AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ಮಾಜಿ ಸಚಿವೆ ಲಲಿತಾ ನಾಯಕ್‌ಗೆ ಕೊಲೆ ಬೆದರಿಕೆ ಪತ್ರ

ಮಾಜಿ ಸಚಿವೆ ಬಿ.ಟಿ ಲಲತಾನಾಯಕ್, ಮಾಜಿ ಮುಖ್ಯ ಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಕೆಲವು ಸಾಹಿತಿಗಳ ಹೆಸರು ಉಲ್ಲೇಖಿಸಿ ಕೊಲೆ ಬೆದರಿಕೆ ಪತ್ರವೊಂದನ್ನು ಕಿಡಿಗೇಡಿಗಳು ಬರೆದಿದ್ದಾರೆ.

ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ಮಾಜಿ ಸಚಿವೆ ಲಲಿತಾ ನಾಯಕ್‌ಗೆ ಕೊಲೆ ಬೆದರಿಕೆ ಪತ್ರ
ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ
TV9 Web
| Edited By: |

Updated on:Jul 02, 2022 | 10:14 PM

Share

ಬೆಂಗಳೂರು: ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್, (BT Lalitha Nayak) ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ (HD Kumarswamy) ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaih) ಸೇರಿ ಕೆಲವು ಸಾಹಿತಿಗಳ ಹೆಸರು ಉಲ್ಲೇಖಿಸಿ ಕೊಲೆ ಬೆದರಿಕೆ ಪತ್ರವೊಂದನ್ನು (Letter) ಕಿಡಿಗೇಡಿಗಳು ಬರೆದಿದ್ದಾರೆ. ಕಿಡಿಗೇಡಿಗಳು ಡಾ.ಬಿ.ಟಿ.ಲಲತಾನಾಯಕ್ ರವರ ಸಂಜಯನಗರ ನಿವಾಸದ ವಿಳಾಸಕ್ಕೆ ಕೊಲೆ ಬೆದರಿಕೆ ಪತ್ರ ಬರೆದಿದ್ದಾರೆ. ಬೆದರಿಕೆ ಪತ್ರ ಹಿನ್ನೆಲೆ ಡಾ.ಬಿ.ಟಿ.ಲಲಿತನಾಯಕ್ ನಿವಾಸಕ್ಕೆ ಸಂಜಯ ನಗರ ಪೊಲೀಸರ ಭೇಟಿ ನೀಡಿ, ಪತ್ರದ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಇದನ್ನು ಓದಿ: ರೆಬೆಲ್ ಸ್ಟಾರ್ ಅಂಬರೀಶ್ ಕನಸನ್ನು ಸೂಪರ್ ಸ್ಟಾರ್ ಸೋಮಣ್ಣ ನೆರೆವೇರಿಸಿದ್ದಾರೆ ಎಂದು ಹಾಡಿಹೊಗಳಿದ ಸುಮಲತಾ

ಪತ್ರದಲ್ಲಿ ಪಠ್ಯದಲ್ಲಿ ದೇಶ ಪ್ರೇಮ, ದೇಶ ಭಕ್ತಿ, ದೇಶ ರಕ್ಷಣೆ ಪಾಠ ಸೇರಿಸಿದ್ದಕ್ಕೆ ನಿಮಗೆಲ್ಲ ಭಯವಾಗಿದೆ. ನೀವೂ ನಿಜವಾದ ದೇಶ ದ್ರೋಹಿಗಳು. ನಮ್ಮ ದೇಶವನ್ನು ನಾಶ ಮಾಡಲು ಹೊಂಚು ಹಾಕುತ್ತಿದ್ದೀರಾ..? ಭಯೋತ್ಪಾದಕರು, ನಕ್ಸಲೇಟ್ ಗಳು, ಮಾವೋವಾದಿಗಳು, ದೇಶದ್ರೋಹಿ (ಅಲ್ಪಸಂಖ್ಯಾತ ಸಮುದಾಯದ ಹೆಸರು ಉಲ್ಲೇಖ) ಬೆಂಬಲವಾಗಿ ನಿಂತಿದ್ದೀರಿ. ಸಂಘಟನೆಯೊಂದರ (ಪಿಎಫ್​​ಐ) ಕಾರ್ಯಕ್ರಮದಲ್ಲಿ ನಮ್ಮ ವೀರ ಸೈನಿಕರ ಬಗ್ಗೆ ಅಗೌರವವಾಗಿ ಮಾತನಾಡಿದ್ದೀರಿ..? ನೀವು ಕ್ಷಮೆ ಕೇಳಬೇಕು. ದಯವಿಟ್ಟು ನೀವು ಎಚ್ಚರಿಕೆಯಿಂದ ಇರಿ ಎಂದು ಕಿಡಿಗೇಡಿಗಳು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ಲಂಡನ್​ ಪ್ರವಾಸದಲ್ಲಿ ಥೇಮ್ಸ್​ ನದಿ ತೀರದಲ್ಲಿರುವ ಬಸವೇಶ್ವರರ ಪ್ರತಿಮೆಗೆ ನಮನ ಸಲ್ಲಿಸಿದ ಅಪ್ಪ-ಮಗ

2015 ರಲ್ಲೂ ಕೂಡ ಇದೇ ರೀತಿ ಬೆದರಿಕೆ ಪತ್ರ ಬರೆಯಲಾಗಿತ್ತು. ಚಿಕ್ಕಮಗಳೂರಿನಿಂದ ಬೆದರಿಕೆ ಪತ್ರ ಬಂದಿತ್ತು. ಆಗ ಬಿ.ಟಿ.ಲಲಿತಾ ನಾಯಕ್ ಸಂಜಯ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಆದರೆ ಆರೋಪಿ ಪತ್ತೆಯಾಗಿರಲಿಲ್ಲ. ಹೀಗಾಗಿ ಕೋರ್ಟ್ ಗೆ ಆರೋಪಿ ಸಿಕ್ಕಿಲ್ಲ ಎಂದು ಸಂಜಯ್ ನಗರ ಪೊಲೀಸರು ಸಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು.

Published On - 10:09 pm, Sat, 2 July 22

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?