AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apollo Hospital Bengaluru: ಅಪೊಲೊ ಆಸ್ಪತ್ರೆಯಲ್ಲಿ ವಿಶಿಷ್ಟ ಶ್ವಾಸಕೋಶದ ಕಸಿ ಯಶಸ್ಸು

ಬೆಂಗಳೂರಿನ ಅಪೊಲೊ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರ ವಿಭಾಗವು ದೀರ್ಘಕಾಲದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ 57 ವರ್ಷದ ರೋಗಿಯೊಬ್ಬರಿಗೆ ವಿಶಿಷ್ಟವಾದ ಶ್ವಾಸಕೋಶದ ಕಸಿಯನ್ನು ಯಶಸ್ವಿಯಾಗಿ ನಡೆಸಿದೆ.

Apollo Hospital Bengaluru: ಅಪೊಲೊ ಆಸ್ಪತ್ರೆಯಲ್ಲಿ ವಿಶಿಷ್ಟ ಶ್ವಾಸಕೋಶದ ಕಸಿ ಯಶಸ್ಸು
ಅಪೊಲೊ ಆಸ್ಪತ್ರೆ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 07, 2023 | 12:41 PM

ಬೆಂಗಳೂರು: ಬೆಂಗಳೂರಿನ ಅಪೊಲೊ ಆಸ್ಪತ್ರೆ (Apollo Hospital)ಶ್ವಾಸಕೋಶಶಾಸ್ತ್ರ ವಿಭಾಗವು ದೀರ್ಘಕಾಲದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ 57 ವರ್ಷದ ರೋಗಿಯೊಬ್ಬರಿಗೆ ವಿಶಿಷ್ಟವಾದ ಶ್ವಾಸಕೋಶದ ಕಸಿಯನ್ನು ಯಶಸ್ವಿಯಾಗಿ ನಡೆಸಿದೆ. ಈ ಚಿಕಿತ್ಸೆಯಲ್ಲಿ ಕೌಶಲ್ಯ, ನಿಖರತೆ, ತಂಡದ ಕೆಲಸ ಮತ್ತು ವೈದ್ಯಕೀಯ ವೃತ್ತಿಪರತೆಯಿಂದ ಸಾಧ್ಯವಾಗಿದೆ ಎಂದು ಹೇಳಲಾಗಿದೆ.

57 ವಯಸ್ಸಿನ ಬೆಂಗಳೂರಿನ ಮೀನಾಕ್ಷಿ (ಹೆಸರು ಬದಲಾಯಿಸಲಾಗಿದೆ) ಅವರು ಉಸಿರಾಟದ ತೊಂದರೆಯಿಂದಾಗಿ ಎರಡು ವರ್ಷಗಳ ಹಿಂದೆ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಶ್ವಾಸಕೋಶದ ಗಟ್ಟಿಯಾಗುವಿಕೆಯಿಂದ ಇಂಟರ್‌ಸ್ಟಿಶಿಯಲ್ ಶ್ವಾಸಕೋಶದ ಕಾಯಿಲೆ (ಐಎಲ್‌ಡಿ) ಇದೆ ಎಂದು ಗುರುತಿಸಲಾಯಿತು. ಇದರಿಂದ ಅವರ ಸ್ಥಿತಿ ಗಂಭೀರವಾಗಿತ್ತು. ಮನೆಯಲ್ಲಿ ನಿರಂತರ ಆಮ್ಲಜನಕದ ಅವಶ್ಯಕತೆ ಕೂಡ ಇತ್ತು, ಪ್ರತಿದಿನದ ಕೆಲಸವನ್ನು ಕೂಡ ಮಾಡಲು ಕಷ್ಟವಾಗಿತ್ತು.

ಇದನ್ನೂ ಓದಿ : Kidney Transplant: ಯಾವ ಹಂತದಲ್ಲಿರುವಾಗ ಕಿಡ್ನಿ ಕಸಿ ಅಗತ್ಯ, ಮುನ್ನೆಚ್ಚರಿಕೆಗಳೇನು? ತಿಳಿಯಿರಿ

ಅವರ ಸ್ಥಿತಿಯ ತೀವ್ರತೆಯನ್ನು ಗುರುತಿಸಿ, ಅಪೋಲೋ ಆಸ್ಪತ್ರೆಯ ವೈದ್ಯಕೀಯ ತಂಡವು ಶ್ವಾಸಕೋಶದ ಕಸಿ ವಿಷಯದ ಕುರಿತು ವಿವರಿಸಿದರು, ಇದರ ಜತೆಗೆ ಶ್ವಾಸಕೋಶ ದಾನಿಗಳು ಕೂಡ ತುಂಬಾ ಸಹಾಯ ಮಾಡಿದ್ದರು ಎಂದು ಹೇಳಲಾಗಿತ್ತು. ಕಸಿ ಮಾಡುವ ಮೌಲ್ಯಮಾಪನ ಮತ್ತು ಮೂವತ್ತಾರು ಗಂಟೆಗಳ ಚಿಕಿತ್ಸೆಯ ನಂತರ ಶ್ವಾಸಕೋಶದ ಕಸಿಯು ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.

ಶ್ವಾಸಕೋಶದ ಕಸಿಗಾಗಿ ಪಲ್ಮನಾಲಜಿ ತಂಡದ ನೇತೃತ್ವ ವಹಿಸಿದ್ದ ಅಪೊಲೊ ಆಸ್ಪತ್ರೆಗಳ ಪಲ್ಮನಾಲಜಿ ಮತ್ತು ಇಂಟರ್ವೆನ್ಷನಲ್ ಹಿರಿಯ ಸಲಹೆಗಾರ ಡಾ ರವೀಂದ್ರ ಮೆಹ್ತಾ ಅವರು ಹೇಳಿರುವಂತೆ ರೋಗಿಯು ಪೂರ್ವ-ವಿಧಾನ ಪರೀಕ್ಷೆಗಳಿಗೆ ಒಳಗಾಗಿದ್ದರು, ಇವರಿಗೆ ದಾನಿಗಳ ಶ್ವಾಸಕೋಶ ಹೊಂದಾಣಿಕೆ ಆಗುತ್ತದೆ ಎಂಬುದನ್ನು ಮೊದಲು ಖಚಿತಪಡಿಸಿಕೊಳ್ಳಬೇಕಿತ್ತು. ನಂತರ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಶ್ವಾಸಕೋಶಶಾಸ್ತ್ರಜ್ಞರು, ಶಸ್ತ್ರಚಿಕಿತ್ಸಕರು, ಅರಿವಳಿಕೆ ತಜ್ಞರು ಮತ್ತು ಕ್ರಿಟಿಕಲ್ ಕೇರ್ ವೈದ್ಯರ ಸಮರ್ಪಿತ ತಂಡವು ಒಟ್ಟುಗೂಡಿತು ಮತ್ತು ಶಸ್ತ್ರಚಿಕಿತ್ಸಕರು ಸಂಕೀರ್ಣ ಕಾರ್ಯವಿಧಾನವನ್ನು ನಡೆಸಿದ್ದಾರೆ. ಇದೀಗ ಮೀನಾಕ್ಷಿ ಅವರು ಉತ್ತಮ ಜೀವನ ನಡೆಸಬಹುದು ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Wed, 7 June 23

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ