚಾಮರಾಜಪೇಟೆ ಮೈದಾನ ಬಿಬಿಎಂಪಿಗೆ ಸೇರಿದ ಆಸ್ತಿಯಾಗಿದೆ ಎಂದು ಹೇಳಿದ್ದ ಬಿಬಿಎಂಪಿ, ಆಟದ ಮೈದಾನ, ಪಿಐಡಿ ನಂ. 46-8-2 ಬಿಬಿಎಂಪಿ ಸ್ವತ್ತುಗಳಾಗಿವೆ, ಇದರ ಜೊತೆಗೆ ಈದ್ಗಾ ಗೋಡೆ ಬಿಬಿಎಂಪಿ ಸ್ವತ್ತು ಎಂದು ದಾಖಲೆಯಲ್ಲಿದೆ. 2 ಎಕರೆಯಲ್ಲಿ ಈ ಮೈದಾನದವಿದ್ದು, 941 ಚದರ ಅಡಿ ಈದ್ಗಾ ಗೋಡೆ ಇದೆ, 941 ಅಡಿ ಈದ್ಗಾ ಗೋಡೆ ಬಿಟ್ಟು, ಉಳಿದದ್ದು ಬಿಬಿಎಂಪಿ ಸ್ವತ್ತಾಗಿದೆ ಎಂದು ಆರಂಭದಲ್ಲಿ ಹೇಳಿತ್ತು. ನಂತರದಲ್ಲಿ ವಕ್ಫ್ ಬೋರ್ಡ್ ಆಸ್ತಿ ಹಕ್ಕು ಮತ್ತು 1965 ರ ಗೆಜೆಟ್ ಅಧಿಸೂಚನೆ ಸೇರಿದಂತೆ ದಾಖಲೆಗಳನ್ನು ಸಲ್ಲಿಸಿದೆ ಎಂದು ಬಿಬಿಎಂಪಿ ಹೇಳಿತ್ತು.

ಇದನ್ನೂ ಓದಿ: ಜು.16ರಂದು 296 ಕಿಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

Published On - 8:42 am, Thu, 14 July 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ