AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5,8,9ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ: ಶಿಕ್ಷಣ ಇಲಾಖೆ ನಡೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ವಿರೋಧ

ಶಿಕ್ಷಣ ಇಲಾಖೆ 5, 8,9, ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದೆ. ಯಾವುದೇ ವಿದ್ಯಾರ್ಥಿಯನ್ನ ಅನುತೀರ್ಣ ಮಾಡದೆ ಮೌಲ್ಯಾಂಕನ ಮಾದರಿಯ ಪಬ್ಲಿಕ್ ಮಾದರಿಯಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದೆ. ಆದರೆ ಶಿಕ್ಷಣ ಇಲಾಖೆ ನಡೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ವಿರೋಧ ಶುರು ಮಾಡಿಕೊಂಡು ಹೊಸ ವರಸೆ ಶುರು ಮಾಡಿವೆ.

5,8,9ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ: ಶಿಕ್ಷಣ ಇಲಾಖೆ ನಡೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ವಿರೋಧ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Jan 03, 2024 | 7:10 AM

Share

ಬೆಂಗಳೂರು, ಜ.03: ಕಳೆದೊಂದು ವರ್ಷದಿಂದ ಶಿಕ್ಷಣ ಇಲಾಖೆ (Karnataka Education Department)  ಮಕ್ಕಳ ಭವಿಷ್ಯಕ್ಕಾಗಿ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಐದು ಎಂಟು ಹಾಗು 9ನೇ ತರಗತಿಗೆ ಪಬ್ಲಿಕ್ ಮಾದರಿಯ ಮೌಲ್ಯಾಂಕನ ಎಕ್ಸಾಂ ನಡೆಸಲು ಮುಂದಾಗಿದೆ. ಆದರೆ ಈ ಪರೀಕ್ಷೆ ಈಗ ಪ್ರತಿಷ್ಠೆಯ ಕಣವಾಗಿದ್ದು ಶಿಕ್ಷಣ ಇಲಾಖೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಹಠಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ಪರದಾಡುವ ಸ್ಥಿತಿ ಎದುರಾಗಿದೆ. ಇನ್ನೂ ಶಿಕ್ಷಣ ಇಲಾಖೆಯ ಮೌಲ್ಯಾಂಕನ ಪರೀಕ್ಷೆಗಳ ಹಠದಲ್ಲಿ ಖಾಸಗಿ ಶಾಲೆಗಳು ಹೊಸ ಲಾಭಿ ಶುರು ಮಾಡಿಕೊಂಡಿರುವ ಆರೋಪ ಕೇಳಿ ಬರ್ತಿದೆ.

ಶಿಕ್ಷಣ ಇಲಾಖೆ ಕಳೆದ ವರ್ಷ ಹಠಕ್ಕೆ ಬಿದ್ದಂತೆ 5 ಹಾಗೂ 8 ನೇ ತರಗತಿಗೆ ಬೋರ್ಡ್ ಮಾದರಿಯ ಎಕ್ಸಂ ನಡೆಸಿತ್ತು. ಈಗ 9 ಹಾಗೂ 11 ಕ್ಕೂ ಪರಿಕ್ಷೆ ನಡೆಸಲು ಮುಂದಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಖಾಸಗಿ ಶಾಲೆಗಳ ಒಕ್ಕೂಟ ಹೊಸ ವರಸೆ ಶುರುಮಾಡಿದೆ. ಮತ್ತೆ ಶಾಲಾ ಮಟ್ಟದಲ್ಲಿ ಪಾಸ್ ಫೇಲ್ ಫೈಟ್ ಶುರುವಾಗಿದೆ. ಶಿಕ್ಷಣ ಇಲಾಖೆ 5, 8,9, ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದೆ. ಯಾವುದೇ ವಿದ್ಯಾರ್ಥಿಯನ್ನ ಅನುತೀರ್ಣ ಮಾಡದೆ ಮೌಲ್ಯಾಂಕನ ಮಾದರಿಯ ಪಬ್ಲಿಕ್ ಮಾದರಿಯಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದೆ. ಈಗಾಗಲೇ ಮೌಲ್ಯಂಕನ ಪರೀಕ್ಷೆಗೆ ಶಾಲಾ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಕೂಡಾ ಪ್ರಕಟಿಸಿದೆ. ಜೊತೆಗೆ ಈ ಪರೀಕ್ಷೆಯಲ್ಲಿ ಫೇಲ್ ಮಾಡದೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದೆ. ಆದರೆ ಶಿಕ್ಷಣ ಇಲಾಖೆ ನಡೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ವಿರೋಧ ಶುರು ಮಾಡಿಕೊಂಡು ಹೊಸ ವರಸೆ ಶುರು ಮಾಡಿವೆ.

ಇದನ್ನೂ ಓದಿ: CS Date Sheet2024: ಜೂನ್ 2024ರ CS ಎಕ್ಸಿಕ್ಯೂಟಿವ್, ವೃತ್ತಿಪರ ಪರೀಕ್ಷೆಗಳ ಡೇಟ್ ಶೀಟ್ ಪ್ರಕಟ

ಖಾಸಗಿ ಶಾಲೆಗಳಿಂದ ಶುಲ್ಕ ಲಾಭಿ ಅಂತಾ ಪೋಷಕರ ಕಿಡಿ

ಇನ್ನು ಶಾಲಾ ಶಿಕ್ಷಣ ಇಲಾಖೆಯ ಮೌಲ್ಯಾಂಕನ ಪರೀಕ್ಷೆಗೆ ಮೊದಲಿನಿಂದಲೂ ವಿರೋಧ ಹೊರ ಹಾಕಿರುವ ಪೋಷಕರ ಸಮನ್ವಯ ಸಮಿತಿ ಮಕ್ಕಳಿಗೆ ಈ ಬೋರ್ಡ್ ಮಾದರಿಯ ಪರೀಕ್ಷೆಗಳು ಬೇಡ ಅಂತಿದ್ದಾರೆ. ಈಗಾಗಲೇ ಮಕ್ಕಳ ಮೌಲ್ಯ ಅಳೆಯಲು ಎಸ್ ಎ ಮಾದರಿಯ ಪರೀಕ್ಷೆಗಳು ಶಾಲಾ ಮಟ್ಟದಲ್ಲಿ ಇದೆ. ಹೀಗಾಗಿ ಈ ಬೋರ್ಡ್ ಮಾದರಿಯ ಮೌಲ್ಯಾಂಕನ ಎಕ್ಸಂ ಬೇಡ ಎಂದಿದ್ದಾರೆ. ಆದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಪಾಸ್ ಫೇಲ್ ಇಲ್ಲದೆ ಹೇಗೆ ಪರೀಕ್ಷೆ ನಡೆಸುವುದು. ಕನಿಷ್ಠ ಕಲಿಕೆಯಾಗದೆ ವಿದ್ಯಾರ್ಥಿಯ ಅನುತೀರ್ಣ ಮಾಡುವ ಅವಕಾಶ ಕಲ್ಪಿಸುವ ಕಾಯ್ದೆಯನ್ನ ಅನುಷ್ಠಾನ ಮಾಡದೆ ಕೇವಲ ಮೌಲ್ಯಂಕನ ಪರೀಕ್ಷೆ ನಡೆಸುವುದು ಎಷ್ಟು ಸರಿ. ತರಗತಿಯಲ್ಲಿ ಕನಿಕಾ ನ್ಯೂನ್ಯೆತೆ ಮಾನಸಿಕ ಸಮಸ್ಯೆ ಇರುವ ಮಕ್ಕಳು ಆಟಿಸಂ ಚೈಲ್ಡ್ ಇರ್ತಾರೆ ಕೆಲವು ಮಕ್ಕಳಿಗೆ ಕನಿಷ್ಠ ಕಲಿಕೆಯಾಗುತ್ತೆ ಇತಂಹ ಮಕ್ಕಳನ್ನ ಪರೀಕ್ಷಾ ಅವಧಿ ಹಾಗೂ ಪುನಾರಾವರ್ತನೆಗೆ ಅವಕಾಶ ಇಲ್ಲದೆ ಬರಿ ಇತಂಹ ಪರೀಕ್ಷೆ ನಡೆಸುವುದು ಎಷ್ಟು ಸರಿ ಅಂತಾ ವಿರೋಧ ಶುರು ಮಾಡಿಕೊಂಡಿವೆ. ಖಾಸಗಿ ಶಾಲೆಗಳ ಜೊತೆ ಚರ್ಚೆ ಮಾಡಿಕೊಂಡು ಮೌಲ್ಯಂಕನ ಪರೀಕ್ಷೆಗಳ ನಡೆಸುವುದು ಸೂಕ್ತ ಅಂತಿವೆ.

ಒಟ್ನಲ್ಲಿ ಪಬ್ಲಿಕ್ ಮಾದರಿಯಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವ ಶಿಕ್ಷಣ ಇಲಾಖೆಯ ನಡೆ ಮಕ್ಕಳ ಪಾಲಿಗೆ ಅದೆಷ್ಟು ಉಪಯುಕ್ತವೋ ಗೊತ್ತಿಲ್ಲ. ಆದರೆ ಇದು ಮಕ್ಕಳ ಭವಿಷ್ಯಕ್ಕೆ ಮಾರಕವಾಗದಂತೆ ಶಿಕ್ಷಣ ಇಲಾಖೆ ನಿಗಾ ವಹಿಸಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು